ಚಿತ್ರದುರ್ಗ | ವಾಗ್ದಾನ ಮರೆತ ಪ್ರಧಾನಿ ಮೋದಿ, ಭದ್ರಾ ಮೇಲ್ದಂಡೆ ಹಣಬಿಡುಗಡೆ ಮಾಡಿಸಲು ಸಂಸದರಿಗೆ ರೈತಸಂಘ, ಡಿಎಸ್ಎಸ್ ಆಗ್ರಹ.

Date:

ಪ್ರಧಾನಿ ಮೋದಿ ಕಳೆದ 2 ವರ್ಷಗಳ ಹಿಂದೆ ಚುನಾವಣೆಯಲ್ಲಿ ಚಿತ್ರದುರ್ಗಕ್ಕೆ ಬಂದಾಗಜಿಲ್ಲೆಯ ಜನರ, ರೈತರ ಕನಸಾದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ, ರಾಷ್ಟ್ರೀಯ ಯೋಜನೆಯೆಂದು ಘೋಷಿಸುತ್ತೇವೆಂದು ಜಿಲ್ಲೆಯ ಜನರಿಗೆ ವಾಗ್ದಾನ ನೀಡಿದ್ದರು. ಇದುವರೆಗೂ ಈಡೇರದ ಕಾರಣ ಸಂಸದ ಗೋವಿಂದ ಕಾರಜೋಳಗೆ ಹಣ ಬಿಡುಗಡೆ ಮಾಡಿಸಿ ಕಾರ್ಯಕ್ರಮಗಳಿಗೆ ಹಾಜರಾಗಬೇಕೆಂದು ರೈತ ಸಂಘ ಒತ್ತಾಯಿಸುತ್ತದೆ. ಇಲ್ಲವಾದಲ್ಲಿ ಸಂಸದರ ಕಾರ್ಯಕ್ರಮಗಳಲ್ವಿ ಅವರ ವಿರುದ್ಧ ಪ್ರತಿಭಟನೆಗೆ ಮುಂದಾಗಲು ರೈತ ಸಂಘ, ದಸಂಸ ಮುಖಂಡರು ಸಭೆ ಸೇರಿ ಮೊಳಕಾಲ್ಮುರಿನಲ್ಲಿ ನಿರ್ಣಯ ಕೈಗೊಂಡರು.

1001573427
ಮೊಳಕಾಲ್ಮೂರು ರೈತ, ದಸಂಸ ಮುಖಂಡರ ಸಭೆಯಲ್ಲಿ ಮುಖಂಡರು

‘ಮೊಳಕಾಲ್ಮೂರು ಶಾಶ್ವತ ಕುಡಿಯುವ ನೀರು ಯೋಜನೆಯ ಉದ್ಘಾಟನೆಗೆ ಆಗಮಿಸಲಿರುವ ಸಂಸದ ಕಾರಜೋಳರವರು ಕೇಂದ್ರದ ಘೋಷಣೆಯಂತೆ ಭದ್ರಾ ಅನುದಾನ ಬಿಡುಗಡೆ ಮಾಡಿಸಿ ಕಾರ್ಯಕ್ರಮಕ್ಕೆ ಬರಬೇಕು. ಇಲ್ಲವಾದಲ್ಲಿ ಕಾರ್ಯಕ್ರಮಗಳಿಗೆ ಹಾಜರಾಗಬಾರದೆಂದು ಪ್ರತಿಭಟನೆ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು. ಮೊಳಕಾಲ್ಮೂರು, ಚಳ್ಳಕೆರೆ ತಾಲೂಕುಗಳು ಶಾಶ್ವತ ಬರ ಪಟ್ಟಿಯಲ್ಲಿದ್ದರೂ ಅದರಿಂದ ಹೊರಬರಲು ಸಚಿವರು, ಶಾಸಕರು, ಸಂಸದರು ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ, ಪ್ರಯತ್ನಕ್ಕೆ ಕೈಜೋಡಿಸಿಲ್ಲ. ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆಗೆ ಹಣ ನಿಗದಿಯಾಗಿದ್ದರೂ, ಇದುವರೆಗೂ ಅದನ್ನು ಬಿಡುಗಡೆ ಮಾಡಿಲ್ಲ ಎಲ್ಲಾ ಸಂಸದರು ಪಕ್ಷಭೇದ ಮರೆತು ಹಣ ಬಿಡುಗಡೆ ಮಾಡಿಸಲು ಮುಂದಾಗಬೇಕು’ ಎಂದು ಸಭೆಯಲ್ಲಿ ಒತ್ತಾಯಿಸಿದರು.

