ಚಿತ್ರದುರ್ಗ | ಕಾಡು, ಜೀವ ಸಂಕುಲ ರಕ್ಷಿಸುವ ಹಸಿರು ಯೋಧರು ನಮ್ಮ ರಕ್ಷಕರು: ನ್ಯಾ.ರೋಣ ವಾಸುದೇವ

Date:

“ದೇಶದ ಗಡಿಯಲ್ಲಿ ನಮ್ಮನ್ನು ಕಾಯುವ ಸೈನಿಕರು ಎಷ್ಟು ಮುಖ್ಯವೋ, ರಾಷ್ಟ್ರೀಯ ಸಂಪತ್ತು ಎಂದು ಘೋಷಣೆಯಾಗಿರುವ ಕಾಡು, ವನ್ಯಜೀವಿ, ಜೀವ ಸಂಕುಲ ರಕ್ಷಿಸುವ ಹಸಿರು ಯೋಧರು ಕೂಡ ನಮ್ಮ ರಕ್ಷಕರು. ಹಸಿರು ಯೋಧರ ಸ್ಮರಣೆ ಮಾಡುವುದು ನಮ್ಮ ಕರ್ತವ್ಯ” ಎಂದು ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್ ಸ್ಮರಿಸಿದರು.‌

ಚಿತ್ರದುರ್ಗ ನಗರದ ಅರಣ್ಯ ಇಲಾಖೆಯ ವಿಭಾಗೀಯ ಕಚೇರಿ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಅರಣ್ಯ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು “ಹೆಚ್ಚಿನ ಸೌಲಭ್ಯ ಹಾಗೂ ಮೂಲ ಸೌಕರ್ಯಗಳನ್ನು ಸರ್ಕಾರವು ಅರಣ್ಯ ಇಲಾಖೆಗೆ ಕಲ್ಪಿಸಿಕೊಡಬೇಕು. ಅರಣ್ಯ ಸಂರಕ್ಷಣೆಯ ಹೋರಾಟದಲ್ಲಿ ಹುತಾತ್ಮರಾದವರ ಸ್ಮರಣಾರ್ಥವಾಗಿ ಮಾಡುವ ಇದು ಮಹತ್ವದ ಕಾರ್ಯ. ಪರಿಸರ, ವನ್ಯಜೀವಿ, ಜೀವವೈವಿಧ್ಯವನ್ನು ರಕ್ಷಣೆ ಮಾಡುವ ಅವಕಾಶ ಸಂವಿಧಾನದಲ್ಲಿದ್ದು, ನಾವು ಅದನ್ನು ರೂಢಿಸಿಕೊಳ್ಳಬೇಕು. ಪರಿಸರ ಹಾನಿಯಾಗದಂತೆ ಎಚ್ಚರ ವಹಿಸಬೇಕು” ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಮಾಲತೇಶ್ ಅರಸ್ ಮಾತನಾಡಿ, “ವಿದ್ಯಾರ್ಥಿಗಳಲ್ಲಿ, ಸಾರ್ವಜನಿಕರಲ್ಲಿ ಅರಣ್ಯ ಸಂರಕ್ಷಣೆಯ ಮಹತ್ವ ಸಾರಬೇಕು. ಪರಿಸರ, ವನ್ಯಜೀವಿ ಮತ್ತು ಪ್ರಕೃತಿಯ ಸಮತೋಲನಕ್ಕಾಗಿ ಅರಣ್ಯಗಳ ಅಗತ್ಯದ ಬಗ್ಗೆ ಅರಿವು ಮಾಡಿಸಬೇಕು. ಅರಣ್ಯ ಕಾಯ್ದೆಗಳ ಪಾಲನೆ ಮತ್ತು ಪರಿಸರ ಹಾನಿ ತಡೆಯುವ ಬಗ್ಗೆ ಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರಡಿ, ಚಿರತೆ ಸೇರಿದಂತೆ ವನ್ಯಜೀವಿಗಳು ಗ್ರಾಮದೊಳಗೆ ಬರಲು ನಾವೇ ಕಾರಣವಾಗಿದ್ದೇವೆ. ಚಿತ್ರದುರ್ಗ ಜಿಲ್ಲೆಯಲ್ಲಿ ವಿವಿಧ ಭಾಗಗಳಲ್ಲಿ ಮಾನವ ವನ್ಯಜೀವಿ ಸಂಘರ್ಷ ಹೆಚ್ಚಿದ್ದು, ಜಾಗೃತಿ ಜೊತೆಗೆ ಸಹಬಾಳ್ವೆ ಅಗತ್ಯವಾಗಿದೆ. ಇದರ ತಡೆಗೆ ಸರ್ಕಾರದ ಜೊತೆಗೆ ನಾಗರೀಕರ ಜವಾಬ್ದಾರಿ ಕೂಡ ಇದೆ. ಈ ನಿಟ್ಟಿನಲ್ಲಿ ವನ್ಯಜೀವಿ ಉಪಟಳದ ಗ್ರಾಮಗಳ ಇಲಾಖೆ, ಅಧಿಕಾರಿಗಳು ಜನರೊಂದಿಗೆ ಸಂವಾದ, ಚರ್ಚೆ ಮಾಡಬೇಕು” ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ. ಗೋಪ್ಯಾನಾಯ್ಕ ಮಾತನಾಡಿ, “ದೇಶದಾದ್ಯಂತ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ದೇಶದ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ಮಾಡಿದ ತ್ಯಾಗ ಮತ್ತು ಬಲಿದಾನಗಳ ಸ್ಮರಣೆಗಾಗಿ ಆಚರಿಸಲಾಗುತ್ತಿದೆ. 1966 ರಿಂದ 2025 ರವರೆಗೆ ರಾಜ್ಯದಲ್ಲಿ ಒಟ್ಟು 62 ಮಂದಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರತರಾಗಿದ್ದಾಗ ಹುತಾತ್ಮರಾಗಿದ್ದಾರೆ” ಎಂದರು.

