ಚಿತ್ರದುರ್ಗ | ನಗರಸಭೆ ಸಮಸ್ಯೆಗಳನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಕ್ಕೆ ಸದಸ್ಯರ ಮೇಲೆ ಗರಂ.

Date:

ನಗರಸಭೆ ಕಾರ್ಯ ವೈಫಲ್ಯಗಳನ್ನು, ಸಮಸ್ಯೆಗಳನ್ನು ವಾಟ್ಸಪ್ ಗ್ರೂಪಿನಲ್ಲಿ ಹಾಕಿ ನಮಗೆ ಅಗೌರವ ತರುತ್ತಿದ್ದಾರೆ ಎಂದು ಆರೋಪಿಸಿ, ಈ ರೀತಿ ಮಾಡುವುದು ಒಳ್ಳೆಯದಲ್ಲ ಎಂದು ನಗರಸಭಾ ಸದಸ್ಯರೊಬ್ಬರಿಗೆ ಹೆದರಿಸುವ ರೀತಿಯಲ್ಲಿ ವರ್ತಿಸಿರುವುದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರಸಭೆಯಲ್ಲಿ ತುರ್ತುಸಭೆ ಕರೆದಿದ್ದ ವೇಳೆ ನಡೆದಿದೆ.

ಸದಸ್ಯ ನೇತಾಜಿ ಪ್ರಸನ್ನ ಚಳ್ಳಕೆರೆ ನಗರಸಭೆಯಲ್ಲಿ ಇರುವ ಸಮಸ್ಯೆಗಳ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ, ಸಾರ್ವಜನಿಕವಾಗಿ ನೇರ ನೇರ ತಿಳಿಸುತ್ತಾರೆ. ಇದನ್ನು ವಿರೋಧಿಸಿ ಕೆಲಸ ಮಾಡದೆ ಇರುವ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು ಸಮಸ್ಯೆ ‘ವಿಷಯಗಳನ್ನು ಸಾರ್ವಜನಿಕವಾಗಿ ತಿಳಿಸಿ ಅಗೌರವ ತರುತ್ತಿದ್ದಾರೆ ಎಂದು ಆರೋಪಿಸಿ
ಈ ರೀತಿ ಮಾಡುವುದು ಒಳ್ಳೆಯದಲ್ಲ’ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

1002067224
ಚಳ್ಳಕೆರೆ ನಗರಸಭೆಯಲ್ಲಿ ಸದಸ್ಯರ ಆರೋಪ, ವಾಗ್ವಾದ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಾಮನಿರ್ದೇಶಿತ ಸದಸ್ಯ ಪ್ರಸನ್ನ, “ಬುಧವಾರ ನಡೆದ ನಗರಸಭೆಯ ತುರ್ತು ಸಭೆಯಲ್ಲಿ ಪೌರ ಸೇವಾ ನೌಕರರು ಅಧ್ಯಕ್ಷರು ಮತ್ತು ಕೆಲ ನೌಕರರು ಸಭೆಗೆ ಬಂದು ನೇತಾಜಿ ಪ್ರಸನ್ನ ಅವರು ನಗರಸಭೆ ಕಾರ್ಯ ವೈಫಲ್ಯಗಳನ್ನು ವಾಟ್ಸಪ್ ಗ್ರೂಪಿನಲ್ಲಿ ಹಾಕಿ ನಮಗೆ ಅಗೌರವ ತರುತ್ತಿದ್ದಾರೆ ಎಂದು ಆರೋಪಿಸಿ
ಈ ರೀತಿ ಮಾಡುವುದು ಒಳ್ಳೆಯದಲ್ಲ ಎಂದು ಸಭೆಯಲ್ಲಿ ನನಗೆ ತಿಳಿಸಿದರು. ಇದಕ್ಕೆ ಬಹಳಷ್ಟು ಜನ ಸದಸ್ಯರು ಅವರ ಬೆಂಬಲಕ್ಕೆ ನಿಂತರು. ಇದು ಚಳ್ಳಕೆರೆಯ ವಿಶೇಷ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002067223