1001573426
ಸಭೆಯಲ್ಲಿ ದಸಂಸ ಮುಖಂರು

‘ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ರೈತರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿದ್ದು, ಯೋಜನೆ ಮಾರ್ಪಾಡು ಮಾಡಬೇಕು. ಬೆಲೆ ನಷ್ಟ ಪರಿಹಾರ ತೀರ್ಮಾನಿಸುವಾಗ ಅವೈಜ್ಞಾನಿಕ ಅಂಶಗಳನ್ನು ಕೈ ಬಿಟ್ಟು ಬೆಳೆ ನಷ್ಟವನ್ನು ಮಾತ್ರ ಪರಿಗಣಿಸಬೇಕು. ರೈತನ ಪ್ರತಿ ಸರ್ವೆ ನಂಬರಿನ ಬೆಳೆ ಪರಿಶೀಲಿಸಿ ಪರಿಹಾರ ನೀಡಬೇಕು. ಬೆಳೆವಿಮೆ ತುಂಬಿದ ರೈತರಿಗೆ ಈಗಿರುವ ಚೀಟಿ ಪದ್ಧತಿ ಬದಲು ವಿಮಾಬಾಂಡ್ ನೀಡಬೇಕು’ ಎಂದು ಇಂದು ರೈತ ಸಂಘ ಮುಖಂಡರು ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಈ ಒತ್ತಾಯಗಳನ್ನು ಈಡೇರಿಸಬೇಕೆಂದು ಸಭೆಯಲ್ಲಿ ನಿರ್ಣಾಯಕಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಚಳ್ಳಕೆರೆ ಖಾಸಗಿ ಬಸ್ ನಿಲ್ದಾಣದಲ್ಲಿ ಹೊಸ ಶೌಚಾಲಯ ನಿರ್ಮಾಣ, ವ್ಯಾಪಾರಿಗಳು ಮತ್ತು ನಾಗರೀಕರ ಆಕ್ಷೇಪ.

ಸಭೆಯಲ್ಲಿ ರೈತ ಮುಖಂಡರಾದ ಬೇಡರೆಡ್ಡಿಹಳ್ಳಿ ಬಸವ ರೆಡ್ಡಿ, ಮರ್ಲಹಳ್ಳಿ ರವಿಕುಮಾರ್, ದಾಸನೂರ ನಾಯಕ, ಕೆಟಿ ನಾಗರಾಜ್, ಈರಣ್ಣ, ಬೂದಪ್ಪ, ಹಟ್ಟಿ ನಾಗರಾಜ್, ಚಂದ್ರಣ್ಣ, ಮಂಜುನಾಥ, ವೀರಣ್ಣ, ಮೇಸ್ತ್ರಿ ಪಾಪಯ್ಯ, ಡಿಎಸ್ಎಸ್ ಕೊಂಡ್ಲಾಪುರ ಪರಮೇಶ್ವರಪ್ಪ, ಗಂಗಾಧರ, ಆನಂದ, ರಾಜು, ಬೊಮ್ಮಲಿಂಗನಹಳ್ಳಿ ಮಂಜುನಾಥ ಹಾಗೂ ಇತರರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...