ಚಿತ್ರದುರ್ಗ | ಭಾರತ ಸಂವಿಧಾನವು ಬುದ್ದ ಬಸವ ಅಂಬೇಡ್ಕರರ ಪರಿವರ್ತನೆ ಆಶಯದ ಫಲ

Date:

ಭಾರತ ಸಂವಿಧಾನವು ಬುದ್ದ, ಬಸವಣ್ಣ, ಬಾಬಾ ಸಾಹೇಬ್ ಅಂಬೇಡ್ಕರ್ ಮೊದಲಾದ ಸಮಾಜದ ಪರಿವರ್ತನೆಗೆ, ದುಡಿದ ಪರಿವರ್ತನಕಾರರ ಒಟ್ಟು ಆಶಯವಾಗಿದೆ. ಇವರೆಲ್ಲರ ಫಲವೇ ನಮ್ಮ ಈ ದೇಶದ ಸಂವಿಧಾನ ಮತ್ತು ಕಾನೂನಾಗಿದೆ ಎಂದು ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಪರಿವರ್ತನ ವೇದಿಕೆ ಕಾರ್ಯಕ್ರಮದಲ್ಲಿ ವಕೀಲ ವಕೀಲರಾದ ಪಿ. ಎಚ್. ತಿಪ್ಪೇರುದ್ರಪ್ಪ ಅಭಿಪ್ರಾಯಪಟ್ಟರು.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತಮ್ಮೆನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮಾಜ ಪರಿವರ್ತನಾ ವೇದಿಕೆ, ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು “ಭಾರತ ದೇಶವು ಬಹು ವೈವಿಧ್ಯತೆ, ಬಹುಸಂಸ್ಕೃತಿಯನ್ನು ಒಳಗೊಂಡಿರುವ ದೇಶ, ವಿವಿಧತೆಯಲ್ಲಿ ಏಕತೆಯನ್ನು ಮೈಗೂಡಿಸಿಕೊಂಡಿರುವ ದೇಶ, ಬುದ್ದನ ಕರುಣೆ, ಪ್ರೀತಿ ಮೈತ್ರಿ, ಮಮತೆ, ಬಸವಣ್ಣನ ಕಾಯಕ ತತ್ವ, ಸಮಾನತೆಯ ತತ್ವ, ಇವುಗಳ ಐಕ್ಯವೇ ಭಾರತ ದೇಶದ ಸಂವಿಧಾನವಾಗಿದೆ” ಎಂದು ವಕೀಲರಾದ ಪಿ. ಎಚ್. ತಿಪ್ಪೇರುದ್ರಪ್ಪ ತಿಳಿಸಿದರು.

1003328776

ಮುಖ್ಯ ಶಿಕ್ಷಕ ಶಿವಕುಮಾರ್ ಮಾತನಾಡಿ, “ಮಕ್ಕಳು ಕಾನೂನುಗಳನ್ನು ಗೌರವಿಸಬೇಕು. ಕಾನೂನುಗಳನ್ನು ನಾವು ರಕ್ಷಿಸಿದರೆ ಕಾನೂನು ನಮ್ಮನ್ನು ರಕ್ಷಿಸುತ್ತದೆ. ಕಾನೂನುಗಳೇ ನಮ್ಮಯ ಜೀವಾಳವಾಗಿವೆ. ಚೆನ್ನಾಗಿ ಓದಿ ತಂದೆ ತಾಯಿ, ಶಿಕ್ಷಕರಿಗೆ ಒಳ್ಳೆಯ ಕೀರ್ತಿ, ಗೌರವ ತರಬೇಕು, ಆಗ ಸಮಾಜ ನಮ್ಮನ್ನು ಗೌರವದಿಂದ ನೋಡುತ್ತದೆ. ಪೋಷಕರು ಶ್ರಮಪಟ್ಟು ನಮ್ಮನ್ನು ಓದಿಸುತ್ತಿದ್ದಾರೆ, ಹಾಗಾಗಿ ಅವರ ಬೆವರು ಮತ್ತು ಶ್ರಮಕ್ಕೆ ಮೋಸ ಮಾಡದೇ ಚೆನ್ನಾಗಿ ಓದಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003328781

