ಚಿತ್ರದುರ್ಗ | ಕುಂಚಿಟಿಗರಿಗೆ ಒಬಿಸಿ ಮೀಸಲಾತಿಗೆ ಆಗ್ರಹ; ಜಯಚಂದ್ರ ವಿರುದ್ಧ ಕಪ್ಪು ಪಟ್ಟಿ ಧರಿಸಿ ‘ಕರಾಳ ದಿನ’ ಆಚರಣೆ

Date:

ಕುಂಚಿಟಿಗ ಸಮುದಾಯಕ್ಕೆ ಒಬಿಸಿ ಮೀಸಲಾತಿ ನೀಡಬೇಕೆಂದು ಹಲವಾರು ವರ್ಷಗಳಿಂದ ಹೋರಾಟಗಳು ನಡೆಯುತ್ತಿವೆ. ಆದರೂ, ಸಮುದಾಯದಿಂದ ಗೆದ್ದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಯಾಗಿರುವ ಟಿ.ಬಿ ಜಯಚಂದ್ರ ಅವರು ಸಮುದಾಯಕ್ಕೆ ಒಬಿಸಿ ಮೀಸಲಾತಿ ಕೊಡಿಸುವ ಯಾವುದೇ ಪ್ರಯತ್ನವನ್ನು ಮಾಡುತ್ತಿಲ್ಲ ಎಂದು ಸಮುದಾಯ ಮುಖಂಡರು ಆರೋಪಿಸಿದ್ದಾರೆ. ಜಯಚಂದ್ರ ವಿರುದ್ಧ ಕಪ್ಪು ಪಟ್ಟಿ ಧರಿಸಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಮುದಾಯದ ಮುಖಂಡ ಕಸವನಹಳ್ಳಿ ರಮೇಶ್, “ಕುಂಚಿಟಿಗರಿಗೆ ಒಬಿಸಿ ಮೀಸಲಾತಿ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕು. ಆದರೆ, ರಾಜಕಾರಣಿಗಳು ಕಳೆದ 27 ವರ್ಷಗಳಿಂದ ವ್ಯವಸ್ಥಿತವಾಗಿ ಕುಂಚಿಟಿಗರಿಗೆ ನಂಬಿಕೆ ದ್ರೋಹ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ಕುಂಚಿಟಿಗ ಕುಲಶಾಸ್ತ್ರ ಅಧ್ಯಯನ ವರದಿಯಲ್ಲಿ ಕುಂಚಿಟಿಗ ಸಮುದಾಯವನ್ನು ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ತಾರತಮ್ಯ ಮಾಡಬಾರದು. ಕುಂಚಿಟಿಗರಿಗೆ ಕೇಂದ್ರ ಒಬಿಸಿ ಮೀಸಲಾತಿ ಕೊಡಬೇಕು ಎಂದು ಶಿಫಾರಸು ಮಾಡಲಾಗಿದೆ. ಕುಂಚಿಟಿಗ ಸಮುದಾಯದ ರಾಜಕಾರಣಿ ಟಿಬಿ ಜಯಚಂದ್ರರಿಗೆ ಮೀಸಲಾತಿ ಬಗ್ಗೆ ಪದೇ-ಪದೇ ಏಳುತ್ತಲೇ ಇದ್ದೇವೆ. ಆದರೆ, ಅವರದೇ ಸರ್ಕಾರದಲ್ಲಿ ಗ್ರಾಮೀಣ ಕುಂಚಿಟಿಗರಿಗೆ ಮಾತ್ರ ಒಬಿಸಿ ಮೀಸಲಾತಿ ಕೊಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳಿಸಿರುವುದು ದುರಂತದ ಸಂಗತಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಕ್ಕಲಿಗ ಸಮುದಾಯಕ್ಕೆ ಸಮನಾದ ಇತರೆ 9 ಜಾತಿಗಳಿಗೆ ಗ್ರಾಮೀಣ ಮತ್ತು ನಗರ ಎಂದು ತಾರತಮ್ಯ ಮಾಡದೆ ಒಬಿಸಿ ಮೀಸಲಾತಿ ಕೊಡಲಾಗಿದೆ. ಆದರೆ, ಕುಂಚಿಟಿಗರಿಗೆ ಮಾತ್ರ ತಾರತಮ್ಯ ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

“ಒಬಿಸಿ ಮೀಸಲಾತಿ ಕೈತಪ್ಪಿ ಕುಂಚಿಟಿಗರಿಗೆ ಇಡಬ್ಲ್ಯೂಎಸ್‌ ಮೀಸಲಾತಿ ಜಾರಿಯಲ್ಲಿದೆ. ಇನ್ನು ಮುಂದೆ ನಗರ ಕುಂಚಿಟಿಗರಿಗೆ ಇಡಬ್ಲ್ಯೂಎಸ್‌ ಮೀಸಲಾತಿ ಕೂಡ ಕೈ ಬಿಟ್ಟು ಹೋಗಿ ಜನರಲ್ ಮೆರಿಟ್‌ನಲ್ಲಿ ಬರುತ್ತಾರೆ. ಟಿ.ಬಿ ಜಯಚಂದ್ರ ಅವರು ಸಮುದಾಯದ ಬಗ್ಗೆ ಪರಿಶೀಲನೆ ನಡೆಸಿ, ಗ್ರಾಮೀಣ ಕುಂಚಿಟಿಗರಿಗೆ ಮಾತ್ರ ಒಬಿಸಿ ನೀಡುವಂತೆ ಹೇಳಿರುವ ಶಿಫಾರಸನ್ನು ಹಿಂಪಡೆದು, ಎಲ್ಲ ಕುಂಚಿಟಿಗರಿಗೂ ಒಬಿಸಿ ಮೀಸಲಾತಿ ಸಿಗುವಂತೆ ಶಿಫಾರಸು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಕುಂಚಿಟಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹುಲಿರಂಗನಾಥ್, ಗೌರವಾಧ್ಯಕ್ಷ ಯಳನಾಡು ಗಿರಿಸ್ವಾಮಿ,ಪ್ರಧಾನ ಕಾರ್ಯದರ್ಶಿ ವಿ ಕುಬೇರಪ್ಪ,ಉಪಾಧ್ಯಕ್ಷ ಮಲ್ಲಪ್ಪನ ಹಳ್ಳಿ ಜೋಗೇಶ್ ದೇವರಕೊಟ್ಟ ರಂಗಸ್ವಾಮಿ, ಹುಚ್ಚವನಹಳ್ಳಿ ಅವಿನಾಶ್,ಪೆಪ್ಸಿ ಹನುಮಂತರಾಯ, ಕುಲಶಾಸ್ತ್ರ ಅಧ್ಯಯನಕಾರ ಎಸ್ ವಿ ರಂಗನಾಥ್,ಆಪ್ಟಿಕಲ್ಸ್ ರಾಜೇಶ್,ಚಿಲ್ಲಳ್ಳಿ ಚಿದಾನಂದಪ್ಪ,ಬೆಳ್ಳುಳ್ಳಿ ಶಿವಣ್ಣಸೇರಿದಂತೆ ಮತ್ತಿತರರ ಕುಂಚಿಟಿಗ ಮುಖಂಡರು ಉಪಸ್ಥಿತರಿದ್ಧರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...