ಚಿತ್ರದುರ್ಗ | ಫಲಿತಾಂಶ ಕುಂಠಿತ ಸರ್ಕಾರಿ ಶಾಲೆ, ಖಾಸಗಿ ಶಿಕ್ಷಣ ಸಂಸ್ಥೆಗಳ ದುಬಾರಿ ಶುಲ್ಕದ ಮೇಲೆ ಕ್ರಮಕ್ಕೆ ರೈತ ಸಂಘ ಆಗ್ರಹ.

Date:

ಸರ್ಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಫಲಿತಾಂಶ ಕುಂಠಿತ ಹಾಗೂ ಖಾಸಗಿ ಶಾಲೆಯಲ್ಲಿ ಸರ್ಕಾರಿ ನಿಯಮಗಳನ್ನು ಉಲ್ಲಂಘನೆ ಮಾಡಿ ದುಬಾರಿ ಶುಲ್ಕ ವಸೂಲಾತಿ ಮಾಡಲಾಗುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಚಿತ್ರದುರ್ಗದ ಜಿಲ್ಲಾ ಶಿಕ್ಷಣ ಉಪ ನಿರ್ದೇಶಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಉಪ ನಿರ್ದೇಶಕರ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

1002056975
ಕಳಪೆ ಫಲಿತಾಂಶ, ಖಾಸಗಿ ಶಿಕ್ಷಣ ಸಂಸ್ಥೆಗಳ ದುಬಾರಿ ಶುಲ್ಕ , ಶೋಷಣೆ ನಿಯಂತ್ರಣಕ್ಕೆ ರೈತ ಸಂಘದ ಪ್ರತಿಭಟನೆ

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡ ಈಚಘಟ್ಟದ ಸಿದ್ಧವೀರಪ್ಪ “ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಮುಖಾಂತರ ಸರಕಾರದ ಕಾನೂನಿನ ಅಡಿಯಲ್ಲಿ ಶುಲ್ಕವನ್ನು ಪಡೆದು ವಿದ್ಯಾದಾನ ಮಾಡಬೇಕೆಂದು ರೈತ ಸಂಘದಿಂದ ಒತ್ತಾಯಿಸಿದ್ದೇವೆ. ಆದರೂ ಇದನ್ನು ನಿರ್ಲಕ್ಷಿಸಿ ಸರಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ಖಾಸಗಿ ಶಿಕ್ಷಣ ಸಂಸ್ಥೆಗಳು ಮಕ್ಕಳ ಪೋಷಕರನ್ನು ಆರ್ಥಿಕವಾಗಿ ಶೋಷಣೆ ಮಾಡುತ್ತಿದ್ದಾರೆ. ಅಂತಹ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇವೆ. ಕೆಲವು ಬೇಡಿಕೆಗಳನ್ನು ಈಡೇರಿಸುವಂತೆಯೂ ಮಂಡಿಸುತ್ತಿದ್ದೇವೆ” ಎಂದು ತಿಳಿಸಿದರು.

“ಜಿಲ್ಲೆಯಲ್ಲಿ ಖಾಸಗಿ ಶಾಲೆಗಳು ಮನಬಂದಂತೆ ಶುಲ್ಕ ವಿಧಿಸುತ್ತಿವೆ. ಹದ್ದು ಮೀರಿ ನಡೆಯುತ್ತಿವೆ, ಮಕ್ಕಳ ಪೋಷಕರನ್ನು ಶೋಷಿಸಲಾಗುತ್ತಿದೆ. ಇದು ಎಲ್ಲರಿಗೂ ತಿಳಿಯುತ್ತಿದ್ದು, ಅಧಿಕಾರಿಗಳಾದ ನೀವು ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಯಾವ ಕ್ರಮ ಕೈಗೊಂಡಿದ್ದೀರಿ” ಎಂದು ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರನ್ನು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002056977

