ಚಿತ್ರದುರ್ಗ | ಜಾನುವಾರು, ಮಹಿಳೆ ಮೇಲೆ ದಾಳಿ ನೆಡೆಸಿದ ಚಿರತೆ ಸೆರೆ; ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ

Date:

ಚಿರತೆ ಸುಮಾರು ದಿನಗಳಿಂದ ಸ್ಥಳೀಯ ಹಳ್ಳಿಗಳಲ್ಲಿ ಕುರಿ ಹಸು, ಜಾನುವಾರು ಮತ್ತು ಗಿಲ್ಕೇನಹಳ್ಳಿಯ ರೈತ ಮಹಿಳೆಯ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದ ಆರು ವರ್ಷದ ಗಂಡು ಚಿರತೆಯನ್ನು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನಲ್ಲಿ ಸೆರೆ ಹಿಡಿಯಲಾಯಿತು. ಚಿರತೆ ದಾಳಿಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಅಳವಡಿಸಿದ್ದರು.

1002560886

ಇತ್ತೀಚೆಗೆ ಗಿಲಿಕೇೆನಹಳ್ಳಿಯ ಹೊಲದಲ್ಲಿ ಮಹಿಳೆ ಮೇಲೆ ಎರಗಿದ್ದ ಚಿರತೆ ತೀವ್ರ ಗಾಯಗೊಳಿಸಿತ್ತು. ಚಿರತೆಯ ಜಾಡು ಹಿಡಿದು ಅರಣ್ಯ ಇಲಾಖೆ ಸೆರೆ ಹಿಡಿಯಲು ಯೋಜನೆ ರೂಪಿಸಿತ್ತು. ಹೊಳಲ್ಕೆರೆ ತಾಲ್ಲೂಕಿನ ಬಿಜಿಹಳ್ಳಿಯ ಬಳಿ ಭಾನುವಾರ ರಾತ್ರಿ 12 ಗಂಟೆಯಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಗ್ರಾಮದ ಹೊರವಲಯದಲ್ಲಿ ಬೋನು ಅಳವಡಿಸಿ, ಹಸುವನ್ನು ಕಟ್ಟಿ ಹಾಕಿ ಯೋಜನೆ ರೂಪಿಸಲಾಗಿತ್ತು. ಚಿರತೆ ಹಸುವನ್ನು ತಿನ್ನಲು ಅಟ್ಯಾಕ್ ಮಾಡಿದ ಸುದ್ದಿ ತಿಳಿದ ತಕ್ಷಣ ತಡರಾತ್ರಿವರೆಗೆ ಕಾರ್ಯಾಚರಣೆ ನಡೆಸಿ ಬೋನಿಗೆ ಕೆಡವಲಾಯಿತು.

1002560888
ಚಿರತೆ ದಾಳಿಗೆ ಗಾಯಗೊಂಡಿದ್ದ ಮಹಿಳೆ

ಹಸುವನ್ನು ತಿನ್ನಲು ಬಂದಿದ್ದ ಚಿರತೆಯನ್ನು ಬೋನಿಗೆ ಹಾಕಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೂ ಪಟ್ಟು ಬಿಡದ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಯನ್ನು ಕೊನೆಗೂ ಬಂಧಿಸಿ ಬೋನಿಗೆ ಕೆಡವಿದ್ದು, ಗ್ರಾಮಸ್ಥರು ಶ್ಲಾಘಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಹಶೀಲ್ದಾರ ವಿಜಯಕುಮಾರ್, ಅರಣ್ಯಾಧಿಕಾರಿ ಸತೀಶ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.

1002560889
Oplus_131072

ಈ ಬಗ್ಗೆ ಮಾಹಿತಿ ನೀಡಿರುವ ಅರಣ್ಯ ಇಲಾಖೆ ಅಧಿಕಾರಿಗಳು “ಚಿರತೆ ಸುಮಾರು 6 ವರ್ಷ ವಯಸ್ಸಿನದಾಗಿದ್ದು, ಚಿರತೆ ಅರಣ್ಯ ಇಲಾಖೆ ವಶದಲ್ಲಿದ್ದು, ಅಧಿಕಾರಿಗಳ ಪರವಾನಿಗಿಗೆ ಕಾಯುತ್ತಿದ್ದು, ಶೀಘ್ರದಲ್ಲೇ ಭದ್ರಾವತಿ ಅರಣ್ಯ ಪ್ರದೇಶಕ್ಕೆ ಸಾಗಿಸಲಾಗುವ ಯೋಜನೆ ಇದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕೆರೆ ನೀರು ಪೋಲು, ನೀರಾವರಿ ಇಲಾಖೆ ನಿರ್ಲಕ್ಷ್ಯ; ದುರಸ್ತಿಗೆ ರೈತಸಂಘದ ಮುಖಂಡರ ಆಗ್ರಹ

ಇತ್ತೀಚೆಗೆ ಗಿಲ್ಕೇನಹಳ್ಳಿ, ಶಿವಗಂಗಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಾನುವಾರುಗಳ ಮೇಲೆ ಚಿರತೆ ದಾಳಿ, ಮಹಿಳೆ ಗಾಯಗೊಂಡ ಹಿನ್ನೆಲೆಯಲ್ಲಿ ಯುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೇತನ್ ಸೇರಿದಂತೆ ಹಲವು ಮುಖಂಡರು, ಗ್ರಾಮಸ್ಥರು ಚಿರತೆ ಸೆರೆ ಹಿಡಿಯಲು ಒತ್ತಾಯಿಸಿ, ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...