ಚಿತ್ರದುರ್ಗ | ಉದ್ದಿಮೆ ರೂಪದಲ್ಲಿ ಹೈನುಗಾರಿಕೆ ಕೈಗೊಳ್ಳಬೇಕು: ಸಹಾಯಕ ನಿರ್ದೇಶಕ

Date:

ಹೈನುಗಾರಿಕೆಯನ್ನು ಲಾಭದಾಯಕವಾಗಿಸಲು ಉದ್ದಿಮೆ ರೂಪದಲ್ಲಿ ಹೈನುಗಾರಿಕೆ ಕೈಗೊಳ್ಳಬೇಕು ಎಂದು ಬಬ್ಬೂರು ಫಾರಂನ ಚಿತ್ರದುರ್ಗ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ಆ‌ರ್ ರಜನಿಕಾಂತ್‌ ರೈತರಿಗೆ ಸಲಹೆ ನೀಡಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಬಬ್ಬೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಲಾಭದಾಯಕ ಹೈನುಗಾರಿಕೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಖರ್ಚು ವೆಚ್ಚವನ್ನು ಲೆಕ್ಕವಿಟ್ಟು ವೈಜ್ಞಾನಿಕವಾಗಿ ಉತ್ತಮ ತಳಿಯ ಹಸು ಎಮ್ಮೆಗಳನ್ನು ಖರೀದಿಸಿ, ಕೊಟ್ಟಿಗೆ ಮತ್ತು ಪೋಷಕಾಂಶ ಮೇವಿನ ನಿರ್ವಹಣೆ ಮಾಡಬೇಕು. ರಾಸುಗಳ ಆರೋಗ್ಯ ನಿರ್ವಹಣೆಯ ಕುರಿತು ರೈತರು ಈ ತರಬೇತಿಯಲ್ಲಿ ನೀಡಲಾಗುವ ಮಾಹಿತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೈನುಗಾರಿಕೆ ಒಂದು ಪರಿಸರ ಸ್ನೇಹಿ ಕೃಷಿ ಉಪಕಸುಬಾಗಿದ್ದು, ರೈತರ ಆರ್ಥಿಕ ಮಟ್ಟ, ಜನರ ಆರೋಗ್ಯ ಸುಧಾರಿಸುವಲ್ಲಿ ಸಹಕಾರಿಯಾಗಿದ್ದು ರೈತರು ಸ್ವಾವಲಂಬನೆಯ ಜೀವನ ನಡೆಸಲು ಅನುಕೂಲಕರವಾಗಿದೆ. ಭಾರತ ದೇಶವು ಇಡೀ ಪ್ರಪಂಚದಲ್ಲಿ ಹಾಲಿನ ಉತ್ಪಾದನೆಯಲ್ಲಿ ಮುಂದಿದೆ. ರಾಜಸ್ಥಾನ, ಉತ್ತರಪ್ರದೇಶ, ಮಧ್ಯಪ್ರದೇಶ, ಆಂಧ್ರಪ್ರದೇಶ, ಗುಜರಾತ್ ರಾಜ್ಯಗಳು ದೇಶದ ಒಟ್ಟು ಹಾಲಿನ ಉತ್ಪಾದನೆಯಲ್ಲಿ ಶೇ.50ಕ್ಕಿಂತ ಹೆಚ್ಚಿನ ಹಾಲು ಉತ್ಪಾದಿಸುತ್ತಿವೆ. ಕರ್ನಾಟಕ ರಾಜ್ಯ 9ನೇ ಸ್ಥಾನದಲ್ಲಿದೆ ಎಂದು ಹೇಳಿದರು.

ರೈತಪರ ಚಿಂತಕ ಹಾಗೂ ನೀರಾವರಿ ಹೋರಾಟಗಾರ ಕಸವನಹಳ್ಳಿ ರಮೇಶ್ ಮಾತನಾಡಿ, ಹಿಂದೆ ಕೃಷಿಯಲ್ಲಿ ಹಸು ಸಾಕಾಣಿಕೆಯು ಅನಿವಾರ್ಯವಾಗಿತ್ತು. ಹೈನುಗಾರಿಕೆಯು ರೈತರ ಜೀವನ ಮಟ್ಟ ಸುಧಾರಿಸಲು ಆಧಾರವಾಗಿದೆ. ಕೋಲಾರದಲ್ಲಿ ಹಸು ಸಾಕಾಣಿಕೆಯಲ್ಲಿ ಅನುಸರಿಸುವ ವೈಜ್ಞಾನಿಕ ಪದ್ಧತಿ ಮತ್ತು ಅಲ್ಲಿನ ಜನರ ಕೃಷಿಯ ಮೇಲಿನ ಬದ್ಧತೆಯನ್ನು ನೋಡಿ ಜಿಲ್ಲೆಯ ರೈತರು
ಅದನ್ನು ಅನುಸರಿಸಬೇಕು ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಕರವೇ ಮುಖಂಡರನ್ನು ಬಿಡುಗಡೆ ಮಾಡುವಂತೆ ಆಗ್ರಹ

ಹಿರಿಯೂರು ಮುಖ್ಯ ಪಶು ವೈದ್ಯಾಧಿಕಾರಿ ಡಾ. ನಾಗರಾಜ್, ಎಮ್ಮೆ ಮತ್ತು ಹಸುಗಳಲ್ಲಿ ಲಾಭದಾಯಕ ಹೈನುಗಾರಿಕೆಗೆ ಉತ್ತಮ ತಳಿ ಆಯ್ಕೆ ಮಾಡಿಕೊಳ್ಳುವ ಹಲವು ಮಾಹಿತಿಯನ್ನು ನೀಡಿದರು. ಗಿಡಕ್ಕೆ ನೀರೆರೆಯುವ ಮೂಲಕ ತರಬೇತಿ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ಪಶುಸಂಗೋಪನಾ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಡಾ.ದೊಡ್ಡಮಲ್ಲಯ್ಯ,ಸಹಾಯಕ ಕೃಷಿ ನಿರ್ದೇಶಕಿ ಉಷಾರಾಣಿ, ಕೃಷಿ ಅಧಿಕಾರಿ ಪವಿತ್ರಾ,ಎಂ.ಜೆ,ಬಬ್ಬೂರು ಕೇಂದ್ರದ ಸಿಬ್ಬಂದಿ, ರೈತರು ಉಪಸ್ಥಿತರಿದ್ದರು. ವಿವಿಧ ಭಾಗದಿಂದ ಆಗಮಿಸಿದ ರೈತ ಪಶು ಸಾಕಣಿಕೆ ಕುರಿತು ತರಬೇತಿ ಪಡೆದುಕೊಂಡರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...