ಈ ವೇಳೆ ಮಾತನಾಡಿದ ಇತರ ಮುಖಂಡರು “ಪೂರ್ವ ಪ್ರಾಥಮಿಕ ಶಿಕ್ಷಣ ಮೊದಲ್ಗೊಂಡು ಎಲ್ಲಾ ಸರಕಾರಿ ಶಾಲಾ ಕಾಲೇಜುಗಳನ್ನು ಖಾಸಗಿಯವರಂತೆ ಉನ್ನತೀಕರಿಸಬೇಕು. ಮಕ್ಕಳ ಸಂಖ್ಯೆ ದ್ವಿಗುಣಗೊಳ್ಳಲು ಕ್ರಮವಹಿಸಬೇಕು. ಶಿಕ್ಷಣ ಬಡವರ ಮಕ್ಕಳಿಗೆ ಕೈಗೆಟಕುವಂತಿರಬೇಕು. ಸರಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ತಂದಿರುವ ಖಾಸಗಿ ಶಾಲೆಗಳ ವಾಹನಗಳನ್ನು ಹಳ್ಳಿಗಳಿಗೆ ಬರುವುದನ್ನು ಪ್ರತಿಬಂಧಿಸಬೇಕು. 2024-25ರ ಸಾಲಿನ 10ನೇ ತರಗತಿ ಮತ್ತು 12ನೇ ತರಗತಿಯ ಫಲಿತಾಂಶ ಕುಸಿತವಾಗಿರುವ ಶಾಲಾ ಕಾಲೇಜುಗಳಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸಂಸ್ಕಾರ ಮತ್ತು ನೈತಿಕತೆಯನ್ನು ಬಲಗೊಳಿಸುವ ನೀತಿಪಾಠ ಬೋಧನೆ ಪ್ರಾರಂಭ, ‘ಶಿಕ್ಷಣ ವ್ಯಾಪಾರವಲ್ಲ ಅದೊಂದು ಪ್ರಬುದ್ಧ ರಾಷ್ಟ್ರ ಕಟ್ಟುವ ಕಾಯಕ’ ಎಂಬ ಧ್ಯೇಯದೂಂದಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಸರಕಾರದ ನಿಯಮದ ಪ್ರಕಾರ ಶಾಲೆಯ ಮುಂದೆ ಶುಲ್ಕ ಪ್ರದರ್ಶಿಸಬೇಕು. ಶಾಲಾ ಶುಲ್ಕವನ್ನು ನಾಲ್ಕು ಸಮಕಂತುಗಳಲ್ಲಿ ಪಡೆಯುವ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪ್ರಾಥಮಿಕ ಕೃಷಿ ಸಹಕಾರ ಸಂಘದಲ್ಲಿ ಅವ್ಯವಹಾರ, ತನಿಖೆಗೆ ಸಂಘದ ನಿರ್ದೇಶಕರ ಆಗ್ರಹ.

“ಖಾಸಗಿ ಶಾಲೆಗಳು ಯೂನಿಫಾರಂ, ಶೂ, ಟೈ, ಪುಸ್ತಕ, ವಾಹನ ಸೌಲಭ್ಯವನ್ನು ದುರ್ಲಾಭದ ಬೆಲೆಯಲ್ಲಿ ಪೂರೈಸಿ ಪೋಷಕರ ಆರ್ಥಿಕ ಶೋಷಣೆ ಮಾಡುವ ಶಾಲೆಗಳ ಪರವಾನಿಗೆಯನ್ನು ರದ್ದು, ದುಬಾರಿ ಶುಲ್ಕ ಪಡೆದಿರುವ ಶಾಲೆಗಳು ಗೌರವಯುತವಾಗಿ ಪೋಷಕರನ್ನು ಕ್ಷಮೆ ಕೇಳಿ ಅನಧಿಕೃತ ಶುಲ್ಕವನ್ನು ಹಿಂಪಾವತಿಸಬೇಕು, ಪಾಠಪ್ರವಚನಗಳ ಪಠ್ಯ ಯೋಜನೆ ಪ್ರಕಾರ ಪೂರ್ವ ಸಿದ್ಧತೆ ಇಲ್ಲದೆ ಶಾಲೆಗೆ ಬರುವ ಶಿಕ್ಷಕರ ಅಮಾನತು, ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಣ ಶುಲ್ಕ ನಿಯಂತ್ರಣ ಕ್ರಮಗಳನ್ನು ಶಿಕ್ಷಣ ಇಲಾಖೆ, ಸಚಿವರು ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರಾದ ರೆಡ್ಡಿಹಳ್ಳಿ ವೀರಣ್ಣ, ಕೆ ಟಿ ತಿಪ್ಪೇಸ್ವಾಮಿ, ಮಹೇಶ್ವರಪ್ಪ, ಸತೀಶ್, ರಂಗಸ್ವಾಮಿ, ಡಿಎಸ್ ಮಲ್ಲಿಕಾರ್ಜುನ, ರವಿಕುಮಾರ್, ಮಹಾಂತೇಶ್, ಲಕ್ಷ್ಮಿಕಾಂತ್, ಶಿವಕುಮಾರ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಎಚ್.ಪಿ.ವಿ ಲಸಿಕೆ ಅತ್ಯಂತ ಸುರಕ್ಷಿತ: ಡಾ. ಮೆಲ್ವಿನ್ ಕುಮಾರ್

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡುಬರುಲು ಹ್ಯೂಮನ್ ಪ್ಯಾಪಿಲೋಮ ವೈರಸ್(ಎಚ್.ಪಿ.ವಿ) ಹೆಚ್ಚಾಗಿ ಕಾರಣವಾಗುತ್ತದೆ....

ಚಿತ್ರದುರ್ಗ | ಭೀಕರ ಅಪಘಾತ: ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್...

ಚಿತ್ರದುರ್ಗ | ಅಡುಗೆ ಅನಿಲ ಕೊರತೆಯಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸರಬರಾಜು...

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...