ಚಿತ್ರದುರ್ಗ | ನೈತಿಕ ಬದುಕಿನ ಸಾರ್ಥಕತೆಗೆ ಸಾಹಿತ್ಯ ಪೂರಕ : ಡಾ.ಎಂ.ವೇದಾಂತ್ ಏಳಂಜಿ

Date:

“ಆಶುಕವನಗಳಲ್ಲಿ ತತ್ ಕ್ಷಣಕ್ಕೆ ಹೊಳೆದದ್ದನ್ನು ಅಭಿವ್ಯಕ್ತಿಸುವ ಕಲೆ ವಿರಳವಾಗಿರುತ್ತವೆ. ಅಂತಹ ವಿರಳ ಪ್ರತಿಭೆಯು ಕವಿ ತಿಪ್ಪೇಸ್ವಾಮಿ ಬಿ.ಜಿ.ಯವರಾಗಿದ್ದು ಅವರ ಕಿರುಗವನಗಳು ಗಹನವಾದ ವಿಚಾರಗಳನ್ನು ಹೇಳುತ್ತಿವೆ. ಪ್ರೀತಿ ಪ್ರೇಮ, ವಿಜ್ಞಾನ, ಪ್ರಾಣಿ ಪಕ್ಷಿ, ಸಂಭ್ರಮ, ಯುಗಾದಿ, ಹೊಸವರ್ಷ, ಪಠ್ಯಪುಸ್ತಕ, ಶಾಲಾಕೊಠಡಿ, ಬಾಲ್ಯ, ಯೌವ್ವನ, ಕಟ್ಟಡ, ಸಿನಿಮಾ ಮುಂತಾದವುಗಳು ಕುರಿತು ಬರೆದಿದ್ದಾರೆ.‌ ಸಾಹಿತ್ಯವು ನೈತಿಕ ಬದುಕಿನ ಸಾರ್ಥಕತೆಗೆ ಪೂರಕವಾಗಿರುತ್ತದೆ” ಎಂದು ವಿಮರ್ಶಕರು, ಪುಸ್ತಕ ಪಾಧಿಕಾರದ ಚಿತ್ರದುರ್ಗ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು ಹಾಗೂ ಉಪನ್ಯಾಸಕರು ಆದ ಡಾ.ಎಂ.ವೇದಾಂತ ಏಳಂಜಿ ಅವರು ಅಭಿಪ್ರಾಯಪಟ್ಟರು.

ಲಿಟ್ಲಲ್ ಹೇವನ್ ಸಭಾಂಗಣದಲ್ಲಿ ನಡೆದ ಆಶುಕವನ ಸಂಕಲನ ಪತಂಗ ಕೃತಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಹಲವು ಕವನಗಳನ್ನು ಗಂಭೀರವಾಗಿಯೂ ಕೆಲವೂ ಹಾಸ್ಯ ಭರಿತವಾಗಿ ವಿಡಂಬನಾತ್ಮಕವಾಗಿ ಬರೆದಿದ್ದು, ಕಿರುಗವನಗಳಲ್ಲಿ ಮೌಲಿಕ ಅರ್ಥವನ್ನು ಕಲ್ಪಿಸಿದ್ದಾರೆ. ಅನ್ಯಜ್ಞಾನ ಶಿಸ್ತಿನಲ್ಲಿ ಕಲಿತ ಯಾವುದೇ ಶಿಕ್ಷಕರು ಕನ್ನಡದಲ್ಲಿ ಕೆಲಸ ಮಾಡುವುದರಿಂದ ಅನ್ನದ ಭಾಷೆಯಾಗಿಸುವುದಕ್ಕೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಕವಿ ತಿಪ್ಪೇಸ್ವಾಮಿ ಅವರ ಕಾರ್ಯ ಶ್ಲಾಘನೀಯ” ಎಂದರು.

