ಚಿತ್ರದುರ್ಗ | ನರೇಗಾ ಬದಲಿಗೆ ವಿಜಿ ರಾಮ್ ಜಿ ಮಸೂದೆಗೆ ಗ್ರಾಮಿಣ ಕೂಲಿಕಾರರ ಸಂಘಟನೆ ವಿರೋಧ

Date:

“ಗ್ರಾಮೀಣ ಭಾಗದ ಬಹುತೇಕ ಜನರು ನರೇಗಾ ಯೋಜನೆಯಿಂದಾಗಿ ಉದ್ಯೋಗವನ್ನು ಕಂಡುಕೊಂಡಿದ್ದಾರೆ. ಹೆಸರು ಬದಲಿಸಿ ಈ ರೀತಿ ಹೊಸ ಕಾನೂನು ನೀತಿ ನಿಯಮಗಳನ್ನು ತರುವ ಮೂಲಕ ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುವವರ ಸಂಖ್ಯೆಯನ್ನು ಕಡಿಮೆಗೊಳಿಸಲಾಗುತ್ತಿದೆ. ಜೊತೆಗೆ ಕೇಂದ್ರ ಸರ್ಕಾರ ಕೂಡ ಸರಿಯಾಗಿ 100 ದಿನದ ಅವಧಿಯ ಕೆಲಸ ಮತ್ತು ದುಡಿದ ಕಾರ್ಮಿಕರಿಗೆ ಕೂಲಿಯನ್ನು ಕೂಡ ಪಾವತಿಸುವಲ್ಲಿ ವಿಫಲವಾಗಿದೆ. ಕೇಂದ್ರ ಸರ್ಕಾರ ನರೇಗಾ ಬದಲಿಗೆ ಹೊಸದಾಗಿ ಮಂಡಿಸಿರುವ ವಿಜಿ ರಾಮ್ ಜಿ ಮಸೂದೆಯನ್ನು ಗ್ರಾಮೀಣ ಕೂಲಿಕಾರರ ಸಂಘಟನೆ (ಗ್ರಾಕೂಸ್) ಸಾರಾಸಗಟಾಗಿ ವಿರೋಧಿಸುತ್ತದೆ” ಎಂದು ಚಿತ್ರದುರ್ಗ ಜಿಲ್ಲಾ ಸಂಚಾಲಕ ಮಲ್ಲೇಶ್ ತಿಳಿಸಿದರು.

ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬದಲಿಗೆ ಹೊಸದಾಗಿ ಜಾರಿಗೆ ತಂದಿರುವ ವಿಜಿ ರಾಮ್ ಜಿ ಮಸೂದೆಯನ್ನು ವಿರೋಧಿಸಿ ಚಿತ್ರದುರ್ಗದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು “ಈಗ ನರೇಗಾ ಯೋಜನೆಯನ್ನು ನಿಲ್ಲಿಸಿ ಹೊಸ ಸ್ಕೀಮ್ ನಡಿಯಲ್ಲಿ ಉದ್ಯೋಗ ಖಾತ್ರಿಯನ್ನು ಹೊಸ ಹೆಸರಿನಲ್ಲಿ ತರುವ ಮೂಲಕ 125 ಮಾನವ ದಿನಗಳ ಅವಧಿಯ ಕೆಲಸವನ್ನು ನೀಡುತ್ತೇವೆ ಎಂದು ಹೊಸ ತಂತ್ರಗಾರಿಕೆಯನ್ನು ಮಾಡುತ್ತಿದ್ದಾರೆ. ಈ ಹಿಂದೆ ಯೋಜನೆಯಲ್ಲಿ ರಾಜ್ಯ ಸರ್ಕಾರದ ಪಾಲು ಶೇ. ಹತ್ತು ಇದ್ದು ಶೇ. 90 ಭಾಗ ಕೇಂದ್ರ ಸರ್ಕಾರ ನೀಡುತ್ತಿತ್ತು. ಅದನ್ನು ಬದಲಿಸಿ 40:60ರ ಅನುಪಾತದಲ್ಲಿ ಹೊಸ ಮಸೂದೆಯನ್ನು ಮಂಡಿಸಿದ್ದಾರೆ. ಇದು ರಾಜ್ಯ ಸರ್ಕಾರಗಳಿಗೆ ಹೊರೆಯಾಗಲಿದ್ದು. ಬಹುತೇಕ ಈ ಯೋಜನೆಯ ವಿಫಲತೆಗೆ ಕಾರಣವಾಗಲಿದೆ. ಮುಂದಿನ ದಿನಗಳಲ್ಲಿ ಹಳ್ಳಿಯ ಜನ ಮತ್ತೆ ಕೂಲಿ ಅನ್ನ ನೀರು, ಉದ್ಯೋಗಕ್ಕಾಗಿ ನಗರ ಪ್ರದೇಶ, ದೂರದ ಊರುಗಳಿಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

