ಚಿತ್ರದುರ್ಗ | ಸಿ2ಪ್ಲಸ್50 ಬೆಲೆಯಲ್ಲಿ ಬೆಳೆ ಖರೀದಿಗೆ ಬ್ಯಾಂಕುಗಳಿಗೆ ರೈತಸಂಘ ಆಗ್ರಹ.

Date:

ರೈತ ಸಂಘದ ಬ್ಯಾಂಕುಗಳ ಸಾಲ ಬಾಕಿ ತೀರಿಸುವ ವಿನೂತನ ಪ್ರಯೋಗವೊಂದು ಚಿತ್ರದುರ್ಗ ರೈತ ಸಂಘದ ವತಿಯಿಂದ ಹೊಳಲ್ಕೆರೆ ತಾಲೂಕಿನ ಶಿವಗಂಗ ಗ್ರಾಮೀಣ ಬ್ಯಾಂಕ್ ಘಟಕದಲ್ಲಿ ನಡೆದಿದ್ದು ರೈತರ ಬೇಡಿಕೆಯಾದ ಸಿ2ಪ್ಲಸ್50 ಬೆಲೆಯಲ್ಲಿ ಸಾಲುತೀರುವಳಿಗೆ ರೈತರು ಬೆಳೆದ ಬೆಳೆಯನ್ನು ಬ್ಯಾಂಕಿಗೆ ಪೂರೈಸಿ, ಸಾಲ ತಿಳುವಳಿ ಮಾಡಿಕೊಳ್ಳಲು ಆಗ್ರಹಿಸಿದೆ.

ಹಲವು ವರ್ಷಗಳಿಂದ ರೈತಸಂಘ, ರೈತ ಹೋರಾಟಗಾರರು ತಾವು ಬೆಳೆದ ಬೆಳೆಗೆ ನ್ಯಾಯಯುತ ಬೆಲೆಯಾದ ಡಾ.ಸ್ವಾಮಿನಾಥನ್ ವರದಿಯಂತೆ ಸಿ2ಪ್ಲಸ್50 ಬೆಂಬಲ ಬೆಲೆಯನ್ನು ಕೊಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸುತ್ತಲೇ ಬಂದಿದ್ದಾರೆ. ಆದರೆ ಸರ್ಕಾರಗಳು ಇದನ್ನು ಜಾರಿ ಮಾಡುವ ಕಡೆಗೆ ಗಮನ ಹರಿಸಿಲ್ಲ. ಆದರೂ ಪಟ್ಟು ಬಿಡದೆ ಚಿತ್ರದುರ್ಗದ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ಘಟಕ ರಾಜ್ಯ ಕಾರ್ಯಧ್ಯಕ್ಷ ಈಚಗಟ್ಟ ಸಿದ್ವೀರಪ್ಪನವರ ನೇತೃತ್ವದಲ್ಲಿ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳಿಗೆ ರೈತರ ಸಾಲಕ್ಕೆ ಬದಲಾಗಿ ಸಿ2ಪ್ಲಸ್50 ಬೆಳೆಯಲ್ಲಿ ಟಿ ಎಮ್ಮಿಗನೂರಿನ ರೈತ ರಾಮಲಿಂಗಪ್ಪ ಬೆಳೆದಿದ್ದ ಐದು ಕ್ವಿಂಟಲ್ ಮೆಕ್ಕೆಜೋಳವನ್ನು ಸುಮಾರು ಮೂವತ್ತೈದು ಸಾವಿರ ರೂಪಾಯಿ ಸಾಲಕ್ಕೆ ಬೆಳೆಯನ್ನು ಪೂರೈಸಿ ಎಲ್ಲಾ ಬ್ಯಾಂಕ್ ಗಳು ಇದೇ ರೀತಿ ರೈತರ ಬೆಳೆಗಳನ್ನು ಬೆಂಬಲ ಬೆಲೆಗೆ ಖರೀದಿಸಬೇಕೆಂದು ಒತ್ತಾಯಿಸಿದರು.

