ಚಿತ್ರದುರ್ಗ | ಖಾಸಗಿ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಆಗ್ರಹ.

Date:

ಚಳ್ಳಕೆರೆಯಲ್ಲಿ ಪ್ರಾಣಿಪಕ್ಷಿಗಳು, ಮನುಷ್ಯರಿಗೆ ಬಿಸಿಲು ಜೋರಾಗಿಯೇ ಬಿಸಿ ಮುಟ್ಟಿಸುತ್ತಿದೆ. ಬಿರು ಬಿಸಿಲಿಗೆ ಇಲ್ಲಿನ ಜನ ಹೈರಾಣಾಗಿದ್ದಾರೆ. ಇಂತಹ ಸಮಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕಾದ್ದು ಸ್ಥಳಿಯ ಆಡಳಿತದ ಜವಾಬ್ದಾರಿಯವಾಗಿತ್ತು. ಆದರೆ ಈ ಜವಾಬ್ದಾರಿಯನ್ನೇ ಮರೆತಂತೆ ಸ್ಥಳೀಯ ಆಡಳಿತ ಇದರಿಂದ ವಿಮುಖವಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಬಸ್ ಪ್ರಯಾಣಿಕರು, ಸಾರ್ವಜನಿಕರು ಶಪಿಸುತ್ತಿದ್ದಾರೆ. ಬಿಸಿಲಿನ ಝಳಕ್ಕೆ ಹನಿ ನೀರು ಸಿಕ್ಕರೆ ಸಾಕು ಎಂಬಂತಾಗಿದೆ ಜನರ ಶೋಚನೀಯ ಸ್ಥಿತಿ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯ ಮುಖಂಡ ಭೋಜರಾಜು, “ಇದು ಬೇಸಿಗೆಕಾಲ ಆಗಿರುವುದರಿಂದ ಬಸ್ ಪ್ರಯಾಣಿಕರು ನೀರಿಗಾಗಿ ಪರಿತಪಿಸುವುದನ್ನು ಕಾಣುತ್ತಿದ್ದೇವೆ. ಖಾಸಗಿ ಬಸ್ ನಿಲ್ದಾಣದಲ್ಲಿ ಕನಿಷ್ಠ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಬೇಕೆಂದು ನಗರಸಭೆ ಹಾಗೂ ತಹಶೀಲ್ದಾರ್ ಮತ್ತೊಂದು ಬಾರಿ ಕೇಳಿಕೊಳ್ಳುತ್ತೇವೆ. ಆದಷ್ಟು ಬೇಗ ನೀರಿನ ವ್ಯವಸ್ಥೆ ಮಾಡಬೇಕು” ಎಂದು ಒತ್ತಾಯಿಸಿದರು.

1001723811
ಚಳ್ಳಕೆರೆ ಖಾಸಗಿ ಬಸ್ ನಿಲ್ದಾಣ

ಈ ಬಗ್ಗೆ ಸ್ಥಳೀಯರಾದ ಅವಿನಾಶ್, “ಖಾಸಗಿ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯಗಳಿಲ್ಲ. ಈ ಬೇಸಿಗೆಯಲ್ಲಿ ಬಿಸಿಲಿನ ಅಲೆಯನ್ನು ಪರಿಗಣಿಸಿ, ದಯವಿಟ್ಟು ಬಸ್ ಪ್ರಯಾಣಿಕರಿಗಾದರೂ ಸ್ವಲ್ಪ ಕುಡಿಯುವ ನೀರು ಒದಗಿಸಬೇಕು. ಸಾರ್ವಜನಿಕರು ಕನಿಷ್ಠ ಮೂಲಭೂತ ಸೌಲಭ್ಯಗಳನ್ನೂ ಕೇಳಬೇಕೇ? ಮನವಿ ಪತ್ರಗಳನ್ನು ಸಲ್ಲಿಸಿದ ನಂತರವೂ ಕೂಡ ಯಾರೂ ಕಾಳಜಿ ವಹಿಸುತ್ತಿಲ್ಲ ಮತ್ತು ಕ್ರಮ ಕೈಗೊಳ್ಳುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಜಾತಿ ತಾರತಮ್ಯ, ಎಸ್ಡಿಎಂಸಿ ಅಧ್ಯಕ್ಷನಿಂದ ಮುಖ್ಯ ಶಿಕ್ಷಕನ ವಿರುದ್ಧ ದೂರು, ಕ್ರಮಕ್ಕೆ ಆಗ್ರಹ.

ಈ ಬಗ್ಗೆ ಚಳ್ಳಕೆರೆಯ ನಾಗರೀಕರು ಮತ್ತು ಇಲ್ಲಿ ಬಂದು ಪ್ರಯಾಣಿಸುವ ಪ್ರಯಾಣಿಕರು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಮೂಲಕ ಆಕ್ರೋಶ ಹೊರಹಾಕುತ್ತಿದ್ದು, ಸ್ಥಳೀಯ ಆಡಳಿತ ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು
ಒತ್ತಾಯಿಸಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...