ಚಿತ್ರದುರ್ಗ | ಅಡಿಕೆ ಶೆಡ್ ನಿರ್ಮಾಣ ವೇಳೆ ವಿದ್ಯುತ್ ಸ್ಪರ್ಶ; ರೈತ ಕಾರ್ಮಿಕರು ಸೇರಿ ಮೂವರ ದುರ್ಮರಣ

Date:

ಅಡಿಕೆ ಶೆಡ್ ನಿರ್ಮಾಣದ ವೇಳೆ ಕಬ್ಬಿಣದ ತುಂಡಿಗೆ ಸ್ಥಳದ ಪಕ್ಕದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿ ತಗುಲಿ ಶೆಡ್ ನಿರ್ಮಾಣದ ವೇಳೆ ಮಾಲೀಕ, ಕಾರ್ಮಿಕರಿಬ್ಬರೂ ಸೇರಿ ಅಸ್ವಸ್ಥಗೊಂಡಿದ್ದ ಮೂವರು ಸಾವನ್ನಪ್ಪಿರುವ ಅವಘಡ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕಾಳಘಟ್ಟದಲ್ಲಿ ನಡೆದಿದೆ.

ಮೂಲತಃ ಹೊಳಲ್ಕೆರೆ ತಾಲೂಕಿನ ಗ್ಯಾರೇಹಳ್ಳಿಯ ನಿವಾಸಿಯಾದ ಶ್ರೀನಿವಾಸ್ (35), ದಾವಣಗೆರೆ ಮೂಲದ ಕಾರ್ಮಿಕ ನಜೀರ್ (30), ಫಾರೂಕ್ (30) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.‌


“ಕಾಳಗಟ್ಟದಿಂದ ಸುಮಾರು ಹತ್ತು ಕಿಲೋಮೀಟರ್ ದೂರದ ಗ್ಯಾರೇಹಳ್ಳಿಯವರಾದ ಶ್ರೀನಿವಾಸರ ತಂದೆ ಕಾಳಗಟ್ಟದಲ್ಲಿ ಜಮೀನು ಹೊಂದಿದ್ದರು.‌ ಕೃಷಿ, ಅಡಿಕೆ ಕೆಲಸಕ್ಕೆ ಸ್ಥಳ ಇಲ್ಲದೆ ಹಿನ್ನೆಲೆಯಲ್ಲಿ ಕಾಳಗಟ್ಟ ಗ್ರಾಮದಲ್ಲಿ ಶೆಡ್ ನಿರ್ಮಾಣಕ್ಕೆ ಮುಂದಾಗಿದ್ದರು. ಸ್ಥಳದ ಹತ್ತಿರದಲ್ಲೇ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ವಿದ್ಯುತ್ ಯೋಜನೆಯ ತಂತಿ ಹಾದುಹೋಗಿದ್ದು, ತೋಟದಲ್ಲಿ ಅಡಕೆ ಶೇಡ್ ನಿರ್ಮಾಣ ವೇಳೆ ಈ ದುರಂತ ಸಂಭವಿಸಿದೆ” ಎಂದು ಗ್ರಾಮದ ಯುವಕ ಕರಿಯಪ್ಪ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಬ್ಬಿಣದ ಕಂಬ ನೆಡುವ ವೇಳೆ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದ್ದು, ತಕ್ಷಣವೇ ತೀವ್ರ ಅಸ್ವಸ್ಥಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. 

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಯೂರಿಯಾ ರಸಗೊಬ್ಬರ ಅಭಾವ; ರೈತರ ಬೆಳೆಗಳಿಗೆ ಅಗತ್ಯ ಗೊಬ್ಬರ ಒದಗಿಸಲು ರೈತ ಸಂಘ ಆಗ್ರಹ

“ಕಾಳಗಟ್ಟ ಗ್ರಾಮದ ವಿದ್ಯುತ್ ಅವಘಡಕ್ಕೆ ತುತ್ತಾಗಿ ಅಸ್ವಸ್ಥಗೊಂಡಿದ್ದ ಮೂವರು ಮೃತಪಟ್ಟಿದ್ದಾರೆ. ಇದಕ್ಕೆ ಸಂಭಂದಿಸಿದಂತೆ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ. ತನಿಖೆ ನಡೆಸಲಾಗುತ್ತಿದೆ” ಎಂದು ಚಿಕ್ಕಜಾಜೂರು ಠಾಣೆಯ ಉಪನಿರೀಕ್ಷಕರಾದ ನೇತ್ರಾವತಿ ದೃಢಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...