ಚಿತ್ರದುರ್ಗ | ಅಂಬೇಡ್ಕರ್ ಶಿಕ್ಷಣ, ಸಾಧನೆಯ ಬೆನ್ನಿಗೆ ನಿಂತ ರಮಾಬಾಯಿ, ಭಾರತರತ್ನ ಪ್ರಶಸ್ತಿಗೆ ಅರ್ಹರು

Date:

ಬಾಬಾ ಸಾಹೇಬರ ಶಿಕ್ಷಣಕ್ಕೆ ತೊಡಕಾಗಬಾರದೆಂದು, ಮಗುವಿನ ಸಾವಿನ ವಿಷಯವನ್ನೂ ತಿಳಿಸದೆ ನೋವನ್ನು ತನ್ನಲ್ಲೇ ಅದುಮಿಟ್ಟುಕೊಂಡ ಸಹನಾಮೂರ್ತಿ ರಮಾಬಾಯಿ ಭಾರತರತ್ನ ಪ್ರಶಸ್ತಿಗೆ ಅರ್ಹರಾಗಿದ್ದಾರೆ ಎಂದು ಚಿತ್ರದುರ್ಗದ ಡಾ. ಬಿ ಆರ್ ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ ಪಿ ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.

ಚಿತ್ರದುರ್ಗ ನಗರದ ಕೋಟೆ ನಾಡು ಬುದ್ಧ ವಿಹಾರ ಕೇಂದ್ರದಲ್ಲಿ ಆಯೋಜಿಸಿದ್ದ ರಮಾಬಾಯಿ ಅಂಬೇಡ್ಕರ್ ಅವರ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು “ಚಿಕ್ಕವಯಸ್ಸಿಗೆ ಅಂಬೇಡ್ಕರರನ್ನು ಮದುವೆಯಾದರು. ಅವರ ಎಲ್ಲ ಹೋರಾಟ, ತ್ಯಾಗಕ್ಕೆ ಆಕ್ಷೇಪಿಸದೇ, ಹೆಗಲಾಗಿ ನಿಂತು ಭಾರತೀಯರಿಗೆ ಮಾತೆಯಾಗಿದ್ದಾರೆ. ಆಕೆಯ ತ್ಯಾಗ, ಬಾಬಾರ ಮೇಲಿನ ಪ್ರೀತಿ, ಸಂಸಾರದ ಹೊಣೆ ನಿಭಾಯಿಸಿದ ರೀತಿ, ಭಾರತದ ಚರಿತ್ರೆಯನ್ನು ಬದಲಾಯಿಸುವಂತೆ ಅಂಬೇಡ್ಕರ್ ವ್ಯಕ್ತಿತ್ವ ರೂಪಿಸುವಲ್ಲಿ ಆಕೆಯ ಪಾತ್ರ ಅಜರಾಮರವಾಗಿದೆ. ಸಮಾನತೆ ಬಯಸುವವರ ಆತ್ಮದಲ್ಲಿ ಜೈ ಭೀಮ್ ನಾಮ ಇರುವವರೆಗೂ ರಮಾಬಾಯಿ ಎಂಬ ಹೆಸರು ಅಚ್ಚಳಿಯದೇ ಉಳಿಯುತ್ತದೆ” ಎಂದು ಹೆಮ್ಮೆ ವ್ಯಕ್ತಪಡಿಸಿದರು.