“ಬಹುತೇಕ ಪ್ರಾದೇಶಿಕತೆಗೆ ಒತ್ತುಕೊಟ್ಟು ಬರೆದಿರುವ ಲೇಖಕರು ಕನ್ನಡಕ್ಕೆ ಹೊಸ ಭರವಸೆಯಾಗಿದ್ದು, ಮತ್ತಷ್ಟು ಎಚ್ಚರದಿಂದ ಕೆಲಸ ಮಾಡಬೇಕು. ವಿಜ್ಞಾನ ಉತ್ತರ ಸಿರಿ ಪುಸ್ತಕವು ವಿದ್ಯಾರ್ಥಿಗಳಿಗೆ ಮತ್ತು ಹಿರಿಯರು ಉಪಯುಕ್ತವಾಗಿದ್ದು ವಿಜ್ಞಾನವನ್ನು ಸರಳವಾಗಿ ಅರ್ಥೈಸುವಂತೆ ರೂಪಿಸಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗಾಂಧೀವಾದಿ ಡಾ.ಎಚ್.ಕೆ.ಎಸ್.ಸ್ವಾಮಿ ಚರಕದ ಮಹತ್ವ ಹೇಳುತ್ತ “ಕನ್ನಡ ಉಳುವಿಕೆಗಾಗಿ ವಿಜ್ಞಾನದ ಶಿಕ್ಷಕರು ಕೆಲಸ ಮಾಡುವುದು ಜೀವಪೋಷಕವಾದದ್ದು. ಆಧುನಿಕ ಕಾಲದಲ್ಲಿ ಬೆಲೆ ಏರಿಕೆಗಳ ನಡುವೆ ಸಹಜ ಜೀವನ ಸಾಗಿಸಬಹುದು” ಎಂದು ವಿವರಿಸಿದರು.

ಪತಂಗ ಕೃತಿಕರ್ತೃ ತಿಪ್ಪೇಸ್ವಾಮಿ ಬಿ.ಜಿ. ಮಾತನಾಡಿ “ಮನಸ್ಸಿದ್ದರೆ ಮಾರ್ಗ ಎಂಬುದು ಜೀವನದ ಧ್ಯೇಯ ವಾಕ್ಯವಾಗಿದ್ದು, ಅದರಿಂದಲೇ ಆಶುಕವನ ಪುಸ್ತಕ ವಿಜ್ಞಾನ ಉತ್ತರ ಸಿರಿ ಕೃತಿ ರಚನೆಗೆ ಸಾಧ್ಯವಾಯಿತು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಕಲ್ಯಾಣಶೆಟ್ಟಿಯವರು ಎರಡು ಕೃತಿಗಳನ್ನು ಲೋಕಾರ್ಪಣೆಗೊಳಿಸಿ “ಲೇಖಕರ ಕವನಗಳು ಅರ್ಥಪೂರ್ಣವಾಗಿದ್ದು ಕನ್ನಡ ಭಾಷಾ ಬೆಳವಣಿಗೆಗೆ ಇಂತಹ ಸಾಹಿತಿಗಳು ಮತ್ತಷ್ಟು ಹೆಚ್ಚಿನ ಕೊಡುಗೆ ನೀಡುವ ಮೂಲಕ ಕನ್ನಡವನ್ನು ಕಟ್ಟಬೇಕು. ಕಿರುಗವನಗಳು ಅನೇಕ ವಿಷಯಗಳನ್ನು ತಿಳಿಸುವ ಜೊತೆಗೆ ನೈತಿಕ ಜೀವನ ನಡೆಸುವಲ್ಲಿ ಕವನಗಳ ಕೊಡುಗೆ ಅಪಾರ” ಎಂದು ವಿಶ್ಲೇಷಿಸಿದರು.

ಈ ಸುದ್ದಿ ಓದಿದ್ದೀರಾ ? ದಾವಣಗೆರೆ | ಮಹಿಳೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ವಿರೋಧಿಸಿ ಎಐಎಂಎಸ್ಎಸ್ ಸಹಿ ಸಂಗ್ರಹ

ಕಾರ್ಯಕ್ರಮದಲ್ಲಿ ಉಪನ್ಯಾಸಕ ಮಂಜುನಾಥ ವಿ.ಎಸ್. ಮಹಾಂತೇಶ ಎನ್.ಟಿ., ರಮೇಶ್ ಅಯ್ಯನಹಳ್ಳಿ. ಶಿಕ್ಷಣ ಸಂಯೋಜಕ ಮಾರುತಿಭಂಡಾರಿ, ಶಿವಕುಮಾರ್, ತಿಪ್ಪೇಸ್ವಾಮಿ ಆರ್. ಗಂಗಾಧರಪ್ಪ ಬಿ, ಮಂಜುಳಮ್ಮ ಪಿ ಎಂ, ಕೃಷ್ಣಪ್ಪ, ತಿಪ್ಪಮ್ಮ, ರೇಖಾ ಕೆ, ವಿಶೃತ್ ಕುಮಾರ ಜಿ ಟಿ, ಪ್ರವೀಣ ಬೆಳೆಗೆರೆ ಹಾಗೂ ಇತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...