ಚಿತ್ರದುರ್ಗ | ಉಪವಿಭಾಗಾಧಿಕಾರಿಗಳ ಭರವಸೆ ಹಿನ್ನೆಲೆ ಅನಾಥ ಸೇವಾಶ್ರಮ ಅವ್ಯವಹಾರ ಪ್ರತಿಭಟನೆ ತಾತ್ಕಾಲಿಕ ಮುಂದೂಡಿಕೆ

Date:

ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅವ್ಯವಹಾರ ತನಿಖೆ ಮತ್ತು ಆಡಳಿತಾಧಿಕಾರಿ ನಿಯೋಜನೆಗೆ ಒತ್ತಾಯಿಸಿ ಅನಾಥ ಸೇವಾಶ್ರಮ ರಕ್ಷಣಾ ಸಮಿತಿ ನೆಡೆಸುತ್ತಿರುವ ಹೋರಾಟಕ್ಕೆ ತಾತ್ಕಾಲಿಕ ಜಯ ಸಿಕ್ಕಂತಾಗಿದ್ದು, ಎಂಟನೇ ದಿನದ ಪ್ರತಿಭಟನೆ ನೆಡೆಯುವ ಸ್ಥಳಕ್ಕೆ ಚಿತ್ರದುರ್ಗ ಉಪವಿಭಾಗಾಧಿಕಾರಿ, ಜಿಲ್ಲಾ ರಿಜಿಸ್ಟ್ರಾರ್, ತಹಶೀಲ್ದಾರವರು ಭೇಟಿ ನೀಡಿ ಪರಿಶೀಲನೆ ನೆಡೆಸಿ ಪರಿಹರಿಸುವ ಭರವಸೆ ನೀಡಿದ್ದಾರೆ.

1002139356 1
ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮ ಸಂಸ್ಥಾಪಕರು “ತಿರುಕ” ಎಂದೇ ಹೆಸರಾಗಿದ್ದ ರಾಘವೇಂದ್ರ ಗುರೂಜಿ

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿಯ ಆಶ್ರಮದ ಬಳಿ ನಡೆಯುತ್ತಿದ್ದ ಎಂಟನೇ ದಿನದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಚಿತ್ರದುರ್ಗ ಉಪವಿಭಾಗಾಧಿಕಾರಿಗಳು ಮತ್ತು ಅಧಿಕಾರಿಗಳು ಅನಾಥ ಸೇವಾಶ್ರಮ ರಕ್ಷಣಾ ಸಮಿತಿಯ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಸಕಾರಾತ್ಮಕವಾಗಿ ಸ್ಪಂದಿಸಿ ಬೇಡಿಕೆಗಳನ್ನು ಅತಿ ಬೇಗ ಬಗೆಹರಿಸಿಕೊಡುತ್ತೇವೆ, ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

1002139341
ಮಲ್ಲಾಡಿಹಳ್ಳಿ ಸೇವಾಶ್ರದ ವಿವಿಧ ವಿದ್ಯಾಸಂಸ್ಥೆ, ಆಡಳಿತ ಕಟ್ಟಡಗಳು

ಈ ಬಗ್ಗೆ ಈದಿನ ಡಾಟ್ ಕಾಮ್ ನೊಂದಿಗೆ ಮಾತನಾಡಿದ ಮುಖಂಡ ಸಂತೋಷ್ “ತಿರುಕ ಎಂದೇ ಹೆಸರಾಗಿದ್ದ ರಾಘವೇಂದ್ರ ಗುರೂಜಿ ಕಟ್ಟಿದ ಮಲ್ಲಾಡಿಹಳ್ಳಿ ಆಶ್ರಮದ ಉಳಿವಿಗಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಉಪವಿಭಾಗಾಧಿಕಾರಿ, ಜಿಲ್ಲಾ ರಿಜಿಸ್ಟ್ರಾರ್, ತಹಶೀಲ್ದಾರರವರು ಭೇಟಿ ನೀಡಿ ಆಡಳಿತಾಧಿಕಾರಿ ನೇಮಕ ಮತ್ತು ಅವ್ಯವಹಾರ ತನಿಖೆಗೆ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಭರವಸೆಗೆ ಗೌರವಿಸುವ ಸಲುವಾಗಿ ಕಾಲಾವಕಾಶ ನೀಡಿ ವಿರಾಮ ಹಾಕಲಾಗಿದೆ. ಭರವಸೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು. ಹೋರಾಟಕ್ಕೆ ಸಹಕಾರ ಕೊಟ್ಟ ಹೋರಾಟದ ಎಲ್ಲಾ ಸಮಿತಿಯವರಿಗೆ, ಗ್ರಾಮಸ್ಥರಿಗೆ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಗೆ, ಆಶ್ರಮದ ಭಕ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪತ್ರಕರ್ತರ ಮೇಲೆ ಹಲ್ಲೆ ವಿರುದ್ಧ ಕ್ರಮಕ್ಕೆ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿಭಟನೆ

ಈ ವೇಳೆ ಓಂಕಾರ ಮೂರ್ತಿ ವಕೀಲರು, ಉಮೇಶ್, ಶರತ್ ಕುಮಾರ್, ಚೇತನ್, ದುಮ್ಮಿ ಚಿಕ್ಕಪ್ಪ ಸಿದ್ದಪ್ಪ, ಪತ್ರಕರ್ತ ಚಿತ್ತಪ್ಪ, ಮನ್ಸೂರ್ ಪಾಷಾ, ಶಿವಪುರ ಹಾಲೇಶ್‌, ಚನ್ನಪ್ಪನಹಟ್ಟಿ ಜಯ್ಯಪ್ಪ ಗೌಡ, ವಿನೋದ್, ಆಂಜಿನಪುರ ಜಗನ್ನಾಥ, ಕೆಂಗುಂಟೆ ಮಾಜಿ ಉಪಾಧ್ಯಕ್ಷ ಬಸವರಾಜಪ್ಪ, ರಾಮಘಟ್ಟ ನಾಗರಾಜ್, ಕೆಂಗುಂಟೆ ಘಟ್ಟಿ ಓಂಕಾರಪ್ಪ, ಮಲ್ಲಾಡಿಹಳ್ಳಿ ವೆಂಕಟೇಶ್, ಗೋಪಾಲಪ್ಪ ಶಿಕ್ಷಕರು, ಮುಸ್ಲಿಂ ಮುಖಂಡ ಇಮ್ರಾನ್ ಸಾಬ್, ಗ್ರಾಮ ಪಂಚಾಯಿತಿ ಸದಸ್ಯ ಬಾಬೂಜಿ ಸೇರಿದಂತೆ ನೂರಾರು ಮುಖಂಡರು, ಆಶ್ರಮದ ಭಕ್ತರು, ಅನಾಥ ಸೇವಾಶ್ರಮ ರಕ್ಷಣಾ ಸಮಿತಿಯ ಸದಸ್ಯರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...