1001584423
ಶಿವಗಂಗ ಗ್ರಾಮೀಣ ಬ್ಯಾಂಕ್ ಮುಂದೆ ರೈತ ಸಂಘದ ಮುಖಂಡರು

ಈ ವೇಳೆ ರಾಜ್ಯ ಕಾರ್ಯಧ್ಯಕ್ಷ ಈಚಗಟ್ಟದ ಸಿದ್ಧವೀರಪ್ಪ ಮಾತನಾಡಿ, “ಅತಿವೃಷ್ಟಿಯಿಂದಾಗಿ ಈ ಬಾರಿ ರೈತ ಬೆಳೆ ನಷ್ಟಕ್ಕೆ ಗುರಿಯಾಗಿದ್ದಾನೆ. ಈ ಸಮಯದಲ್ಲಿ ಸರ್ಕಾರ ಮತ್ತು ಬ್ಯಾಂಕುಗಳು ಅವನ ಸಹಾಯಕ್ಕೆ ನಿಲ್ಲಬೇಕು. ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿಸಬೇಕು. ರೈತರು ಸಾಲ ತೀರಿಸಲು ಸಿದ್ದರಿದ್ದೇವೆ. ಆದರೆ ಸರ್ಕಾರದ ವಿವೇಕಿ ನೀತಿಗಳಿಂದ ನಮಗೆ ಬೆಂಬಲ ಬೆಲೆ ದೊರೆಯದೆ ಕಾಲಕಾಲಕ್ಕೆ ಬೆಳೆಗಳ ಬೆಲೆ ಪರಿಷ್ಕರಣೆಯಾಗದೆ ನಷ್ಟಕ್ಕೆ ಗುರಿಯಾಗುತ್ತಿದ್ದಾನೆ. ಜೀವನಾವಶ್ಯಕ ವಸ್ತುಗಳ ಬೆಲೆಗಳು ಗಗನಮುಖಿಯಾಗಿ ಕಾಲಕ್ಕೆ ಪರಿಷ್ಕರಣೆಯಾಗುತ್ತಿವೆ. ಅದರ ರೈತನ ಬೆಳೆಗಳಿಗೆ ಮಾತ್ರ ಬೆಲೆಗಳು ಪರಿಷ್ಕರಣೆಯಾಗುತ್ತಿಲ್ಲ. ಇದರಿಂದ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಸರ್ಕಾರದ ಅವಿವೇಕಿ ನಿರ್ಧಾರಗಳು ಕಾರಣವಾಗಿದೆ. ಹಾಗಾಗಿ ಡಾ.ಸ್ವಾಮಿನಾಥನ್ ಬೆಂಬಲ ಆಯೋಗದ ಮತ್ತು ಸರ್ಕಾರವೇ ನೇಮಿಸಿದ್ದ ಪ್ರಕಾಶ್ ಕಮ್ಮರಡಿ ಆಯೋಗದ ಬೆಲೆ ನಿಗದಿಯಂತೆ ಬೆಳೆದ ಬೆಳೆಯನ್ನು ಗ್ರಾಮೀಣ ಬ್ಯಾಂಕ್ ಗೆ ಪೂರೈಸುತ್ತಿದ್ದೇವೆ. ಇದನ್ನು ಸಾಲಕ್ಕೆ ವಜಾ ಮಾಡಿಕೊಂಡು ತೀರುವಳಿ ಮಾಡಿಕೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ವಾಗ್ದಾನ ಮರೆತ ಪ್ರಧಾನಿ ಮೋದಿ, ಭದ್ರಾ ಮೇಲ್ದಂಡೆ ಹಣಬಿಡುಗಡೆ ಮಾಡಿಸಲು ಸಂಸದರಿಗೆ ರೈತಸಂಘ, ಡಿಎಸ್ಎಸ್ ಆಗ್ರಹ.

ಈ ವೇಳೆ ರೈತ ಸಂಘದ ಮುಖಂಡರಾದ ರಂಗಸ್ವಾಮಿ, ಸತೀಶ್, ರಾಮಲಿಂಗಪ್ಪ ಸೇರಿದಂತೆ ನೂರಾರು ರೈತರು ಪೊಲೀಸ್ ವೃತ್ತ ನಿರೀಕ್ಷಕರು, ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ |ನೀರು ಸರಬರಾಜು ವಿಳಂಬ; ನಗರಸಭೆ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಸಮಾಧಾನ

ಚಿತ್ರದುರ್ಗ ನಗರದಲ್ಲಿ 15 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದಕ್ಕೆ ನಗರಸಭೆ...

ಚಿತ್ರದುರ್ಗ | ಎಚ್.ಪಿ.ವಿ ಲಸಿಕೆ ಅತ್ಯಂತ ಸುರಕ್ಷಿತ: ಡಾ. ಮೆಲ್ವಿನ್ ಕುಮಾರ್

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡುಬರುಲು ಹ್ಯೂಮನ್ ಪ್ಯಾಪಿಲೋಮ ವೈರಸ್(ಎಚ್.ಪಿ.ವಿ) ಹೆಚ್ಚಾಗಿ ಕಾರಣವಾಗುತ್ತದೆ....

ಚಿತ್ರದುರ್ಗ | ಭೀಕರ ಅಪಘಾತ: ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್...

ಚಿತ್ರದುರ್ಗ | ಅಡುಗೆ ಅನಿಲ ಕೊರತೆಯಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸರಬರಾಜು...