ಚಿತ್ರದುರ್ಗ | ನರೇಗಾ ಕೆಲಸ, ಕೂಲಿ ವಿಳಂಬ ವಿರೋಧಿಸಿ ಗ್ರಾಕೂಸ್ ಕಾರ್ಯಕರ್ತರ ಪತ್ರ ಚಳವಳಿ

Date:

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕು ಸಿದ್ಧೇಶ್ವರನ ದುರ್ಗಾ ಗ್ರಾಮ ಪಂಚಾಯಿತಿಯಲ್ಲಿ ನರೇಗಾ-ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು 250 ಜನ ಕೆಲಸ ಮಾಡುತ್ತಿದ್ದು, ಒಂದುವರೆ ತಿಂಗಳಾದರೂ ಸಹ ಕೂಲಿ ಹಣ ಪಾವತಿ ಆಗಿರುವುದಿಲ್ಲ. ಅಲ್ಲದೆ ನಿರಂತರವಾಗಿ ನೂರು ಮಾನವ ದಿನಗಳ ಕೆಲಸ ಒದಗಿಸಲು ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ-ಗ್ರಾಕೂಸ್ ಪ್ರತಿಭಟನೆ ನಡೆಸಿ ಪತ್ರ ಚಳವಳಿ ನೆಡೆಸಿದರು.

ಈ ವೇಳೆ ಮಾತನಾಡಿದ ಗ್ರಾಕೂಸ್ ಮುಖಂಡರು “ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣ ಪ್ರದೇಶದ ಬಡಜನರಿಗೆ ಆರ್ಥಿಕ ನೆರವು ಒದಗಿಸಿದೆ. ಆದರೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಿದ್ದೇಶ್ವರನ ದುರ್ಗಾ ಪಂಚಾಯತಿಯಲ್ಲಿ ಒಂದುವರೆ ತಿಂಗಳಾದರೂ ಒಂದು ವಾರದ ಕೂಲಿ ಸಹ ಹಣ ಪಾವತಿ ಆಗಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

1002502181

“100 ಮಾನವ ದಿನಗಳು ಮುಗಿಯುವವರೆಗೂ ನಿರಂತರ ಕೆಲಸ ನೀಡಬೇಕು. 2024ರಲ್ಲಿ ಆಗಸ್ಟ್ ತಿಂಗಳ ಹೊತ್ತಿಗೆ ಒಂದು ಕೂಲಿ ಕಾರ್ಡ್ ನಲ್ಲಿ ಇಬ್ಬರು ಕೆಲಸಕ್ಕೆ ಬರುತ್ತಿದ್ದರೆ ಅಂತಹವರ ನೂರು ಮಾನವ ದಿನಗಳು ಮುಗಿಯುತ್ತಾ ಬಂದಿತ್ತು. ಮತ್ತು 15ರಿಂದ 20 ಸಾವಿರ ಹಣ ಕೂಲಿ ಕಾರ್ಮಿಕರಿಗೆ ಪಾವತಿಯಾಗಿತ್ತು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ವರ್ಷದಲ್ಲಿ ಬರೀ 15 ದಿನ ಕೆಲಸ ಮಾಡಿದ್ದು, ಇದುವರೆಗೂ ಹಣ ಬಿಡುಗಡೆಯಾಗದ ಕಾರಣ ಕಾರ್ಮಿಕರು ತೊಂದರೆ ಎದುರಿಸುತ್ತಿದ್ದು, ಕೆಲಸ ಮಾಡಿದ ಕೂಲಿ ಕಾರ್ಮಿಕರಿಗೆ ಈ ಕೂಡಲೇ ಸರ್ಕಾರ ತಕ್ಷಣವೇ ಹಣ ಬಿಡುಗಡೆ ಮಾಡಬೇಕು ಎಂದು ಪತ್ರ ಚಳುವಳಿ ನಡೆಸುತ್ತಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಇತಿಹಾಸದಲ್ಲಿ ಮೊದಲ ಬಾರಿಗೆ ಚಳ್ಳಕೆರೆಯಲ್ಲಿ ಯೂರಿಯಾ ಕೊರತೆ; ರೈತರ ಆತಂಕ

ಕಾರ್ಯಕರ್ತರು “ಕೂಲಿ ಕೊಡಿ, ಕೆಲಸ ಕೊಡಿ, ಇಲ್ಲ ಕುರ್ಚಿ ಬಿಡಿ” ಎಂದು ಘೋಷಣೆ ಕೂಗುತ್ತಾ ಪತ್ರ ಚಳುವಳಿ ನಡೆಸಿದರು.‌ ಪತ್ರ ಚಳುವಳಿ ವೇಳೆ ಗ್ರಾಕೂಸ್ ಮುಖಂಡರಾದ ಮಂಜಮ್ಮ, ಸಂಧ್ಯಾ, ವೈಶಾಲಿ, ನಾಗೇಂದ್ರ, ಸರೋಜಮ್ಮ, ಈರಮ್ಮ, ಶೇಖಪ್ಪ, ಮುದ್ದಪ್ಪ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...