ಚಿತ್ರದುರ್ಗ | ಪರಶುರಾಂಪುರ ತಾಲೂಕು ಕೇಂದ್ರಕ್ಕಾಗಿ ಫೆ.10ಕ್ಕೆ ಚಳುವಳಿ; ಅಖಂಡ ಕರ್ನಾಟಕ ರೈತ ಸಂಘ

Date:

ದಶಕಗಳ ಬೇಡಿಕೆಯಾದ ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರ ಹೋಬಳಿ ಕೇಂದ್ರವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಎಂಬ ಒಂದೇ ಅಜೆಂಡಾದೊಂದಿಗೆ ಅಖಂಡ ಕರ್ನಾಟಕ ರೈತ ಸಂಘ ಹೋರಾಟ ಮಾಡಲಿದೆ ಎಂದು ಮುಖಂಡ ಸೋಮಗುದ್ದು ರಂಗಸ್ವಾಮಿ ತಿಳಿಸಿದರು.

ಚಳ್ಳಕೆರೆಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಹಲವು ದಶಕಗಳಿಂದ ತಾಲೂಕು ಕೇಂದ್ರವಾಗುವ ಎಲ್ಲಾ ಅರ್ಹತೆ ಹೊಂದಿರುವ ಪರಶುರಾಂಪುರವನ್ನು ಎಲ್ಲ ಸರ್ಕಾರಗಳು ಕಡೆಗಣಿಸುತ್ತಾ ಬಂದಿದ್ದು, ತಾಲೂಕು ಕೇಂದ್ರವಾಗಿ ಘೋಷಿಸಿಲ್ಲ. ಈ ದಿಸೆಯಲ್ಲಿ ತಾಲೂಕು ಕೇಂದ್ರವಾಗಿ ಘೋಷಿಸುವಂತೆ ಫೆಬ್ರವರಿ ಹತ್ತರಂದು ಕೊಲ್ಲಾಪುರದಮ್ಮ ದೇವಸ್ಥಾನದಿಂದ ಬೆಳಿಗ್ಗೆ 11ಕ್ಕೆ ರ್ಯಾಲಿ ಮೂಲಕ ಅಖಂಡ ಕರ್ನಾಟಕ ರೈತ ಸಂಘ ಬೃಹತ್ ಚಳುವಳಿ ಆರಂಭಿಸಲಿದೆ” ಎಂದು ತಿಳಿಸಿದರು.

“ಪರಶುರಾಂಪುರ ಹೋಬಳಿ ಕೇಂದ್ರವನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡುವಂತೆ ವಿವಿಧ ಸಂಘಟನೆಗಳು ಒತ್ತಾಯ ಮಾಡಿದ್ದರೂ ಸರ್ಕಾರಗಳು ಗಮನಹರಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅಖಂಡ ಕರ್ನಾಟಕ ರೈತ ಸಂಘ ನಡೆಸುತ್ತಿರುವ ಚಳುವಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಬೇಕು. ಟ್ಯಾಕ್ಟರ್, ಎತ್ತಿನಗಾಡಿ ಬೈಕ್, ಆಟೋಗಳೊಂದಿಗೆ ಸಹ ಹೆಚ್ಚಿನ ಜನ ಹೋರಾಟದಲ್ಲಿ ಪಾಲ್ಗೊಳ್ಳಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸೊಮಾಗುದದು 1
ಚಳ್ಳಕೆರೆಯಲ್ಲಿ ರೈತಸಂಘದ ಸುದ್ದಿಗೋಷ್ಥಿ

“ಪ್ರಮುಖ ಬೀದಿಗಳಲ್ಲಿ ಬೃಹತ್ ರ್ಯಾಲಿ ನಡೆಸುವ ಮೂಲಕ ಶಾಸಕರಿಗೆ ಮನವಿ ಸಲ್ಲಿಸಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಪ್ರಾದೇಶಿಕವಾಗಿ, ಸಾಮಾಜಿಕವಾಗಿ ಎಲ್ಲ ಅರ್ಹತೆ ಹೊಂದಿರುವ ಪರಶುರಾಂಪುರವನ್ನು ತಾಲೂಕು ಕೇಂದ್ರವಾಗಿ ಘೋಷಿಸಲು ಒತ್ತಾಯಿಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಹಂಪಿ ಉತ್ಸವದಲ್ಲಿ ಹೊಸಬರಿಗೆ ಅವಕಾಶ ನೀಡುವಂತೆ ವಿ ಬಿ ಮಲ್ಲಪ್ಪ ಒತ್ತಾಯ

“ಹದಿನೈದು ವರ್ಷಗಳ ಹಿಂದೆಯೇ ಪರಶುರಾಂಪುರ ತಾಲೂಕು ಕೇಂದ್ರವಾಗಬೇಕಿತ್ತು, ಆದರೆ ರಾಜಕೀಯ ಮೇಲಾಟಗಳಿಂದ ತಾಲೂಕು ಕೇಂದ್ರದ ಕನಸು ಹಾಗೆಯೇ ಉಳಿದಿದೆ. ಈಗ ತಾಲೂಕು ಕೇಂದ್ರಕ್ಕಾಗಿ ಒತ್ತಾಯಿಸಿ, ರೈತರ ಸಂಘ ಹೋರಾಟ ನಡೆಸುತ್ತಿದೆ.‌ ಈ ಹೋರಾಟದಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ವರ್ತಕರು, ಎಲ್ಲಾ ಪಕ್ಷಗಳ ಕಾರ್ಯಕರ್ತರು, ಸಂಘ-ಸಂಸ್ಥೆಗಳು ಭಾಗವಹಿಸಬೇಕು. ಆ ಮೂಲಕ ಪರಶುರಾಂಪುರವನ್ನು ತಾಲೂಕು ಕೇಂದ್ರವಾಗಿ ಘೋಷಿಸಲು ಸರ್ಕಾರಕ್ಕೆ ಒತ್ತಾಯಿಸಬೇಕು” ಎಂದು ಅಖಂಡ ಕರ್ನಾಟಕ ರೈತ ಸಂಘದ ಮುಖಂಡರು ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಅಖಂಡ ಕರ್ನಾಟಕ ರೈತ ಸಂಘದ ಮುಖಂಡರಾದ ನಾಗರಾಜ್, ಕೃಷ್ಣಪ್ಪ, ರುದ್ರಪ್ಪ, ಶಿವಣ್ಣ, ವೆಂಕಟರಮಣಪ್ಪ ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...