“ದೇಶದ ಎಲ್ಲಾ ಹುತಾತ್ಮರ ಸ್ಮರಣೆ ನಮ್ಮದಾಗಿದೆ, ಜಿಲ್ಲೆಯ  ಅರಣ್ಯ ಸಿಬ್ಬಂದಿಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತದೆ ಮತ್ತು ಅರಣ್ಯ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ ಎಂದು ತಿಳಿಸಿದರು. ಇದೇ ವೇಳೆ ಚಿತ್ರದುರ್ಗ ಜಿಲ್ಲೆಯ ಇಬ್ಬರು ಯೋಧರಿಗೆ ನಮನ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಫೇಸ್ಬುಕ್ ನಲ್ಲಿ ಗಣೇಶ ವಿಸರ್ಜನೆಗೆ ಡಿಜೆ ಬಳಕೆ ಸುಳ್ಳು ಸುದ್ದಿ: ಪ್ರಕರಣ ದಾಖಲಿಸಿದ ಪೊಲೀಸರು

ಅರಣ್ಯ ಇಲಾಖೆಯ ಹುತಾತ್ಮರ ಸ್ಮರಣಾರ್ಥ ಇದೇ ಸಂದರ್ಭದಲ್ಲಿ ಪರೇಡ್ ನಡೆಸಲಾಯಿತು. ಮುಖ್ಯ ಅತಿಥಿಗಳು ಅರಣ್ಯ ಹುತಾತ್ಮರಿಗೆ ಹೂಗುಚ್ಚ ಸಮರ್ಪಿಸಿ ಗೌರವ ಸಲ್ಲಿಸಿದರು. ಅರಣ್ಯ ಹುತಾತ್ಮರ ದಿನಾಚರಣೆಯ ಪಕ್ಷಿನೋಟ ಮತ್ತು ಅರಣ್ಯ ಹುತಾತ್ಮರ ಹೆಸರುಗಳನ್ನು ಸ್ಮರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲೂಕುಗಳ ವಲಯ ಅರಣ್ಯ ಅಧಿಕಾರಿಗಳು, ಅರಣ್ಯ ಸಿಬ್ಬಂದಿ, ಜೋಗಿಮಟ್ಟಿ ಪಾಲಕರು ಗಸ್ತು ವಿಭಾಗದವರು ಹಾಗೂ ಸಿಬ್ಬಂದಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...