ಚಿತ್ರದುರ್ಗ | ಶಾಲಾ ಮಕ್ಕಳ ಜಿಲ್ಲಾ ಮಟ್ಟದ ಕ್ರೀಡಾಕೂಟ

Date:

ಕಲಿಕೆಯಲ್ಲಿ ಓದಿನ ಜೊತೆಗೆ ಕ್ರೀಡೆಯೂ ಕೂಡ ಒಂದು ಭಾಗ. ಎಲ್ಲ ಮಕ್ಕಳು ಕ್ರೀಡಾಸಕ್ತಿ ಬೆಳೆಸಿಕೊಂಡು ಕ್ರೀಡೆಗಳಲ್ಲೂ ಸಾಧನೆ ಮಾಡಬೇಕು ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ ಹೇಳಿದ್ದಾರೆ.

ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.”ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯ ಅಲ್ಲ. ಪಾಲ್ಗೊಳ್ಳುವಿಕೆ ಮುಖ್ಯ. ಸದಾ ಪಾಲ್ಗೊಳುವಿಕೆಯಿಂದ ಒಮ್ಮೆ ಸೋತಂತಹ ವ್ಯಕ್ತಿ ಯಾವುದೇ ಹಂತದಲ್ಲೂ ಸಹ ಗೆಲುವಿಗಾಗಿ ಸೆಣಸುತ್ತಾರೆ. ಇದರಿಂದ ಹೆಚ್ಚಿನ ಸಾಧನೆ ಮಾಡಲು ಸಾಧ್ಯವಿದೆ” ಎಂದರು.

“ದೈಹಿಕವಾಗಿ ಸದೃಢರಾಗಿದ್ದ ವ್ಯಕ್ತಿ ಮಾನಸಿಕವಾಗಿಯೂ ಸದೃಢರಾಗಿರಲು ಸಾಧ್ಯ. ಆದರೆ, ಇಂದು ಹೆಚ್ಚಿನ ಮಕ್ಕಳು ಮೊಬೈಲ್‌ಗಳ ಮೊರೆ ಹೋಗಿದ್ದಾರೆ. ಇದು ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಆದ್ದರಿಂದ ಡಿಡಿಪಿಐ ಹಾಗು ಶಾಲಾ ಮುಖ್ಯಸ್ಥರು ಎಲ್ಲಾ ಶಾಲೆಗಳಲ್ಲೂ ಕ್ರೀಡೆಗೆ ಹೆಚ್ಚಿನ ಒತ್ತು ನೀಡಬೇಕು” ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಿತ್ರದುರ್ಗ ಜಿಲ್ಲೆ 10ನೇ ತರಗತಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯದಲ್ಲೇ ಮೊದಲನೆ ಸ್ಥಾನದಲ್ಲಿದೆ. ಅದೇ ರೀತಿ ಕ್ರೀಡೆಯಲ್ಲೂ ಕೂಡ ನಮ್ಮ ಜಿಲ್ಲೆ ಮೊದಲ ಸ್ಥಾನದಲ್ಲಿ ಇರಬೇಕು. ಇದಕ್ಕೆ ಅನುಗುಣವಾಗಿ ದೈಹಿಕ ಶಿಕ್ಷಕರು ಕ್ರೀಡಾಪಟುಗಳನ್ನು ಸನ್ನದ್ಧರಾನ್ನಾಗಿ ಮಾಡಬೇಕು” ಎಂದು ಸೂಚಿಸಿದರು.

ಡಿಡಿಪಿಐ ರವಿಶಂಕರ್ ರೆಡ್ಡಿ ಮಾತನಾಡಿ, ಜಿಲ್ಲೆಯ ಮಕ್ಕಳು ಓದಿನ ಜೊತೆಗೆ ಕ್ರೀಡೆಗಳಲ್ಲೂ ಸಹ ಅತ್ಯುನ್ನತವಾದ ಪ್ರತಿಭೆಯನ್ನು ಹೊಂದಿದ್ದಾರೆ. ಈ ಪ್ರತಿಭೆ ಇದೇ ರೀತಿ ಮುಂದುವರೆಯಬೇಕಾದರೆ ಪೋಷಕರು, ಶಿಕ್ಷಕರ ಪ್ರೋತ್ಸಾಹ ಅಗತ್ಯವಾಗಿದೆ. ಆದ್ದರಿಂದ ಮಕ್ಕಳನ್ನು ಯಾವುದೇ ಹಂತದಲ್ಲೂ ಎದೆಗುಂದುವಂತೆ ಮಾಡಬಾರದು. ಬದಲಾಗಿ ಅವರಿಗೆ ಉತ್ತೇಜನ ನೀಡಬೇಕು ಎಂದು ಕರೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...