1003334081

ತಾಲೂಕು ಸಂಚಾಲಕಿ ಮಂಜಮ್ಮ ಮಾತನಾಡಿ, “ಕರೋನಾದ ಸಂಕಷ್ಟ ಕಾಲದಲ್ಲಿ ಗ್ರಾಮೀಣ ಬದುಕಿನ ಜನತೆಗೆ ದುಡಿಮೆಯನ್ನು ನೀಡಿದ್ದು, ನರೇಗಾ ಉದ್ಯೋಗ ಖಾತ್ರಿ ಯೋಜನೆ. ಹೊಸ ಯೋಜನೆಯನ್ನು ರೂಪಿಸುವ ಮೂಲಕ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟಿದ್ದಾರೆ. ಅಲ್ಲದೆ ಎನ್ಎಂಎಂಎಸ್, ಕೆವೈಸಿ ಇತರ ನಿಯಮಗಳನ್ನು ಹೇರಿ ತಾಂತ್ರಿಕ ಕಾರಣದಿಂದ ದಿನೇ ದಿನೇ ಕೆಲಸ ಕೊಡುವಲ್ಲಿ ವಿಳಂಬವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾನೂನುಗಳನ್ನು ಜನರ ಪರವಾಗಿರಿಸದೆ ಬಂಡವಾಳಶಾಹಿಗಳ, ರಾಜಕೀಯ ಮುಖಂಡರ ಪರವಾಗಿಸಿ ಸಾಮಾನ್ಯ ಜನರನ್ನು ವಂಚಿಸಲಾಗುತ್ತಿದೆ. ಹೆಸರನ್ನು ಬದಲಿಸಲು ಅಧಿಕಾರ ನೀಡಿದವರಾರು, ಹಾಗೂ ಈ ಹೆಸರಲ್ಲಿ ಏನು ನ್ಯೂನತೆ ಇದೆ ಎಂದು ಸಾರ್ವಜನಿಕರಿಗೆ ತಿಳಿಸಬೇಕು” ಎಂದು ಆಗ್ರಹಿಸಿದರು.

ಪರಶುರಾಂಪುರ ಸಂಚಾಲಕಿ ಸಂಧ್ಯಾ ಮಾತನಾಡಿ, “ಈ ಮುಂಚೆ 50 ದಿನಗಳ ಕೆಲಸವನ್ನು ಸಹಾ ಒದಗಿಸದ ಸರ್ಕಾರ ಇನ್ನು ಮುಂದೆ 125 ದಿನಗಳ ಕೆಲಸವನ್ನು ನೀಡಲಿದ್ದೇವೆ ಎಂದು ಸುಳ್ಳು ಭರವಸೆ ನೀಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಭಾರತ ಸಂವಿಧಾನವು ಬುದ್ದ ಬಸವ ಅಂಬೇಡ್ಕರರ ಪರಿವರ್ತನೆ ಆಶಯದ ಫಲ

ಚಿತ್ರದುರ್ಗ ತಾಲೂಕು ಸಂಚಾಲಕಿ ತೇಜೇಶ್ವರಿ ಮಾತನಾಡಿ, “ಗ್ರಾಮೀಣ ಜನತೆಯು ತಮಗೆ ಕೆಲಸ ಬೇಕಾದಾಗ ಗ್ರಾಮ ಪಂಚಾಯತಿಗಳಿಗೆ ಹೋಗಿ ಕೆಲಸ ಬೇಕೆಂದು ಅರ್ಜಿ ಸಲ್ಲಿಸಿ ಒತ್ತಾಯಿಸಿ ಕೆಲಸ ಪಡೆಯುತ್ತಿದ್ದರು. ಆದರೆ ಹೊಸ ಕಾಯ್ದೆಯಲ್ಲಿ ಗ್ರಾಮ ಪಂಚಾಯಿತಿಯವರೇ ಸ್ವತಹ ಕೆಲಸವಿದ್ದಾಗ ಬಂದು ತಿಳಿಸುವ ಯೋಜನೆ ಇದೆ. ಇದರಿಂದಾಗಿ ಜನಗಳಿಗೆ ಅವಶ್ಯಕತೆ ಇರುವಾಗ ಉದ್ಯೋಗ ಖಾತ್ರಿಯ ಲಾಭ ಮತ್ತು ಕೆಲಸ ಸಿಗುವುದಿಲ್ಲ. ಗ್ರಾಮ ಸಭೆಗಳಲ್ಲಿ ಉದ್ಯೋಗಕ್ಕೆ ಮತ್ತು ಯೋಜನೆಗಳಿಗೆ ನಾವು ಒತ್ತಾಯಿಸುತ್ತಿದ್ದೆವು. ಈ ಮುಂಚಿನ ನರೇಗಾ ಕಾಯ್ದೆಯನ್ನು ಕೂಡ ಮತ್ತೆ ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...