ಚಿತ್ರದುರ್ಗ | ಕುಲಶಾಸ್ತ್ರ ಅಧ್ಯಯನ ವರದಿ; ಯಥಾವತ್ ಜಾರಿಗೆ ಕುಂಚಿಟಿಗರ ಆಗ್ರಹ

Date:

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘ ಮತ್ತು ಕರ್ನಾಟಕ ರಾಜ್ಯ ಕುಂಚಿಟಿಗರ ಒಕ್ಕೂಟದ ಕಾರ್ಯಕರ್ತರು ಸೆಪ್ಟೆಂಬರ್ 6ರ ಬೆಳಿಗ್ಗೆಯಿಂದ ಸಂಜೆವರೆಗೆ ಹಿರಿಯೂರು ತಾಲೂಕು ಕಚೇರಿ ಮುಂಭಾಗ ಗಾಂಧೀವಾದಿ ಕಸವನಹಳ್ಳಿ ರಮೇಶ್ ನೇತೃತ್ವದಲ್ಲಿ ಸಮುದಾಯಕ್ಕಾಗಿ ಒಂದು ದಿನ ಕುಂಚಿಟಿಗ ಕುಲಶಾಸ್ತ್ರ ಅಧ್ಯಯನ ವರದಿ ಯಥಾವತ್ ಜಾರಿಗಾಗಿ ಹಕ್ಕೊತ್ತಾಯ ಮಾಡುವ ಉಪವಾಸ ಸತ್ಯಾಗ್ರಹಕ್ಕೆ ಕುಂಚಿಟಿಗ ಕುಲಶಾಸ್ತ್ರ ಅಧ್ಯಯನಕಾರ ಎಸ್ ವಿ ರಂಗನಾಥ್ ಚಾಲನೆ ನೀಡಿದರು.

ಕುಂಚಿಟಿಗ ಕುಲಶಾಸ್ತ್ರ ಅಧ್ಯಯನ ವರದಿ ಪ್ರಕಾರ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ, ರಾಜ್ಯ ಸರ್ಕಾರದ ಪ್ರವರ್ಗ-1ರಲ್ಲಿ ಮೀಸಲಾತಿ, ಕುಂಚಿಟಿಗರ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂಬ ಬೇಡಿಕೆ ಇಟ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಕಚೇರಿ ಎದುರು ಸತ್ಯಾಗ್ರಹ ನಡೆಸಿದರು.

“ಉಪವಾಸ ಸತ್ಯಾಗ್ರಹಕ್ಕೆ ಚಿತ್ರದುರ್ಗ ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ, ಮಾಜಿ ಸಂಸದ ಚಂದ್ರಪ್ಪ ಆಗಮಿಸಿ ಬೆಂಬಲ ಸೂಚಿಸಿದರು. ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಆಗಮಿಸಿ ಬೆಂಬಲ ನೀಡಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಕುಂಚಿಟಿಗ ಕುಲಶಾಸ್ತ್ರ ಅಧ್ಯಯನ ವರದಿ ಯಥಾವತ್ ಜಾರಿಗಾಗಿ ಸ್ಥಳದಲ್ಲಿಯೇ ಪತ್ರ ಬರೆದು ಬೆಂಬಲ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಂಚಿಟಿಗ ಸಮಾಜದ ಒಬಿಸಿ ಪ್ರಾತಿನಿಧ್ಯಕ್ಕೆ ಸತ್ಯಾಗ್ರಹ ನಡೆಸುತ್ತಿದ್ದು, ಸರ್ಕಾರ ಗಮನಹರಿಸಿ ಸಮಾಜಕ್ಕೆ ನ್ಯಾಯ ನೀಡಬೇಕು. ಈ ಹೋರಾಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ಸಕಾರಾತ್ಮಕವಾಗಿ ಸ್ಪಂದಿಸಿ ಮನವಿ ಪರಿಗಣಿಸುವುದಾಗಿ ತಿಳಿಸಿದ್ದಾರೆ. ಮಾಜಿ ಸಂಸದ ಚಂದ್ರಪ್ಪ,ಮಾಜಿ ಶಾಸಕ ತಿಪ್ಪಾರೆಡ್ಡಿ ಕೂಡ ಬೆಂಬಲ ಸೂಚಿಸಿದ್ದಾರೆ” ಎಂದು ಕುಂಚಿಟಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಂಗನಾಥ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ರೈತರ ಸಾಲ ಮನ್ನಾ ಮಾಡಿದರೆ ಮಾತ್ರ ಮೋದಿ ಮತ್ತೆ ಪ್ರಧಾನಿ ಆಗಲು ಸಾಧ್ಯ: ಉಡಚಪ್ಪ ಮಾಳಗಿ

ಕುಂಚಿಟಿಗರ ರಾಜ್ಯ ಒಕ್ಕೂಟದ ಅಧ್ಯಕ್ಷ ಕಸವನಹಳ್ಳಿ ರಮೇಶ್ ಮತ್ತು ಸಂಗಡಿಗರು ಉಪವಾಸ ಸತ್ಯಾಗ್ರಹ ನಡೆಸಿದರು. ಈ ಸಂದರ್ಭದಲ್ಲಿ ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಂಗನಾಥ್ ತಿಳಿಸಿದ್ದಾರೆ

ಪ್ರಧಾನ ಕಾರ್ಯದರ್ಶಿ ವಿ.ಕುಭೇರಪ್ಪ, ಗೌರವಾಧ್ಯಕ್ಷ ಯಳನಾಡು ಗಿರಿಸ್ವಾಮಿ, ನಗರಸಭೆ ಸದಸ್ಯರುಗಳಾದ ಪಾಂಡುರಂಗ ವಿಠಲ, ಈಶ್ವರ್ ದಗ್ಗೆ, ಉಚ್ಚವ್ವನಹಳ್ಳಿ ಅವಿನಾಶ, ಆಪ್ಟಿಕಲ್ಸ್ ರಾಜೇಶ್, ಜಯಪ್ರಕಾಶ, ಕಾತ್ರಿಕೇನಹಳ್ಳಿ ಶ್ರೀನಿವಾಸ ಮತ್ತು ಮಂಜುನಾಥ್ ದಿಂಡಾವರ, ಶಶಿಕಲಾ, ಕ್ಯಾದಿಗುಂಟೆ ಜಯರಾಯ್ಯ, ಹುಣಿಸೆಹಳ್ಳಿ ನಾಗರಾಜ, ದ್ಯಾಮಣ್ಣ, ಪೆಪ್ಸಿ ಹನುಮಂತರಾಯ, ಆಲೂರು ನರೇಂದ್ರ, ಹೊಸಯಳನಾಡು ಗ್ರಾ ಪಂ ಅಧ್ಯಕ್ಷೆ ಹೇಮಲತ, ಮಲ್ಲಪ್ಪನಹಳ್ಳಿ ಜೋಗೇಶ್, ದೇವರಕೊಟ್ಟ ರಂಗಸ್ವಾಮಿ ಸೇರಿದಂತೆ ಇತರರು ಇದ್ಧರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...