ಚಿತ್ರದುರ್ಗ | ಇತಿಹಾಸದಲ್ಲಿ ಮೊದಲ ಬಾರಿಗೆ ಚಳ್ಳಕೆರೆಯಲ್ಲಿ ಯೂರಿಯಾ ಕೊರತೆ; ರೈತರ ಆತಂಕ

Date:

ಚಳ್ಳಕೆರೆಯಲ್ಲಿ ಯೂರಿಯಾ ಗೊಬ್ಬರ ಸಿಗದೇ ರೈತರು ಪರದಾಡುವ ಸ್ಥಿತಿ ಎದುರಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ರಸಗೊಬ್ಬರ ಕೊರತೆ ಎದುರಾಗಿದೆ. ಈರೀತಿ ಗೊಬ್ಬರಕ್ಕಾಗಿ ನೂಕು ನೂಗ್ಗಲಿನ ಪರಿಸ್ಥಿತಿ ನೋಡಿರಲಿಲ್ಲ ಎಂದು ರೈತರು ಆತಂಕ ವ್ಯಕ್ತಪಡಿಸಿದರು.‌

1002496635

ಇದುವರೆಗೂ ಹವಾಮಾನದ ಕಾರಣದಿಂದ, ಮಳೆಯ ಕಣ್ಣಾಮುಚ್ಚಾಲೆ ಆಟದಿಂದಾಗಿ ಬಿತ್ತನೆ ಕಾರ್ಯ ಕುಂಠಿತವಾಗಿತ್ತು. ಕಳೆದ ತಿಂಗಳು ಜುಲೈ ಅಂತ್ಯದಲ್ಲಿ ಉತ್ತಮ ಮಳೆ ಆರಂಭವಾಗಿದ್ದು ಸಾಕಷ್ಟು ರೈತರು ಬಿತ್ತನೆ ಕಾರ್ಯ ಕೈಗೊಂಡಿದ್ದು ಪ್ರಗತಿಯಲ್ಲಿದೆ.‌ ಜುಲೈ ಕೊನೆಯಲ್ಲಿ ಬಿತ್ತನೆ ಮಾಡಿದ ರೈತರಿಗೆ ಈಗ ರಸಗೊಬ್ಬರ ಯೂರಿಯಾ ಅವಶ್ಯಕತೆ ಇದ್ದು ಸಾಕಷ್ಟು ಯೂರಿಯಾ ದಾಸ್ತಾನು ಇಲ್ಲದ ಕಾರಣ ಗೊಬ್ಬರ ಸಿಗದೇ ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಗೊಬ್ಬರ ಸಿಗುತ್ತದೋ ಇಲ್ಲವೋ ಎಂದು ಗೊಂದಲ ಉಂಟಾಗಿದೆ ಎಂದು ಸರತಿಯಲ್ಲಿ ನಿಂತು ಕಾಯುತ್ತಿರುವ ರೈತರು ಅಳಲು ತೋಡಿಕೊಂಡರು.

1002496627
ಗೊಬ್ಬರಕ್ಕಾಗಿ ರೈತರ ನೂಕು ನೂಗ್ಗಲು

ಜನತಾ ಬಜಾರ್ ಹಾಗೂ ಇತರೆಡೆ ಅಂಗಡಿಗಳಲ್ಲಿದ್ದ ಅಲ್ಪಸ್ವಲ್ಪ ರಸಗೊಬ್ಬರವನ್ನು ಪೊಲೀಸ್ ಸರ್ಪಗಾವಲಿನಲ್ಲಿ ವಿತರಣೆ ಮಾಡಲಾಯಿತು. ಚಳ್ಳಕೆರೆಯಲ್ಲಿ ಗೊಬ್ಬರ ಕೊರತೆಯಿಂದ ಜನತಾ ಬಜಾರ್ ನಲ್ಲಿ ರೈತರು ಕಾದು ಕುಳಿತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಎರಡು ತಿಂಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಯೂರಿಯಾ ರಸಗೊಬ್ಬರ ಕೊರತೆ ಎದುರಾಗಿದ್ದು, ತೀವ್ರ ಪ್ರತಿಭಟನೆಗಳು ನಡೆದವು. ಕೆಲವೆಡೆ ರಸ್ತೆ ತಡೆ, ಕೃಷಿ ಇಲಾಖೆಗೆ ಬೀಗ ಜಡಿದು ರೈತ ಮುಖಂಡರು ಬಿಸಿ ಮುಟ್ಟಿಸಿದ್ದರು. ಆಗ ಚಳ್ಳಕೆರೆ ತಾಲೂಕಿನಲ್ಲಿ ಗೊಬ್ಬರದ ಅವಶ್ಯಕತೆ ಇಲ್ಲದೆ ಶಾಂತವಾಗಿತ್ತು. ಜುಲೈನಲ್ಲಿ ಉತ್ತಮ ಹವಾಮಾನ, ಮಳೆ ನಂತರ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಈ ಸಮಯದಲ್ಲಿ ಬೆಳೆಗಳಿಗೆ ಬೆಳವಣಿಗೆಗೆ ಪೋಷಕಾಂಶಭರಿತ ಯೂರಿಯಾ ಅಗತ್ಯ ಹೆಚ್ಚು. ಆದರೆ ಸಾಕಷ್ಟು ಗೊಬ್ಬರ ಸರಬರಾಜು ಇಲ್ಲದೇ ಗೊಬ್ಬರ ಅಂಗಡಿ ಮುಂಬಾಗ ರೈತರು ನೂಕುನುಗ್ಗಲು ಎದುರಾಗಿದೆ.‌

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನರೇಗಾದಲ್ಲಿ ಕಡ್ಡಾಯ ನೂರು ದಿನಗಳ ಕೆಲಸ, ಬೇಡಿಕೆಗಳ ಈಡೇರಿಕೆಗಾಗಿ ಗ್ರಾಕೂಸ್ ಮನವಿ

ಈ ಬಗ್ಗೆ ಮಾಹಿತಿ ನೀಡಿದ ಸ್ಥಳೀಯ ಪತ್ರಕರ್ತ ಮುರಳಿ ಮತ್ತು ಕರವೇ ಮುಖಂಡ ಭೋಜರಾಜ್,”ಇತಿಹಾಸದಲ್ಲಿ ಇದೇ ಮೊದಲು ಗೊಬ್ಬರ ಕೊರತೆ ಚಳ್ಳಕೆರೆ ತಾಲೂಕಿನಲ್ಲಿ ಉಂಟಾಗಿದೆ ಎನ್ನಬಹುದು. ಬೇರೆ ಭಾಗಗಳಲ್ಲಿ ರಸಗೊಬ್ಬರ ಕೊರತೆ ಸುದ್ದಿ ಇದೆ ಎಂದು ಸುದ್ದಿ ಓದುತ್ತಿದ್ದೆವು. ಆದರೆ ಮಂಗಳವಾರ ಬೆಳ್ಳಂಬೆಳಗ್ಗೆ ಗೊಬ್ಬರ ಸಿಗದೇ ರೈತರು ಪರದಾಡುವ, ನೂಕಾಟ, ವಾಗ್ಯುದ್ದ ನಡೆದುದನ್ನು ಕಣ್ಣಾರೆ ಕಂಡಿದ್ದೇವೆ.‌ ರೈತರಿಗೆ ಅಗತ್ಯವಾದ ರಸಗೊಬ್ಬರವನ್ನು ಕೂಡಲೇ ಕೃಷಿ ಇಲಾಖೆ ಒದಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...