ಚಿತ್ರದುರ್ಗ | ಅನಾವೃಷ್ಟಿಗೆ ಶೇಂಗಾ ತೊಗರಿ ಹತ್ತಿ ನಾಶ: ಉತ್ತರ ಕರ್ನಾಟಕದ ಮಾದರಿ ಪರಿಹಾರಕ್ಕೆ ರೈತ ಸಂಘ ಆಗ್ರಹ

Date:

ಬರದ ನಾಡಾಗಿರುವ ಮೊಳಕಾಲ್ಮೂರಿನಲ್ಲಿ ತೊಗರಿ, ಶೇಂಗಾ, ಹತ್ತಿ ಸೇರಿದಂತೆ ರೈತ ಬೆಳೆದಿರುವ ಹಲವು ಬೆಳೆಗಳು ಮಳೆ ಇಲ್ಲದೆ ಅನಾವೃಷ್ಟಿಗೆ ಒಣಗಿ ಹೋಗಿದ್ದು ರೈತ ಭಾರಿ ಸಂಕಷ್ಟಕ್ಕೀಡಾಗಿದ್ದಾನೆ. ಉತ್ತರ ಕರ್ನಾಟಕದ ಜನರ ಬೆಳೆ ನಷ್ಟಕ್ಕೆ ವಿಮೆ ಪರಿಹಾರ ಮತ್ತು ಬೆಳೆ ಸಾಲ ಮನ್ನಾಕ್ಕೆ ಬೆಳೆಪರಿಹಾರ ಘೋಷಣೆ ಮಾಡಿದಂತೆ ಮಾದರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬೆಳೆ ನಷ್ಟವಾಗಿರುವ ರೈತರ ಸಾಲ ಮನ್ನಾ ಮತ್ತು ಬೆಳೆ ವಿಮೆ ಪರಿಹಾರ ಘೋಷಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಘಟಕ ಮೊಳಕಾಲ್ಮುರು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಒತ್ತಾಯಿಸಿತು.

1002742472

ಈ ವೇಳೆ ಮಾತಾಡಿದ ರೈತ ಮುಖಂಡರು, “ಬರದ ನಾಡು ಮೊಳಕಾಲ್ಮೂರಿನಲ್ಲಿ ಸತತ ಬರದಿಂದ ಮಳೆ ಇಲ್ಲದೆ ಈ ಬಾರಿ ಬೆಳೆದಿದ್ದ ಶೇಂಗಾ, ತೊಗರಿ ಹತ್ತಿ ಸಂಪೂರ್ಣ ಒಣಗಿ ಹೋಗಿದ್ದು, ಪ್ರತಿ ಎಕರೆಗೆ 50,000 ರೂ. ದಂತೆ ಬೆಳೆ ಪರಿಹಾರ ಘೋಷಣೆ ಮಾಡಬೇಕು. ಅಧಿಕಾರಿಗಳು ಖುದ್ದಾಗಿ ರೈತರ ಹೊಲಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಬೇಕು.‌ ಎಲ್ಲೋ ಕುಳಿತು ಒಂದು ಕಡೆ ಸರ್ವೇ ಮಾಡಿ ಅವೈಜ್ಞಾನಿಕ ವರದಿ ನೀಡಬಾರದು. ಕಳೆದ ಬಾರಿ ಒಂದು ಪಂಚಾಯತಿಗೆ ಮಾತ್ರ ಬೆಳೆ ಪರಿಹಾರ ದೊರೆತಿದ್ದು ಬೇರೆ ಕಡೆ ನಷ್ಟವಾದೆಡೆ ಪರಿಹಾರ ದೊರೆತಿರುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.‌

