ಚಿತ್ರದುರ್ಗ | ಹವಾಮಾನ ಬದಲಾವಣೆಯಿಂದ ಹಲವೆಡೆ ಉತ್ತಮ ಮಳೆ, ಕೃಷಿ ಚಟುವಟಿಕೆಗಳಿಗೆ ಮುನ್ನುಡಿ.

Date:

ಕೋಟೆನಾಡು ಚಿತ್ರದುರ್ಗಕ್ಕೆ ಯುಗಾದಿ ಹೊಸ ವರ್ಷಾರಂಭದಲ್ಲಿ ಮಳೆ ಸುರಿದಿದ್ದು, ಬಿಸಿಲಿಗೆ ಬಳಲಿದ್ದ ರೈತರು, ಸಾರ್ವಜನಿಕರಲ್ಲಿ ತುಸು ಸಮಾಧಾನ ತಂದಿದ್ದು, ಹವಾಮಾನ ಬದಲಾವಣೆ ಹರ್ಷ ತಂದಿದೆ. ಯುಗಾದಿ ಹಬ್ಬದ ನಂತರ ಚಿತ್ರದುರ್ಗ ನಗರದಲ್ಲಿ, ಜಿಲ್ಲೆಯ ಹಲವೆಡೆ ಸುರಿದಿರುವ ಮಳೆ ಇಳೆಯನ್ನು ತಂಪಾಗಿಸಿದೆ.

ಚಿತ್ರದುರ್ಗ ನಗರದ ಹಲವೆಡೆ ಅಪರಾಹ್ನ 2 ಗಂಟೆ ಹೊತ್ತಿಗೆ ಶುರುವಾದ ಮಳೆ ಮೂರು ಗಂಟೆವರೆಗೂ ಬಿಡದೇ ಸುರಿದಿದೆ. ಮಳೆಯ ಸೂಚನೆ ಇಲ್ಲದೆ ದಿನನಿತ್ಯದಂತೆ ರಸ್ತೆಯಲ್ಲಿ ಓಡಾಡುತ್ತಿದ್ದವರು ಮಳೆ‌ ಆರಂಭವಾಗುತ್ತಿದ್ದಂತೆ ಸುರಕ್ಷತೆಯ ಸ್ಥಳ ಸೇರಿದರೆ, ಕೆಲವರು ಹಾಗೂ ಕೆಲ ವಾಹನ ಸವಾರರು ಅನಿರೀಕ್ಷಿತ ಮಳೆಯಲ್ಲಿ ನೆನೆದುಕೊಂಡು ಮುಂದೆ ಸಾಗಿದರು.

ಇಂದು ಸುರಿದಿರುವ ಮಳೆಗೆ ಬೇಸಿಗೆಯ ಬಿಸಿಲಿಗೆ ಕಾದು ಹೆಂಚಂತಾಗಿದ್ದ ಭೂಮಿ ತಂಪಾಗಿದೆ. ಚಿತ್ರದುರ್ಗದ ಕೋಟೆ ಕೊತ್ತಲಗಳು, ಮರ, ಗಿಡಗಳು ತೊಳೆದು ಸ್ವಚ್ಛಗೊಳಿಸಿದಂತಾಗಿವೆ.‌ ಹದವಾದ ಮಳೆಯಾಗಿರುವುದರಿಂದ ಹವಾಮಾನ ಬದಲಾವಣೆಯ ಮುನ್ಸೂಚನೆ ರೈತರಿಗೆ ಸಿಕ್ಕಿದಂತಾಗಿದ್ದು, ಮುಂಗಾರಿಗೆ ಮೊದಲೇ ಬಿತ್ತನೆಗೆ ಭೂಮಿ ಹದಮಾಡಿ ಅಣಿಗೊಳಿಸುವ ರೈತರ ಕೆಲಸ ಗರಿಗೆದಲಿದೆ. ನೀರಾವರಿ ಆಶ್ರಿತ ಬೇಸಿಗೆ ಬೆಳೆಗಳಿಗೆ, ತೋಟಗಳಿಗೆ ಮಳೆಯ ಸಿಂಚನವಾಗಿರುವುದು ನೀರಿನ ಬವಣೆ ನೀಗಿಸಲು ವರದಾನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಅಡಿಕೆ, ತೆಂಗು, ಹನಿ ನೀರಾವರಿ ಉಪಕರಣಗಳು ಬೆಂಕಿಗಾಹುತಿ, ರೈತ ಕಂಗಾಲು.

ಕಳೆದೆರಡು ದಿನಗಳಿಂದ ಜಿಲ್ಲೆಯ ಅಲ್ಲಲ್ಲಿ ಮಳೆ ಮೋಡವಾಗುತ್ತಿತ್ತು.‌  ಕೆಲವೆಡೆ ಮಳೆ ಹನಿಗಳು ಉದುರಿದ್ದು ಬಿಟ್ಟರೆ, ಉತ್ತಮ ಮಳೆಯ ನಿರೀಕ್ಷೆ ಎಲ್ಲರಲ್ಲಿತ್ತು.‌ ಅದರಂತೆ ಬುಧವಾರ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನಲ್ಲಿ ಉತ್ತಮ ಮಳೆಯಾಗಿತ್ತು.

ಬಿ.ಜಿ.ಕೆರೆ ಗ್ರಾಮ ಸೇರಿದಂತೆ ಮೊಳಕಾಲ್ಮುರು, ಹಾನಗಲ್, ರಾಯಪುರ, ರಾಂಪುರ, ದೇವಸಮುದ್ರ ಗ್ರಾಮಗಳ ಸುತ್ತ ಮುತ್ತಲಿನ ಪರಿಸರದಲ್ಲಿ ಉತ್ತಮ ಮಳೆ ಸುರಿದಿದೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಎಚ್.ಪಿ.ವಿ ಲಸಿಕೆ ಅತ್ಯಂತ ಸುರಕ್ಷಿತ: ಡಾ. ಮೆಲ್ವಿನ್ ಕುಮಾರ್

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡುಬರುಲು ಹ್ಯೂಮನ್ ಪ್ಯಾಪಿಲೋಮ ವೈರಸ್(ಎಚ್.ಪಿ.ವಿ) ಹೆಚ್ಚಾಗಿ ಕಾರಣವಾಗುತ್ತದೆ....

ಚಿತ್ರದುರ್ಗ | ಭೀಕರ ಅಪಘಾತ: ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್...

ಚಿತ್ರದುರ್ಗ | ಅಡುಗೆ ಅನಿಲ ಕೊರತೆಯಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸರಬರಾಜು...

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...