ಚಿತ್ರದುರ್ಗ | ಇಳಿವಯಸ್ಸಿನ ಸೂಲಗಿತ್ತಿ ತಿಮ್ಮಕ್ಕ, ಗೋಪಾಲಕಿ ಪಾರ್ವತಮ್ಮಗೆ ಶ್ರೀಶಾರದಾಶ್ರಮದಿಂದ ಗೌರವ.

Date:

ಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆಗಳಿಲ್ಲದ ಐವತ್ತು ಅರವತ್ತು ವರ್ಷಗಳ ಹಿಂದಿನಿಂದಲೂ ಹಳ್ಳಿಗಳಲ್ಲಿ ಗರ್ಭಿಣಿ ಸ್ತ್ರೀಯರ ಹೆರಿಗೆ ಮಾಡಿಸುತ್ತಿದ್ದ ಕಾಲುವೆಹಳ್ಳಿಯ ಸೂಲಗಿತ್ತಿ ತಳುಕಿನ ತಿಮ್ಮಕ್ಕ ಮತ್ತು ನೂರಾರು ದನಗಳನ್ನು ಸಾಕುವ ಗೋಪಾಲಕಿ ಪಾರ್ವತಮ್ಮನವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶ್ರೀಶಾರದಾಶ್ರಮದ ಸದಸ್ಯರು ಗೌರವಿಸಿ ಸನ್ಮಾನಿಸಿದರು.

ಚಳ್ಳಕೆರೆ ತಾಲೂಕಿನ ಕಾಲುವೆಹಳ್ಳಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾವಿರಾರು ಗರ್ಭಿಣಿ ಸ್ತ್ರೀಯರಿಗೆ ಉಚಿತವಾಗಿ ಹೆರಿಗೆ ಮಾಡಿಸಿರುವ ಸೂಲಗಿತ್ತಿ ತಳುಕಿನ ತಿಮ್ಮಕ್ಕ ಮತ್ತು ನೂರಾರು ದೇಸಿ ಗೋವುಗಳನ್ನು ನಿಸ್ವಾರ್ಥವಾಗಿ ಪಾಲನೆ-ಪೋಷಣೆ ಮಾಡುತ್ತಿರುವ ಪಾರ್ವತಮ್ಮನವರಿಗೆ ಚಳ್ಳಕೆರೆಯ ಶ್ರೀಶಾರದಾಶ್ರಮದವರು ಆಹಾರ ಸಾಮಗ್ರಿ, ಗೃಹ ಬಳಕೆಯ ವಸ್ತುಗಳನ್ನು ನೀಡಿ ಗೌರವಧನ ವಿತರಿಸಿ ಸನ್ಮಾನಿಸಲಾಯಿತು.

1002014243

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ, ರೈತ ಮುಖಂಡ ಕೆ.ಪಿ.ಭೂತಯ್ಯ “ಕಾಲುವೆಹಳ್ಳಿಯ ಮಹಿಳೆಯರ ನಿಸ್ವಾರ್ಥ ಸೇವೆಯನ್ನು ಶ್ರೀಶಾರದಾಶ್ರಮದ ಸದ್ಭಕ್ತರು ಗುರುತಿಸಿ ಸನ್ಮಾನಿಸುತ್ತಿರುವುದು ಶ್ಲಾಘನೀಯ ಸೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಜೆ.ಹೆಚ್ ರಾಘವೇಂದ್ರ ಮಾತನಾಡಿ “ಕಾಲುವೆಹಳ್ಳಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಐವತ್ತು ವರ್ಷಗಳ ಕಾಲ ನಿಸ್ವಾರ್ಥವಾಗಿ ಸಾವಿರಾರು ಗರ್ಭಿಣಿ ಸ್ತ್ರೀಯರಿಗೆ ಉಚಿತವಾಗಿ ಹೆರಿಗೆ ಮಾಡಿಸಿರುವ ಸೂಲಗಿತ್ತಿ ತಳುಕಿನ ತಿಮ್ಮಕ್ಕ ಅವರು ಗೃಹಲಕ್ಷೀ ಮತ್ತು ವೃದ್ಧಾಪ್ಯ ವೇತನದಿಂದ ಬರುವ ಹಣದಿಂದ ಜೀವನ ಸಾಗಿಸುತ್ತಿದ್ದು ಅವರಿಗೆ ಸರಿಯಾದ ಮನೆ, ಸೂರಿನ ವ್ಯವಸ್ಥೆಯಿಲ್ಲ. ಅವರಿಗೆ ತುರ್ತಾಗಿ ಮನೆ ನಿರ್ಮಿಸುವ ಅಗತ್ಯವಿದ್ದು ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿಯ ಆಡಳಿತ ಗಮನ ಹರಿಸಿ ಮನೆ ನಿರ್ಮಿಸಿಕೊಡಬೇಕು” ಎಂದು ಮನವಿ ಮಾಡಿದರು.

