ಚಿತ್ರದುರ್ಗ | ಫೇಸ್ಬುಕ್ ನಲ್ಲಿ ಗಣೇಶ ವಿಸರ್ಜನೆಗೆ ಡಿಜೆ ಬಳಕೆ ಸುಳ್ಳು ಸುದ್ದಿ: ಪ್ರಕರಣ ದಾಖಲಿಸಿದ ಪೊಲೀಸರು

Date:

ಅತಿಯಾದ ಉನ್ಮಾದದಿಂದ ಸಾರ್ವಜನಿಕ ಉತ್ಸವಗಳಲ್ಲಿ ಅಷ್ಟು ಡಿಜೆ, ಇಷ್ಟು ಡಿಜೆ ಬರಲಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್ ಹಾಕಿದರೆ ಜೋಕೆ! ಕೇಸು ಬೀಳಲಿದೆ ಎಚ್ಚರ! ರಾಜ್ಯದಾದ್ಯಂತ ಡಿಜೆ ನಿಷೇಧ ಸದ್ದು ಮಾಡುತ್ತಿರುವ ಬೆನ್ನಲ್ಲೇ ಚಿತ್ರದುರ್ಗ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ ಶೋಭಾಯಾತ್ರೆಯಲ್ಲಿ ಒಂಬತ್ತು ಡಿಜೆ (DJ) ಭಾಗವಹಿಸಲಿವೆ ಎಂದು ಸಾಮಾಜಿಕ ಜಾಲತಾಣ ಫೇಸ್ಬುಕ್ ಪೋಸ್ಟ್ ನಲ್ಲಿ ಸುಳ್ಳುಸುದ್ದಿ ಹಬ್ಬಿಸುತ್ತಿದ್ದ ವ್ಯಕ್ತಿಯ ವಿರುದ್ದ ಮೊಳಕಾಲ್ಮೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.‌

ಆ‌ರ್.ಮಂಜುನಾಥ ಅಲಿಯಾಸ್ ಮಂಜ ಎನ್ನುವ ವ್ಯಕ್ತಿಯ ವಿರುದ್ಧ ಮೊಳಕಾಲ್ಮೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತ ‘manju achar prince’ ಎಂಬ ಫೇಸ್ಬುಕ್ ಐಡಿಯಲ್ಲಿ 2025 ಸೆಪ್ಟೆಂಬರ್ 08ರಂದು ಬೆಳಗ್ಗೆ 11 ಗಂಟೆಯ ಸಮಯದಲ್ಲಿ “ಇತಿಹಾಸ ಸೃಷ್ಟಿಸಲು ಸಿದ್ಧವಾಗಿದೆ ಚಿತ್ರದುರ್ಗ ಬೃಹತ್ ಶೋಭಾಯಾತ್ರೆ, 2025 ಸೆ. 13ಕ್ಕೆ ಶನಿವಾರ ಪ್ರಪಥಮ ಬಾರಿ ಚಿತ್ರದುರ್ಗದ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆಗೆ ಘರ್ಜಿಸಲು ಮುಂಬೈ, ಬೆಳಗಾವಿ, ಹುಬ್ಬಳ್ಳಿ, ಹಾಗೂ ಇನ್ನೂ ಹೆಸರಾಂತ 9 DJ ಗಳು ಭಾಗವಹಿಸಲಿವೆ ಎಂದು ಪೋಸ್ಟ್ ಹಾಕಿದ್ದು, ಸಾರ್ವಜನಿಕವಾಗಿ ‌ಸುಳ್ಳು ಸುದ್ದಿ ಮತ್ತು ಡಿಜೆ ಬಳಕೆ ಪ್ರಚೋದನೆಗೆ ಕುಮ್ಮಕ್ಕು ನೀಡಿದಂತಾಗಿದೆ ಎಂದು ಆರೋಪಿಸಿ ಕೇಸು ದಾಖಲಾಗಿದೆ.

1002659210
Oplus_131072

ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವಂತೆ ಪ್ರಚೋದನಾಕಾರಿ ಪೋಸ್ಟ್ ಮಾಡಿರುವುದರಿಂದ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತೆ ಕ್ರಮವಾಗಿ ಸದರಿ ಮಂಜುನಾಥನ ವಿರುದ್ಧ ಮೊಳಕಾಲೂರು ಪೊಲೀಸ್ ಠಾಣೆಯಲ್ಲಿ ಪಿಎಆರ್ ನಂಬರ್ 25/2025 ಕಲಂ.126(2)ಬಿ.ಎನ್.ಎಸ್.ಎಸ್-2023 ರೀತ್ಯಾ ಪ್ರಕರಣ ದಾಖಲಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬೀದಿ ನಾಯಿ ದಾಳಿಗೆ ವೃದ್ಧ, ನಾಲ್ವರು ಮಕ್ಕಳಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಚಿತ್ರದುರ್ಗ ಜಿಲ್ಲಾಧಿಕಾರಿ ಸೆ.01 ರಿಂದ ಸೆ.15 2025 ರವರೆಗೆ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯಲಿರುವ ಗಣಪತಿ ಶೋಭಾಯಾತ್ರೆ, ವಿಸರ್ಜನಾ ಮೆರವಣಿಗೆ ಮತ್ತು ಈದ್ ಮಿಲಾದ್ ಹಬ್ಬದ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಲು ಜಿಲ್ಲಾದ್ಯಂತ ಡಿಜೆ ಸಿಸ್ಟಂ/ ಅತಿಹೆಚ್ಚು ಶಬ್ದ ಹೊರಡಿಸುವ ಉಪಕರಣಗಳನ್ನು ಬಳಸದಂತೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನೇಕ ಕಡೆ ಗಣೇಶ ವಿಸರ್ಜನೆ ಸಮಯದಲ್ಲಿ ದೇಶೀಯ ಸಾಂಸ್ಕೃತಿಕ ಕಲೆಗಳ ಡೊಳ್ಳು, ತಮಟೆ, ವೀರಗಾಸೆ, ಮದ್ದಳೆ, ಯಕ್ಷಗಾನ, ಕೋಲಾಟ, ಬೊಂಬೆ ಕುಣಿತಗಳಂತಹ ಸಾಂಪ್ರದಾಯಿಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ಸಾಂಪ್ರದಾಯಿಕ, ಸಾಂಸ್ಕೃತಿಕ ಕಲೆಗಳ ಪುನರುತ್ಥಾನವೂ ಸಾದ್ಯವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...