ಚಿತ್ರದುರ್ಗ| ಕಳಪೆ ಬೀಜ ರಸಗೊಬ್ಬರ ವಿತರಣೆ ರೈತರ ಬಗ್ಗೆ ನಿರ್ಲಕ್ಷ್ಯ; ಜಂಟಿ ನಿರ್ದೇಶಕರ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ

Date:

ಚಿತ್ರದುರ್ಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗಳಿಂದ ರೈತರ ಬಗ್ಗೆ ನಿರ್ಲಕ್ಷ್ಯ ವರ್ತನೆ ಮತ್ತು ಕಳಪೆ ಬೀಜ ರಸಗೊಬ್ಬರ ವಿತರಣೆ ಬಗ್ಗೆ ದೂರು ನೀಡಲು ಕಚೇರಿಗೆ ಹೋದಾಗ ಅಸಭ್ಯವಾಗಿ ವರ್ತಿಸಿದ್ದು, ಇವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಚಿತ್ರದುರ್ಗ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

“ಕಳೆದ 19, ಜೂನ್-2025 ರಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಮುಂದೆ ಕೃಷಿ ಇಲಾಖೆಯಿಂದ ವಿತರಿಸಿದ್ದ ಕಳಪೆ ಬೀಜ ರಸಗೊಬ್ಬರ ವಿತರಣೆ ಚಳುವಳಿಯನ್ನು ಮಾಡಲಾಗಿತ್ತು.‌ ಆದರೆ ಕೆಲವು ಸಂಘಟನೆಗಳು, ಚಳುವಳಿ ಮಾಡಿದವರನ್ನು ಗೂಂಡಾಗಳು ಎಂದು ಹೇಳಿದವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಮುಖಂಡರು ಒತ್ತಾಯಿಸಿದರು.

1002210678

ಜಂಟಿ ಕೃಷಿ ನಿರ್ದೇಶಕರು ಜಿಲ್ಲೆಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ಒಂದೇ ಒಂದು ಗೊಬ್ಬರದ ಅಂಗಡಿಗಳಿಗೆ ಹೋಗಿ ಪರಿಶೀಲನೆ ಮಾಡಿಲ್ಲ. ಗೊಬ್ಬರ ಅಂಗಡಿಗಳ ಜೊತೆ ಒಡಂಬಡಿಕೆ ಮಾಡಿಕೊಂಡು ರೈತರನ್ನು ಅಲೆದಾಡಿಸುತ್ತಿದ್ದಾರೆ ಎಂದು ಬೇಡ ರೆಡ್ಡಿಹಳ್ಳಿ ಬಸವ ರೆಡ್ಡಿ ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಆಶ್ರಮದ ಕಾರ್ಯಕ್ರಮಕ್ಕೆ ಟ್ರಸ್ಟ್ ಸದಸ್ಯರು ಭಾಗವಹಿಸಲು ಆಶ್ರಮ ರಕ್ಷಣಾ ಸಮಿತಿ ಆಕ್ಷೇಪ

ಸಭೆಯಲ್ಲಿ ಮುಖಂಡರಾದ ಜಿಲ್ಲಾಧ್ಯಕ್ಷರಾದ ಡಿ ಎಸ್ ಹಳ್ಳಿ ಮಲ್ಲಿಕಾರ್ಜುನ್, ಕಾರ್ಯದರ್ಶಿಗಳಾದ ಮರ್ಲ್ಲಹಳ್ಳಿ ರವಿಕುಮಾರ್, ಬಾಗೇನಾಳ್ ತಿಪ್ಪೇಸ್ವಾಮಿ, ಎಸ್ ಆರ್ ತಿಮ್ಮಯ್ಯ, ಭದ್ರಾ ಮೇಲ್ದಂಡೆ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ನಾಗರಾಜ್, ಮುದ್ದಾಪುರ ನಾಗಣ್ಣ, ಎಲ್ ಬಸವರಾಜಪ್ಪ, ಹಳಿಯೂರು ಸಿದ್ದಣ್ಣ, ರಾಮರೆಡ್ಡಿ, ರಾಜಣ್ಣ, ಬಾಗೇನಾಳ್ ಬಸಪ್ಪ, ಲಕ್ಷ್ಮಿಕಾಂತ್, ಸೂರಪ್ಪ ನಾಯಕ, ಟಿ ವೆಂಕಟೇಶ್, ತಿಮ್ಮೇಶ್, ತಿರುಮಲಾಪುರ ಸಿದ್ದರಾಮಣ್ಣ, ಆಡನೂರು ಶಿವಕುಮಾರ್, ವೀರಣ್ಣ ಹೊಸಳ್ಳಿ ಮುಂತಾದ ಮುಖಂಡರುಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...