ಗ್ರಾಮದ ಹಿರಿಯ ಮುಖಂಡ ನೀಲಕಂಠ ಶೆಟ್ಟಿ ಮಾತನಾಡಿ “ಗೋಪಾಲಕಿ ಪಾರ್ವತಮ್ಮನವರ ಗೋಸೇವೆಯನ್ನು ಕೊಂಡಾಡಿ ಆಕೆಯ ಸೇವೆಯನ್ನು ಶ್ರೀಶಾರದಾಶ್ರಮದ ಸದ್ಭಕ್ತರು ಗುರುತಿಸಿದ್ದಾರೆ. ಅವರನ್ನು , ತಿಮ್ಮಕ್ಕನವರನ್ನು ಗೌರವಿಸುತ್ತಿರುವುದು ನಮ್ಮ ಊರಿಗೆ ಹೆಮ್ಮೆಯ ವಿಷಯ” ಎಂದು ಶ್ಲಾಘಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪ್ರಾಥಮಿಕ ಕೃಷಿ ಸಹಕಾರ ಸಂಘದಲ್ಲಿ ಅವ್ಯವಹಾರ, ತನಿಖೆಗೆ ಸಂಘದ ನಿರ್ದೇಶಕರ ಆಗ್ರಹ.

ಈ ಸಂದರ್ಭದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರು ಸೂಲಗಿತ್ತಿ ತಳುಕಿನ ತಿಮ್ಮಕ್ಕ, ಗೋಪಾಲಕಿ ಪಾರ್ವತಮ್ಮ ಹಾಗೂ ತಿಮ್ಮಕ್ಕ ಅವರನ್ನು ನೋಡಿಕೊಳ್ಳುತ್ತಿರುವ ಪಾಲಕ್ಕರನ್ನು ಸನ್ಮಾಸಿ ಗೌರವಧನ ಮತ್ತು ಆಹಾರ ಧಾನ್ಯಗಳನ್ನು ವಿತರಿಸಲಾಯಿತು. ಗೋಪಾಲಕಿ ಪಾರ್ವತಮ್ಮನವರ ಗೋವುಗಳಿಗೆ ಗೋಪೂಜೆ ನೆಡೆಸಿದ ಇಂಡಿ ಹಾಗೂ ಬಾಳೆ ಹಣ್ಣು ವಿತರಿಸುವ ಮೂಲಕ ಗೋಸೇವೆ ಮಾಡಿದರು.

1002014204

ಕಾರ್ಯಕ್ರಮದಲ್ಲಿ ಸಂಘಟಕ-ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ, ಶಿಲ್ಪಾ ರಮೇಶ್, ಆಶಾ ಅನುಪ್, ಶುಭ ಸೋಮಶೇಖರ್, ಮೋಹಿನಿ ಸತ್ಯನಾರಾಯಣ, ರುಕ್ಮಿಣಿ, ರಂಗಸ್ವಾಮಿ, ಡಿ.ಆರ್ ತಿಮ್ಮಣ್ಣ, ಲಿಂಗದಹಳ್ಳಿ ಪಾಲಣ್ಣ, ಕೆ.ಜಿ.ರಾಮಣ್ಣ, ಜಿ.ಕಾಂತಣ್ಣ, ಲೋಕೇಶ್ , ಕೆ.ಓ.ಪಾಲಣ್ಣ, ಲೋಕೇಶ್ ಪೂಜಾರಿ, ರಾಜಣ್ಣ ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...