ಅಧ್ಯಕ್ಷ ಮರಿಸ್ವಾಮಿ ನಾಗಸಮುದ್ರ ಮಾತನಾಡಿ, “ಮರಳಿ ಸಮಾಜಕ್ಕೆ ಕೊಡಿ, ಎನ್ನುವ ಸಂದೇಶದ ಸಾಕ್ಷಾತ್ಕಾರಕ್ಕಾಗಿ ಪ್ರತಿ ಶಾಲೆ, ಕಾಲೇಜುಗಳಲ್ಲಿ ನಾವು ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಕಾರ್ಯದರ್ಶಿ ಪರಮೇಶ್ ಮಾತನಾಡಿ, “ಇಂದು ನಾವೆಲ್ಲ ಭಾರತೀಯರು ಘನತೆ ಗೌರವ ನೆಮ್ಮದಿಯ ಬದುಕನ್ನು ಹೊಂದಿದ್ದೇವೆ ಎಂದರೆ ಅದು, ಈ ದೇಶದ ಸಂವಿಧಾನದಿಂದ ಸಾಧ್ಯವಾಗಿದೆ. ಹಾಗಾಗಿ ನಾವೆಲ್ಲರೂ ಇಂತಹ ಸ್ವಾಭಿಮಾನದ ಸ್ವಾವಲಂಬಿ ಬದುಕನ್ನು ಕಟ್ಟಿಕೊಟ್ಟಿರುವ ಈ ದೇಶದ ಸಂವಿಧಾನವನ್ನು ಹೆಚ್ಚು ಹೆಚ್ಚು ಆಧ್ಯಯನ ಮಾಡಬೇಕು. ಹೆಚ್ಚು ಹೆಚ್ಚು ಗೌರವಿಸಬೇಕು. ಪ್ರಜಾಪ್ರಭುತ್ವವೇ ನಮ್ಮ ಧರ್ಮವಾಗಬೇಕು, ಸಂವಿಧಾನವೇ ನಮ್ಮ ಧರ್ಮ ಗ್ರಂಥವಾಗಬೇಕು” ಎಂದು ಆಶಯ ವ್ಯಕ್ತಪಡಿಸಿದರು

1003328791

“ನಾವೆಲ್ಲರೂ ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ಕೊಡಿಸುವುದರ ಮೂಲಕ, ಅವರನ್ನು ಉತ್ತಮ ಪ್ರಜೆಗಳಾಗಿ ರೂಪಿಸಬೇಕಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಜೊತೆಗೆ ಪಡೆದುಕೊಂಡ ಶಿಕ್ಷಣ, ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ವಿನಿಯೋಗವಾಗಬೇಕು. ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿ ಬುದ್ಧ, ಬಸವ, ಅಂಬೇಡ್ಕರ್ ಅವರ ಆದರ್ಶದ ದಾರಿಯಲ್ಲಿ ಬೆಳೆಸಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಗಾಂಧಿ‌ ಹೆಸರು ಬದಲಾವಣೆಯೇ ದೇಶದ ಅಭಿವೃದ್ಧಿ ಎನ್ನುವವರು ಅಧಿಕಾರದಲ್ಲಿ : ಎಬಿ ರಾಮಚಂದ್ರಪ್ಪ

ಈ ಕಾರ್ಯಕ್ರಮದಲ್ಲಿ ಪರಿವರ್ತನ ವೇದಿಕೆಯ ಗೌರವ ಅಧ್ಯಕ್ಷರಾದ ಭಂಗಿ ನಾಗರಾಜ್, ಜಿಲ್ಲಾ ಅಧ್ಯಕ್ಷರಾದ ಎಂ. ರುದ್ರಯ್ಯ, ಪೊಲೀಸ್ ಇಲಾಖೆಯ ತಿಮ್ಮಣ್ಣ, ಎಸ್. ಪರಮೇಶ್ ತಿಪ್ಪೇಸ್ವಾಮಿ ಮುಖ್ಯ ಶಿಕ್ಷಕರಾದ ಶಿವಕುಮಾ‌ರ್, ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಕುಮಾರಸ್ವಾಮಿ, ಶಾಲಾ ಸಿಬ್ಬಂದಿ, ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.‌

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...