ಚಿತ್ರದುರ್ಗ | ಹೊಯ್ಸಳ ವಾಹನದ ಕೀ ಕಸಿದು ಸಚಿವರ ಬೆಂಬಲಿಗರ ಪುಂಡಾಟ.

Date:

ಪೊಲೀಸ್ ಇಲಾಖೆಯ ಹೊಯ್ಸಳ ಗಸ್ತು ವಾಹನದ ಕೀ ಕಸಿದು ಅಡ್ಡಗಟ್ಟಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಹೊರವಲಯದಲ್ಲಿ ನೆಡೆದಿದೆ.

ಸಚಿವರ ಬೆಂಬಲಿಗರನ್ನು ಪ್ರಶ್ನಿಸಿದ್ದಕ್ಕೆ ವಾಗ್ವಾದ ನಡೆದಿದು ಘಟನೆಗೆ ಕಾರಣ ಎನ್ನಲಾಗಿದೆ. ತಾವು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಆಪ್ತ ಸಹಾಯಕ ಮತ್ತು ಇತರ ಬೆಂಬಲಿಗರು ಎಂದು ಹೇಳಿಕೊಂಡಿದ್ದಾರೆ. ಆದರೂ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದು, ಪೊಲೀಸರೊಂದಿಗೆ ವಾಗ್ವಾದ ನೆಡೆಸಿ, ಹಲ್ಲೆಗೆ ಯತ್ನಿಸಿ, ರಸ್ತೆ ಅಡ್ಡಗಟ್ಟಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿರುವ ಕುರಿತು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಮದ್ಯ ಸೇವಿಸುತ್ತಿದ್ದ ಸಚಿವರ ಬೆಂಬಲಿಗರನ್ನು ಪ್ರಶ್ನಿಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಬೆಂಬಲಿಗರು ಸಚಿವರ ಆಪ್ತ ಸಹಾಯಕ ಭರತ್ ರೆಡ್ಡಿ ಮತ್ತು ಇತರರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಮದ್ಯಪಾನ ಮಾಡುತ್ತಿದ್ದ ಸಚಿವರ ಆಪ್ತ ಸಹಾಯಕ ಮತ್ತು ಬೆಂಬಲಿಗರನ್ನು ಹೊಯ್ಸಳ ಗಸ್ತು ವಾಹನದ ಪೊಲೀಸರು ಪ್ರಶ್ನಿಸಿ ರಾತ್ರಿಯಾಗಿದ್ದು ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುವಂತಿಲ್ಲ, ಇಲ್ಲಿಂದ ಕೂಡಲೇ ಹೊರಡಬೇಕು ಎಂದು ತಿಳಿಸಿದ್ದಾರೆ. ಇದಕ್ಕೆ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿ ನಾವು ಸಚಿವರ ಬೆಂಬಲಿಗರು, ನಮಗೇ ಇಲ್ಲಿಂದ ಹೊರಡಲು ಆದೇಶ ನೀಡುತ್ತೀರಾ ಎಂದು ಪ್ರತ್ಯುತ್ತರ ನೀಡಿದಾಗ ವಾಗ್ವಾದ ಪ್ರಾರಂಭವಾಗಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಡಿಸೆಂಬ‌ರ್ ನೊಳಗೆ ಡಿಕೆ ಶಿವಕುಮಾ‌ರ್ ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷವೇ ದೊಡ್ಡದು: ಶಾಸಕ ಬಸವರಾಜ್

ಆನಂತರ ಕೈ ಮಿಲಾಯಿಸುವ ಹಂತ ತಲುಪಿದ್ದು ಬೆಂಬಲಿಗರು ಪುಂಡಾಟಿಕೆ ಮೆರೆದು ರಸ್ತೆಗೆ ಗಾಡಿಯನ್ನು ಅಡ್ಡಲಾಗಿ ನಿಲ್ಲಿಸಿ. ಹಾಗೂ ರಸ್ತೆಯಲ್ಲಿ ನಿಲ್ಲಿಸಿದ ಪೊಲೀಸ್ ಹೊಯ್ಸಳ ವಾಹನದ ಕೀ ಕಸಿದುಕೊಂಡು ಎಸ್ ಪಿ, ಐಜಿಪಿ ಯವರಿಗೆ ಪೋನ್ ಮಾಡಿದ್ದೇವೆ, ತಕ್ಕ ಶಾಸ್ತಿ ಮಾಡಿಸುತ್ತೇವೆ. ನಮಗೇ ಅಡ್ಡಗಟ್ಟುತ್ತೀರಾ? ಎಂದು ದಾಂಧಲೆ ನೆಡೆಸಿದ್ದಾಗಿೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...