ಚಿತ್ರದುರ್ಗ | ಅಕ್ರಮವಾಗಿ ಮಣ್ಣು ತೆರವು; ಸೂಕ್ತ ಕ್ರಮಕ್ಕೆ ತಹಶೀಲ್ದಾರ್‌ ಭರವಸೆ

Date:

ನಿಮ್ಮ ಭರವಸೆಯ ಮೇರೆಗೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತೇವೆ. ರೈತರಿಗೆ ಪರಿಹಾರ ಕೊಡಿಸುವುದರ ಜೊತೆಗೆ ಗೋಮಾಳದಲ್ಲಿ ಹಾಗೂ ದಲಿತರ ಸಾಗುವಳಿ ಜಮೀನುಗಳಲ್ಲಿ ಫಲವತ್ತಾದ ಮಣ್ಣನ್ನು ತೆಗೆಯುವ ಅಕ್ರಮ ದಂಧೆಕೋರರನ್ನು ಮಟ್ಟಹಾಕಿ ಅವರ ಮೇಲೆ ಕೇಸ್ ದಾಖಲಿಸಬೇಕು ಎಂದು ಬಿಡಿಎಎಸ್‌ಎಸ್ ರಾಜ್ಯಾಧ್ಯಕ್ಷ ಡಾ. ಪ್ರಕಾಶ್ ಬಿರಾವರ್ ಆಗ್ರಹಿಸಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಹಶೀಲ್ದಾ‌ರ್ ರಾಜೇಶ್ ಕುಮಾರ್ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನಂತರ ತಾಲೂಕು ಕಚೇರಿಗೆ ಪ್ರತಿಭಟನಾಕಾರರು ಹಾಗೂ ಸಂಸ್ಥಾಪಕ ರಾಜ್ಯಾಧ್ಯಕ್ಷ ಪ್ರಕಾಶ್ ಬಿರಾವರವರನ್ನು ಕರೆಸಿ ರೈತರಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದ ನಂತರ ಪ್ರತಿಭಟನೆ ಹಿಂಪಡೆದು ಮಾತನಾಡಿದರು.

“ಅಕ್ರಮವಾಗಿ ಮಣ್ಣು ತೆರವುಗೊಳಿಸುವುದನ್ನು ತಡೆದು, ಅಕ್ರಮ ಸಾಗಣೆ ನಿಲ್ಲಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕುವುದರ ಮುಖಾಂತರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿ ಪ್ರತಿಭಟನೆ ಹಿಂಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ರಾಷ್ಟ್ರೀಯ ಅಯುರ್ವೇದ ದಿನಾಚರಣೆ

ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ದಲಿತಪರ ಸಂಘಟನೆಗಳು ಹಾಗೂ ರೈತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿದರು. ಈ ವೇಳೆ ಸರ್ವಧರ್ಮದ ಶಾಂತಿಯ ಪೀಠ ಶ್ರೀರಾಂಮೂರ್ತಿ ಸ್ವಾಮೀಜಿ ಹಾಗೂ ರಾಜ್ಯ ಕಾರ್ಯಧ್ಯಕ್ಷ ಕೆ ತಿಮ್ಮರಾಜ, ಪರಿವರ್ತನಾವಾದ ಜಿಲ್ಲಾಧ್ಯಕ್ಷ ಹೆಗ್ಗೆರೆ ಮಂಜುನಾಥ್, ಭರಂಪುರ ಕಣುಮಪ್ಪ, ತಾಲೂಕು ಅಧ್ಯಕ್ಷ ಚಂದ್ರಣ್ಣ ಘಾಟ್, ಬಿಡಿಎಸ್‌ಎಸ್‌ ತಾಲೂಕು ಅಧ್ಯಕ್ಷ ಮಂಜುನಾಥ್, ಸಿದ್ದಾರ್ಥ್, ಭರಮಪುರ ಗ್ರಾಮ ಪಂಚಾಯತಿ ಸದಸ್ಯ ರಂಗಸ್ವಾಮಿ, ಮಂಜುನಾಥ್, ನಾಗಮ್ಮ, ಗೌರಮ್ಮ ಗಂಗಮ್ಮ, ಮಮತಾ, ಬೋವಿ ಹನುಮಂತ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...