“ಸಗಣಿ ಮಾರಿ ಅಂಬೇಡ್ಕರವರ ಓದಿಗೆ ಸಹಕರಿಸಿ, ತಮ್ಮ ಜೀವನ ತ್ಯಾಗ ಮಾಡಿ ಶೋಷಿತರ ಕತ್ತಲೆಯ ಬಾಳಿಗೆ ಸೂರ್ಯನನ್ನು ನೀಡಿದ ಮಹಾತಾಯಿ ರಮಾಬಾಯಿ. ಅಲ್ಲದೆ ಅನಕ್ಷರತೆಯ ಪರಿಣಾಮ ಅರಿತಿದ್ದ ರಮಾಬಾಯಿಯವರು ತನ್ನಂತೆಯೇ ಬೇರೆ ಮಹಿಳೆಯರು ಅನುಭವಿಸಬಾರೆದಂದು ತಮ್ಮ ಪತಿಯ ಜೊತೆಗೂಡಿ ಇಡೀ ಜೀವನದುದ್ದಕ್ಕೂ ಶೋಷಿತರು, ಮಹಿಳೆಯರ ಶಿಕ್ಷಣ, ಹಕ್ಕುಗಳನ್ನು ದೊರಕಿಸಿಕೊಡಲು ಹೋರಾಟ ಮಾಡುವ ಮೂಲಕ ಅನನ್ಯವಾದ ಸಾಮಾಜಿಕ ಕೊಡುಗೆ ನೀಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ದೇಶ ಕಟ್ಟುವ ಕಾರ್ಯಕ್ಕೆ ನಿರಂತರವಾಗಿ ಸಹಕಾರ ನೀಡಿದ, ಶ್ರಮವಹಿಸಿದ ಮಾತೆ ರಮಾಬಾಯಿ. ಅಂಬೇಡ್ಕರ್ ಅವರ ಯಶಸ್ಸಿಗಾಗಿ ಮಾಡಿದ ತ್ಯಾಗ, ಸಾಮಾಜಿಕ ತುಡಿತದ ಮಾದರಿ ನಡೆಯನ್ನು ಇಂದಿನ ವಿದ್ಯಾರ್ಥಿಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಅವರ ಚರಿತ್ರೆ ಪಠ್ಯಕ್ಕೆ ಸೇರ್ಪಡೆಯಾಗಬೇಕು. ಸಮಸ್ತ ಮಹಿಳೆಯರಿಗೆ ರಮಾಬಾಯಿ ಅವರು ಆದರ್ಶವಾಗಿದ್ದಾರೆ. ಅಲ್ಲದೆ ಸರ್ಕಾರದಿಂದ ರಮಾಬಾಯಿ ಜಯಂತಿ ಆಚರಣೆ ಮಾಡುವಂತೆ ಘೋಷಿಸಿ, ಅವರಿಗೆ ಮರಣೋತ್ತರವಾಗಿ ‘ಭಾರತ ರತ್ನ’ ಪ್ರಶಸ್ತಿ ನೀಡಿ ಗೌರವಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪರಶುರಾಂಪುರ ತಾಲೂಕು ಕೇಂದ್ರಕ್ಕಾಗಿ ಫೆ.10ಕ್ಕೆ ಚಳುವಳಿ; ಅಖಂಡ ಕರ್ನಾಟಕ ರೈತ ಸಂಘ

ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಸುಮಾ, ಉಷಾ, ಉಪನ್ಯಾಸಕರಾದ ಈ ನಾಗೇಂದ್ರಪ್ಪ, ಶಾಂತಮ್ಮ, ಶಕುಂತಲಾ, ಸಚಿನ್ ಗೌತಮ್, ಬೆಸ್ಕಾಂ ತಿಪ್ಪೇಸಾಮಿ, ಗಿರಿಜಾ, ತಿಪ್ಪಮ್ಮ, ತಿಪಟೂರು ಮಂಜು, ಬನ್ನಿಕೋಡ್ ರಮೇಶ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪತ್ನಿ ಕೆಲಸದಾಳಲ್ಲ, ಗಂಡನೂ ಮನೆಗೆಲಸಗಳಲ್ಲಿ ನೆರವಾಗಬೇಕು’ – ಸುಪ್ರೀಂ ಕೋರ್ಟ್‌

ಪತ್ನಿ ಅಡುಗೆ, ಇತ್ಯಾದಿ ಮನೆಗೆಲಸಗಳನ್ನು ಸರಿಯಾಗಿ ಮಾಡುತ್ತಿಲ್ಲ. ಇದು ಕ್ರೌರ್ಯ ಎಂದು...

ಚಿತ್ರದುರ್ಗ | ಆಸಿಡ್ ದಾಳಿ: ಸಂತ್ರಸ್ತರ ಆರೋಗ್ಯ ವಿಚಾರಣೆ

ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ ನಡೆದ ಆಸಿಡ್ ದಾಳಿಯಲ್ಲಿ ಗಾಯಗೊಂಡು ದಾವಣಗೆರೆಯ ಎಸ್.ಎಸ್....

ಚಿತ್ರದುರ್ಗ | ಕೌಟುಂಬಿಕ ಕಲಹ: ಪತ್ನಿ, ಮಗಳು ಸೇರಿ ಐವರ ಮೇಲೆ ಆಸಿಡ್‌ ದಾಳಿ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನನ್ನು ಬಿಟ್ಟು ಹೋಗಿದ್ದ ಪತ್ನಿ,...

ಕಥುವಾ ಪ್ರಕರಣ | ಭದ್ರತೆ ಕಡಿತ; ‘ಮಗಳು ಶಾಲೆಗೂ ಹೋಗುತ್ತಿಲ್ಲ’ ಎಂದ ವಕೀಲೆ ದೀಪಿಕಾ

2018ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ...