ಚಿತ್ರದುರ್ಗ | ಕೌಟುಂಬಿಕ ಕಲಹ: ಪತ್ನಿ, ಮಗಳು ಸೇರಿ ಐವರ ಮೇಲೆ ಆಸಿಡ್‌ ದಾಳಿ

Date:

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನನ್ನು ಬಿಟ್ಟು ಹೋಗಿದ್ದ ಪತ್ನಿ, ಮಗಳು ಸೇರಿದಂತೆ ಐವರ ಮೇಲೆ ಆಸಿಡ್ ದಾಳಿ ನಡೆಸಿ, ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ.

ಆರೋಪಿ ಮೊಹಮ್ಮದ್ ಸುಹೇಲ್(44) ನಡೆಸಿದ ಆಸಿಡ್‌ ದಾಳಿ ಹಲ್ಲೆಯಿಂದ ಪತ್ನಿ ತಾಸಿನಾಬಾನು, ಮಗಳು ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ಕಳೆದ 8 ತಿಂಗಳುಗಳಿಂದ ದೂರವಾಗಿ ವಾಸವಿದ್ದರು.

ನಗರದ ನಗ್ಮಾನಾಯ್ಕ ಎಂಬವರ ಮನೆಗೆ ಹಬ್ಬಕ್ಕೆಂದು ಆಕೆಯ ಸಹೋದರಿಯರಾದ ತಾಸಿನಾಬಾನು ಹಾಗೂ ನೇಹಾ ಅವರು ತಮ್ಮ ಮಕ್ಕಳೊಂದಿಗೆ ಬೆಂಗಳೂರಿನಿಂದ ಆಗಮಿಸಿದ್ದರು. ಈ ವಿಷಯ ತಿಳಿದು ಏಕಾಏಕಿ ಇವರ ಮನೆಗೆ ನುಗ್ಗಿದ ಸುಹೇಲ್, ಆಸಿಡ್ ದಾಳಿ ನಡೆಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲಿಗೆ, ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ, ಜಗಳ ಬಿಡಿಸಲು ಮುಂದಾದ ತಾಸಿನಾಬಾನು ಅವರ ಹಿರಿಯ
ಸಹೋದರಿ ನಗ್ಮಾನಾಯ್ಕ, ಕಿರಿಯ ಸಹೋದರಿ ನೇಹಾ ಹಾಗೂ ಆಕೆಯ 4 ವರ್ಷದ ಪುತ್ರಿ ಹಾಗೂ ತನ್ನ 11 ವರ್ಷದ ಮಗಳು ಸೇರಿ ಐವರ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದಾನೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಐವರಿಗೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡಿರುವ ಪತ್ನಿಯು ಪತಿ ವಿರುದ್ಧ ಆಕ್ರೋಶ ಹೊರಹಾಕಿದ್ದು, “ಆತನೊಂದಿಗೆ ಜೀವನ ಸಾಗಿಸಲು ಹಲವು ಅವಕಾಶ ನೀಡಿದರೂ ಕೂಡ ಪ್ರಯೋಜನವಾಗಲಿಲ್ಲ. ಹೀಗಾಗಿ ಅವನ ಹಿಂಸೆ ತಾಳಲಾರದೇ ನಾನು ದೂರವಾಗಿದ್ದು, ಈಗ ಬೆಂಗಳೂರಿನಲ್ಲಿದ್ದೇನೆ. ಆತ ಚಿತ್ರದುರ್ಗದಲ್ಲಿದ್ದು, ಈ ದುಷ್ಕೃತ್ಯ ಎಸಗಿದ್ದಾನೆ. ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಅವಲತ್ತುಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿ‌ದ್ದು, ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕೋಟೆ ಠಾಣೆ ವ್ಯಾಪ್ತಿಯಲ್ಲಿ ಆಸಿಡ್‌ ದಾಳಿ ಪ್ರಕರಣ ನಡೆದಿದೆ. ನೆಹರೂ ನಗರದ ಆಟೋ ಚಾಲಕನಾದ ಆರೋಪಿ ಮೊಹಮ್ಮದ್ ಸುಹೇಲ್ ಕೌಟುಂಬಿಕ ಕಲಹದಿಂದಾಗಿ ತನ್ನ ಪತ್ನಿಯಿಂದ ದೂರವಾಗಿ ಎಂಟು ತಿಂಗಳಾಗಿದೆ. ಆತನ ಪತ್ನಿ ತಾಸಿನಾಬಾನು ತನ್ನ ಅಕ್ಕನ ಮನೆಗೆ ಬಂದಾಗ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಬಳಿಕ ತನ್ನ ಜತೆಗೆ ತಂದಿದ್ದ ಆಸಿಡ್ ಬಾಟಲ್ ಎಸೆದು ಪರಾರಿಯಾಗಿದ್ದಾನೆ. ಅಲ್ಲೇ ಇದ್ದ ಐವರ ಮೇಲೆ ಆಸಿಡ್ ಬಿದ್ದು ಸುಟ್ಟ ಗಾಯಗಳಾಗಿವೆ” ಎಂದು ಹೇಳಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಉಡುಪಿ | ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ

“ಚಿಕಿತ್ಸೆ ನೀಡಿದ ಬಳಿಕ ಎಲ್ಲರನ್ನೂ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆರೋಪಿ ಬಂಧನಕ್ಕೆ ಪೊಲೀಸ್ ತಂಡಗಳನ್ನು ರಚಿಸಿದ್ದೇವೆ. ಆತ ಮಚ್ಚು ಕೂಡ ತೆಗೆದುಕೊಂಡು ಬಂದಿದ್ದ. ಅದರಿಂದಲೂ ಹಲ್ಲೆ ಮಾಡಿದ್ದಾನೆ. ಮೊದಲಿನಿಂದಲೂ ದಂಪತಿ ನಡುವೆ ಜಗಳವಾಗುತ್ತಿತ್ತು. ಎಂಟು ತಿಂಗಳ ಹಿಂದೆ ಇಬ್ಬರೂ ದೂರವಾಗಿದ್ದರು. ಆದರೂ ಕೂಡ ಆರೋಪಿ ದ್ವೇಷ ಹೊಂದಿದ್ದು, ಈಗ ಈ ಕೃತ್ಯ ನಡೆಸಿದ್ದಾನೆ. ಆತನನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಭೀಕರ ಅಪಘಾತ: ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್...

ಚಿತ್ರದುರ್ಗ | ಅಡುಗೆ ಅನಿಲ ಕೊರತೆಯಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸರಬರಾಜು...

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...