ಚಿತ್ರದುರ್ಗ | ನಾಗಮೋಹನ್ ದಾಸ್ ವರದಿ ಅವೈಜ್ಞಾನಿಕ, ಭೋವಿ ಜನಾಂಗಕ್ಕೆ ಜನಸಂಖ್ಯಾವಾರು ಮೀಸಲಾತಿ ನೀಡಿ; ಇಮ್ಮಡಿ ಸಿದ್ದರಾಮೇಶ್ವರ ಶ್ರೀ

Date:

ನ್ಯಾ. ನಾಗಮೋಹನದಾಸ್ ಆಯೋಗವು ಡಿ ಗುಂಪಿಗೆ ಕೇವಲ 4% ಮೀಸಲಾತಿ ನಿಗದಿ ಮಾಡಿರುವುದು ಮೇಲ್ನೋಟಕ್ಕೆ ಅವೈಜ್ಞಾನಿಕವಾಗಿದೆ. ಭೋವಿ ಸಮಾಜಕ್ಕೆ 2026ರಲ್ಲಿ ಕೇಂದ್ರ ಸರ್ಕಾರ ನಡೆಸುವ ಜನಗಣತಿ, ಸಾಮಾಜಿಕ ಮತ್ತು ಆರ್ಥಿಕ ಸೂಚಕಗಳ ಆಧಾರದ ಮೇಲೆ ಜನಸಂಖ್ಯಾವಾರು ಪ್ರತ್ಯೇಕ ಒಳಮೀಸಲಾತಿಯನ್ನು ಕಲ್ಪಿಸಲು ಒತ್ತಾಯಿಸುತ್ತೇವೆ. ಹಾಗೂ ದೋಷ ಪೂರಿತ ನ್ಯಾ. ನಾಗಮೋಹನದಾಸ್ ವರದಿಯನ್ನು ತಿರಸ್ಕರಿಸಬೇಕು ಎಂದು ಚಿತ್ರದುರ್ಗ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳ ನೇತೃತ್ವದ ಭೋವಿ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ.

“ಡಿ ಗುಂಪಿಗಿಂತ ಅನಕ್ಷರತೆ , ಪಿಯೂಸಿ , ಪದವಿ ತೇರ್ಗಡೆ , ಸ್ನಾತಕೋತ್ತರ ಶಿಕ್ಷಣ , ಇಂಜಿನಿಯರಿಂಗ ಶಿಕ್ಷಣ , ರಾಜ್ಯ ಸರ್ಕಾರಿ ಉದ್ಯೋಗ , ಕೇಂದ್ರ ಸರ್ಕಾರಿ ಉದ್ಯೋಗ ಸ್ವಂತ ಮನೆ , ಭೂ ಒಡೆತನ ಹೀಗೆ ಹಲವು ಮಾನದಂಡಗಳಲ್ಲಿ ಬಿ ಮತ್ತು ಸಿ ಗುಂಪು , ಡಿ ಗುಂಪಿಗಿಂತ ಸ್ಪಷ್ಟವಾಗಿ ಮಂದೆ ಇದೆ.  ಡಿ ಗುಂಪಿನವರು 26ರ ಪೈಕಿ 19 ಮಾನದಂಡಗಳಲ್ಲಿ ಹಿಂದೆ ಇದೆ. ಒಳಮೀಸಲಾತಿ ನೀಡುವ ಸಮಯದಲ್ಲಿ ನಿಖರವಾದ ವೈಜ್ಞಾನಿಕ ಅಂಕಿಅಂಶಗಳನ್ನು ಪಡೆದು ಭೋವಿ ಸಮಾಜವನ್ನು ಪ್ರತ್ಯೇಕ ಗುಂಪಾಗಿ ಸೃಜಿಸಲು ವಿನಂತಿಸುತ್ತೇವೆ” ಎಂದು ಒತ್ತಾಯಿಸಿದ್ದಾರೆ.

“ನ್ಯಾ|| ನಾಗಮೋಹನ್‌ದಾಸ್‌ರವರ ವರದಿಯಂತೆ ರಾಜ್ಯದ ಪರಿಶಿಷ್ಟ ಜಾತಿ ಜನಸಂಖ್ಯೆ 1 ಕೋಟಿ 7ಲಕ್ಷ ಹಾಗೂ ಭೋವಿ ಜನಾಂಗದ ಜನಸಂಖ್ಯೆ 11,29,301 ಇದೆ. 2001-11 ರ ಜನಸಂಖ್ಯೆಯ ದಶಕವಾರು ಬೆಳವಣಿಗೆಯ ಪ್ರಮಾಣ 22.31% ರಷ್ಟಿದೆ. ಇದೇ ಮಾನದಂಡವನ್ನು ಅನುಸರಿಸಿದರೂ 2011-2025 ಅಂದರೆ 15 ವರ್ಷಗಳ ನಂತರದ ಜನಸಂಖ್ಯೆ 15 ಲಕ್ಷವಾಗಬೇಕಿದೆ. ತರಾತುರಿಯಲ್ಲಿ ಅಲ್ಪ ಸಮಯದಲ್ಲಿ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲು ಅವೈಜ್ಞಾನಿಕ ಮಾರ್ಗಗಳನ್ನು ಬಳಸಿ ಪ್ರಮಾದ ಎಸಗಲಾಗಿದೆ” ಎಂದು ಆಪಾದಿಸಲಾಗಿದೆ.