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಚಳ್ಳಕೆರೆ ನಾಗರಿಕರು
“ಒಳ್ಳೆಯ ವಿಚಾರಕ್ಕೆ ಬೆಂಬಲ ನೀಡುವುದಿಲ್ಲ ಯಾರಾದರೂ ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಪ್ರಾರಂಭಿಸಿದರೆ ಅವರನ್ನು ಎಲ್ಲಾ ದುಷ್ಟ ಶಕ್ತಿಗಳು ಸೇರಿಕೊಂಡು ತುಳಿಯುವ ಪ್ರಯತ್ನ ಮಾಡುತ್ತಾ ಬಂದಿದಾರೆ. ಈಗ ನಿಮ್ಮನ್ನು ಸಹ ಹಾಗೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಚಳ್ಳಕೆರೆಯಲ್ಲಿ ಈ ಹಿಂದೆ ಮಹೇಶ್ ನಗರಂಗೆರೆ ರವರಿಗೂ ಕೂಡ ಹೀಗೆ ಆಗಿದ್ದು, ವಿಶೇಷ ಎಂದರೆ ಇದೆ. ಸಮಾಜಕ್ಕೆ ಹೋರಾಟ ಮಾಡುವವರಿಗೆ ಸಹಕಾರ ನೀಡಿದೆ, ಹೆದರಿಸುವ ರೀತಿಯಲ್ಲಿ ವರ್ತಿಸುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

1002067222

“ವೈಫಲ್ಯಗಳನ್ನು ಹೇಳಿದ್ದರಲ್ಲಿ ತಪ್ಪೇನಿದೆ. ಕೆಲವರ ಬಂಡವಾಳ ಬಯಲಿಗೆ ಬಂದಿದೆ ಎಂದು ಸದಸ್ಯ ಪ್ರಸನ್ನರವರ ಮೇಲೆ ಕೆಲಸ ಮಾಡದೆ ಇರುವ ನೌಕರರು , ಅಧಿಕಾರಿಗಳು ಮತ್ತು ಸದಸ್ಯರು ಅವರ ಮೇಲೆ ಮುಗಿಬಿದ್ದಿರುತ್ತಾರೆ. ಒಳ್ಳೆಯ ಕೆಲಸಕ್ಕೆ ಕೈಜೋಡಿಸುವವರು ತುಂಬಾ ಕಡಿಮೆ. ಇದೊಂದು ಉದಾಹರಣೆ” ಎಂದು ತಿಮ್ಮರಾಜು ಎನ್ನುವವವರು ಆಕ್ಷೇಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ ? ಆರ್‌ಟಿಇ ಪ್ರವೇಶಾತಿ ಪಟ್ಟಿ ಪ್ರಕಟಿಸದ ಶಿಕ್ಷಣ ಇಲಾಖೆ; ಚಾತಕ ಪಕ್ಷಿಯಂತೆ ಕಾಯುತ್ತಿರುವ ಪೋಷಕರ ಕಳವಳ

ನಗರಸಭೆ ಸದಸ್ಯರೊಬ್ಬರು ಸಮಸ್ಯೆಗಳ ಬಗ್ಗೆ ಸಾರ್ವಜನಿಕವಾಗಿ ಬೆಳಕು ಚೆಲ್ಲಿದರು ಎಂದು ಅವರನ್ನು ಆಕ್ಷೇಪಿಸುವುದು ಎಷ್ಟು ಸರಿ.‌ ಅಲ್ಲದೇ ನಗರಸಭೆ ಕೆಲ ಅಧಿಕಾರಿಗಳು, ನೌಕರರು ನಗರಸಭೆ ಸದಸ್ಯ, ಜನಪ್ರತಿನಿಧಿಯ ಮೇಲೆಯೇ ಹರಿಹಾಯ್ದಿರುವುದು ಕಾನೂನಾತ್ಮಕವಾಗಿ ಉತ್ತಮ ನಡೆಯಲ್ಲ.‌ ಇದನ್ನು ಸಂಬಂಧಪಟ್ಟ ಹಿರಿಯ ಅಧಿಕಾರಿಗಳು, ಇತರೆ ಜನಪ್ರತಿನಿಧಿಗಳು ಗಂಭೀರವಾಗಿ ಪರಿಗಣಿಸಿ ಉತ್ತಮ ಕೆಲಸ ನಿರ್ವಹಿಸುವವರ ಬೆಂಬಲಕ್ಕೆ ನಿಲ್ಲಬೇಕಾಗಿದೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...