ಚಿತ್ರದುರ್ಗ | ಕುಂಚಿಟಿಗರಿಗೆ ಒಬಿಸಿ ಮೀಸಲಾತಿ; ಸರ್ಕಾರದ ದೆಹಲಿ ಪ್ರತಿನಿಧಿ ಜಯಚಂದ್ರಗೆ ಬಹಿರಂಗ ಪತ್ರ

Date:

ಸೆಪ್ಟೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆದಲ್ಲಿ ಕುಂಚಿಟಿಗರಿಗೆ ಒಬಿಸಿ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ. ಈ ಶಿಫಾರಸನ್ನು ಕೇಂದ್ರಕ್ಕೆ ಕಳುಹಿಸುವಲ್ಲಿ ವಿಳಂಬವಾಗುತ್ತಿದೆ. ಕಂಚಿಟಿಗ ಸಮುದಾಯದವರೇ ಆದ ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರೂ ಕೂಡ ಈ ಬಗ್ಗೆ ಮೌನವಾಗಿದ್ದಾರೆ. ಇದು ಖಂಡನೀಯ ಎಂದು ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘ ಹೇಳಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಸಂಘದ ಪದಾಧಿಕಾರಿಗಳು ಸಭೆ ನಡೆಸಿದ್ದಾರೆ. ಕುಂಚಿಟಿಗ ಸಮುದಾಯದ ಒಗ್ಗಟ್ಟು ಮತ್ತು ಮೀಸಲಾತಿ ಕುರಿತು ಜಯಚಂದ್ರ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಸಭೆಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಕಸವನಹಳ್ಳಿ ರಮೇಶ್, “ಈ ಹಿಂದೆಕುಂಚಿಟಿಗರನ್ನು ಕುಂಚಿಟಿಗ ಒಕ್ಕಲಿಗ ಹಾಗೂ ಕುಂಚಿಟಿಗ ಲಿಂಗಾಯಿತ ಎಂದು ಹೊಡೆದು ಇಬ್ಭಾಗ ಮಾಡಲಾಗಿದೆ. ಇದು ಕುಂಚಿಟಿಗ ಸಮಾಜಕ್ಕೆ ಮರ್ಮಾಘಾತವನ್ನು ಉಂಟು ಮಾಡಿದೆ. ಈಗ ಮತ್ತೊಮ್ಮೆ ಓಬಿಸಿ ಮೀಸಲಾತಿ ಕೊಡಿಸುವ ಸಂದರ್ಭದಲ್ಲಿ ಕುಂಚಿಟಿಗ ಕುಲಶಾಸ್ತ್ರ ಅಧ್ಯಯನ ವರದಿಯಲ್ಲಿ ಇಲ್ಲದ ನಗರ ಮತ್ತು ಗ್ರಾಮೀಣ ಎನ್ನುವ ಅಂಶವನ್ನು ಸೇರಿಸುವ ಮುಖಾಂತರ ಮತ್ತೊಮ್ಮೆ ಕುಂಚಿಟಿಗರನ್ನು ಇಬ್ಬಾಗ ಮಾಡಲು ಮುಂದಾಗಿದ್ದಾರೆ. ಹೊಟ್ಟೆ ಪಾಡಿಗಾಗಿ ನಗರ ಪ್ರದೇಶಗಳಿಗೆ ಗುಳೆ ಹೋಗಿರುವ ಕುಂಚಿಟಿಗರಿಗೆ ಮೀಸಲಾತಿ ಕೈ ತಪ್ಪಿ ಅಪಾರವಾದ ನಷ್ಟವಾಗಲಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಂಚಿಟಿಗ ಸಮಾಜ ನಗರ ಮತ್ತು ಗ್ರಾಮೀಣ ಎಂದು ಇಬ್ಬಾಗವಾದರೆ, ಅದರ ಸಂಪೂರ್ಣ ಹೊಣೆಗಾರಿಕೆ ಜಯಚಂದ್ರ ಅವರದ್ದೇ ಆಗಲಿದೆ. ಹಾಗಾಗಿ, ಅವರು ಇತಿಹಾಸದಲ್ಲಿ ಕುಂಚಿಟಿಗರಿಗೆ ಗ್ರಾಮೀಣ ಮತ್ತು ನಗರವೆಂದು ಇಬ್ಬಾಗಿಸಿ ತಾರತಮ್ಯ ಮಾಡದಂತೆ ಒಬಿಸಿ ಮೀಸಲಾತಿ ದೊರೆಯುವಂತೆ ಮಾಡಬೇಕು. ಇಲ್ಲವಾದಲ್ಲಿ ಕುಂಚಿಟಿಗರನ್ನು ಇಬ್ಬಾಗ ಮಾಡಿದ ಅಪಕೀರ್ತಿಗೆ ಅವರು ಒಳಗಾಗುತ್ತಾರೆ” ಎಂದು ಅವರು ಹೇಳಿದ್ದಾರೆ.

ಸಭೆಯಲ್ಲಿ ಕುಲಶಾಸ್ತ್ರ ಅಧ್ಯಯನಕಾರ ಎಸ್ ವಿ ರಂಗನಾಥ್, ತಾಲೂಕು ಅಧ್ಯಕ್ಷ ಹುಲಿ ರಂಗನಾಥ್, ಗೌರವಾಧ್ಯಕ್ಷ ಎಂ ಗಿರಿ ಸ್ವಾಮಿ, ಪ್ರಧಾನ ಕಾರ್ಯದರ್ಶಿ ವಿ ಕುಬೇರಪ್ಪ, ಖಜಾಂಚಿ ಪೆಪ್ಸಿ ಹನುಮಂತರಾಯ, ನಿರ್ದೇಶಕ ಕೆ ಕೆ ಹಟ್ಟಿ ಜಯಪ್ರಕಾಶ್, ಕುಂಚಿಟಿಗ ಇತಿಹಾಸಕಾರ ಕ್ಯಾದಿಗುಂಟೆ ಜಯರಾಯ್ಯ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...