1002504087

“ಪಡಿತರ ಚೀಟಿಯನ್ನು ಒಂದು ಮಾನದಂಡವಾಗಿ ಬಳಸ ಪರಿಶಿಷ್ಟ ಜಾತಿ ಕುಟುಂಬಗಳನ್ನು ಗುರುತಿಸುವಲ್ಲಿ ಲೋಪವಾಗಿ ಸುಮಾರು 30 ಲಕ್ಷ ಜನರನ್ನು ಕೈ ಬಿಡಲಾಗಿದೆ ಹಾಗೂ ಭೋವಿ ಜನಾಂಗದ ಸುಮಾರು 3.5 ಲಕ್ಷ ಜನರನ್ನು ಸಮೀಕ್ಷೆಯಿಂದ ಕೈಬಿಡಲಾಗಿದೆ” ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ವೋಚ್ಚನ್ಯಾಯಾಲಯದ ಆಗಸ್ಟ್ 01, 2024ರ ತೀರ್ಪಿನಂತೆ ಪರಿಶಿಷ್ಟ ಜಾತಿಗಳು ವರ್ಗಿಕರಿಸಿ ಈ ಕೆಳಗಿನ ಮಾನದಂಡಗಳನ್ನು ಅನುಸರಿಸಬೇಕೆಂದು ಸೂಚಿಸುತ್ತದೆ.
1. ಶೈಕ್ಷಣಿಕ ಹಿಂದುಳಿದಿರುವಿಕೆ
2. ಸರ್ಕಾರಿ ಉದ್ಯೋಗ ಅಥÀವಾ ಸಾರ್ವಜನಿಕ ಸಂಸ್ಥೆಗಳು ಪ್ರಾತಿನಿಧ್ಯ
3. ಆರ್ಥಿಕ ನೈತಿಕತೆ
4. ಸಾಮಾಜಿಕ ಹಿಂದುಳಿದಿರುವಿಕೆ.
ವರದಿಯಲ್ಲಿ ತಿಳಿಸಿರುವಂತೆ ಈ ಎಲ್ಲಾ ಮಾನದಂಡಗಳಲ್ಲಿ ಭೋವಿ ಜನಾಂಗ, ಅತ್ಯಂತ ಕಡಿಮೆ ಅಭಿವೃದ್ಧಿ ಹೊಂದಿದ್ದರು ಭೋವಿ ಸಮಾಜವನ್ನು ಎಡಗೈ, ಬಲಗೈ ಹಾಗೂ ಬಂಜಾರ ಸಮಾಜಗಳಂತಹ ಮುಂದುವರೆದ ಗುಂಪಿಗೆ ಸೇರಿಸಲಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ವರದಿಯಲ್ಲಿರುವ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ಉದ್ಯೋಗ ಸೂಚಕಗಳಿಗೂ ಹಾಗೂ ಮೀಸಲಾಗಿರುವ ಶೇಕಡ ನಿಗದಿ ಪಡೆಸಿರುವುದಕ್ಕೂ ಯಾವುದೇ ತಾಳೇ ಇಲ್ಲದಿರುವುದು ಸ್ಪಷ್ಟವಾಗಿ ಕಂಡು ಬರುತ್ತದೆ. ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸೂಚಕಗಳು ಮತ್ತು ವಿವಿಧ ಗುಂಪುಗಳಲ್ಲಿ ನಿಗದಿಪಡಿಸಿದ ಮೀಸಲಾತಿಯ ಪ್ರಮಾಣಗಳ ನಡುವೆ ಯಾವುದೇ ಪರಸ್ಪರ ಸಂಬಂಧವಿಲ್ಲ” ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.‌

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನರೇಗಾ ಕೆಲಸ, ಕೂಲಿ ವಿಳಂಬ ವಿರೋಧಿಸಿ ಗ್ರಾಕೂಸ್ ಕಾರ್ಯಕರ್ತರ ಪತ್ರ ಚಳುವಳಿ

ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಸಚಿವ ಸಪುಂಟದಲ್ಲಿ ತಮ್ಮ ಮನವಿಯನ್ನು ಚರ್ಚಿಸಲಾಗುವುದು ಎಂದು ತಿಳಿಸಿದರು ಎನ್ನಲಾಗಿದೆ.

ಮನವಿ ಸಲ್ಲಿಸುವ ವೇಳೆ ನಿಯೋಗದಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ, ವಿ ಹನುಮಂತಪ್ಪ, ರವಿ ಪೂಜಾರಿ, ಜಯಶಂಕರ, ಮುರಳಿಧರ ಬಂಡೆ, ಶ್ರೀಮತಿ ಮಂಜುಳ, ಶ್ರೀಮತಿ ಗೀತಾ, ತಿಪ್ಪಣ್ಣ ಒಡೆಯರಾಜು, ಕೃಷ್ಣಪ್ಪ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...