1002742468

“ಕಳೆದ ಬಾರಿ ಅಕಾಲಿಕ ಅತಿವೃಷ್ಟಿಯಿಂದಾಗಿ ಮೆಕ್ಕೆಜೋಳ ಸಂಪೂರ್ಣ ಹಾಳಾಗಿದ್ದು, ಅಧಿಕಾರಿಗಳ ತಪ್ಪಿನಿಂದಾಗಿ ಬೆಳೆ ಪರಿಹಾರಕ್ಕೆ ಸರ್ವೇ ನಂಬರ್ ಗಳು ದಾಖಲಾಗದೆ ರೈತರು ನಷ್ಟ ಅನುಭವಿಸಿದ್ದರು. ಈ ಬಾರಿ ಹಾಗಾಗದಂತೆ ಎಚ್ಚರವಹಿಸಿ ಕಳೆದ ಬಾರಿಯ ನಷ್ಟವನ್ನು ಅಧಿಕಾರಿಗಳಿಂದ ವಸೂಲಿ ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಸರ್ಕಾರ ಘೋಷಿಸಿರುವ ಫಸಲ್ ಭೀಮಾ ಯೋಜನೆಯಲ್ಲಿ ಷರತ್ತುಗಳನ್ನು ವಿಧಿಸಿರುವುದರಿಂದ ಲಾಭಕ್ಕಿಂತವೇ ನಷ್ಟವೇ ಹೆಚ್ಚಾಗಿದ್ದು, ರೈತರು ವಂತಿಗೆ ತುಂಬುವಲ್ಲಿ, ಬೆಳೆವಿಮೆ ಪರಿಹಾರ ಪಡೆಯುವಲ್ಲಿ ಹಿಂದೆ ಸರಿಯುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಬೆಳೆಗೆ ಪೂರಕವಾಗಿ ಅನುಕೂಲಕರ ತಿದ್ದುಪಡಿಗಳನ್ನು ಕೇಂದ್ರ ಸರ್ಕಾರ ತರುವಂತೆ ಒತ್ತಾಯಿಸುತ್ತಿದ್ದೇವೆ. ಈ ಬಾರಿ ರೈತರು ಯೂರಿಯಾ ಆಭಾವದಿಂದ ಸಂಕಷ್ಟಕ್ಕೆ ಗುರಿಯಾಗಿದ್ದು, ತಕ್ಷಣವೇ ಯೂರಿಯ ಪೂರೈಕೆಗೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

1002742467

ಈ ಸುದ್ದಿ ಓದಿದ್ದೀರಾ ? ಚಿತ್ರದುರ್ಗ | ಸಹಬಾಳ್ವೆ, ಸಮಾಜ ಪರಿವರ್ತನೆ ನಮ್ಮ ಧ್ಯೇಯವಾಗಲಿ: ಭಂಗಿ ನಾಗರಾಜ್

ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೇಡ ರೆಡ್ಡಿಹಳ್ಳಿ ಬಸವ ರೆಡ್ಡಿ, ಜಿಲ್ಲಾಧ್ಯಕ್ಷ ಮರ್ಲ್ಲಹಳ್ಳಿ ರವಿಕುಮಾರ್, ತಾಲೂಕು ಅಧ್ಯಕ್ಷ ಸೂರಮ್ಮನಹಳ್ಳಿ ರಾಜಣ್ಣ, ಜಿಲ್ಲಾ ಉಪಾಧ್ಯಕ್ಷ ಹಿರೇಹಳ್ಳಿ ತಿಪ್ಪೇಸ್ವಾಮಿ, ಕಾರ್ಯದರ್ಶಿಗಳಾದ ಈರಣ್ಣ, ಕೋಟಿ ಈರಣ್ಣ, ಮುಖಂಡರಾದ ಎಸ್ ಟಿ ಚಂದ್ರಣ್ಣ, ಈರಣ್ಣ, ಮುಕ್ಕಣ್ಣ, ಮಹಾಲಿಂಗಪ್ಪ, ನಿಂಗಣ್ಣ, ನಾಗರಾಜ, ಶಿವಪ್ಪ, ಮಹೇಶ, ಪಾಶೆಟ್ಟಿ ಪಾಪಯ್ಯ ,ರಾಮಾಂಜನಿ ಬೊಮ್ಮಲಿಂಗನಹಳ್ಳಿ, ರಮೇಶ, ವೆಂಕಟೇಶ, ದಾಸಪ್ಪ, ಶ್ರೀನಿವಾಸ, ಶಿವಮೂರ್ತಿ, ಕಲ್ಲಣ್ಣ, ನಾಗಭೂಷಣ, ಕೃಷ್ಣಮೂರ್ತಿ, ರಾಜಶೇಖರ ನಾಯ್ಕ, ಶಶಿಕುಮಾರ, ಎಲ್ಲಣ್ಣ, ತಿಪ್ಪೇಶಿ, ತಿಪ್ಪೇಸ್ವಾಮಿ ಆಚಾರಿ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...