ಚಿತ್ರದುರ್ಗ | ರಂಜಾನ್ ಮಾಸ; ಮಸೀದಿಯಲ್ಲಿ ಸರ್ವಧರ್ಮಿಯರ ಇಫ್ತಾರ್ ಕೂಟ.

Date:

ಚಿತ್ರದುರ್ಗದ ಮಸ್ಜಿದ್ ಎ ಅಲಾ, ಧಮ್ಮ ಕೇಂದ್ರ, ವಿಮುಕ್ತಿ ವಿದ್ಯಾ ಸಂಸ್ಥೆ ಮತ್ತು ಶಾಂತಿ & ಸೌಹಾರ್ದ ವೇದಿಕೆ ಇವರ ವತಿಯಿಂದ ರಂಜಾನ್ ಮಾಸದ ಪ್ರಯುಕ್ತ ಮುಸ್ಲಿಂ, ಕೃೆಸ್ತ ಮತ್ತು ಹಿಂದೂ ಧರ್ಮೀಯರಿಂದ ಮಸ್ಜಿದ್ ಎ.ಅಲಾ ಮಸೀದಿಯಲ್ಲಿ ಸೌಹಾರ್ದ ಇಫ್ತಾರ್ ಕೂಟವನ್ನು ಏರ್ಪಡಿಸಲಾಗಿತ್ತು.

1001698771
ಚಿತ್ರದುರ್ಗದ ಮಸೀದಿಯ ಸೌಹಾರ್ದ ಇಫ್ತಾರ್ ನಲ್ಲಿ ಮಹಿಳಯರು.

ಮಸ್ಜಿದ್ ಎ.ಅಲಾ ಮಸೀದಿಯ ಮುಖಂಡರಾದ ದಾದಾಪೀರ್ ಮಾತನಾಡಿ, “ಸರ್ವ ಧರ್ಮಿಯರು ಸೇರಿ ಇಪ್ತಾರ್ ಕೂಟ ಹಮ್ಮಿಕೊಂಡಿರುವುದು ಸಮಯೋಚಿತವಾಗಿದೆ. ಮಹಮದ್ ಫೃೆಗಂಬರ್ ಜಗತ್ತಿನ ಶಾಂತಿ ಬಯಸಿದವರು ಮತ್ತು ಶಾಂತಿ ಸಂದೇಶ ನೀಡಿದವರು. ಅಲ್ಲಾ, ನಿರಾಹಾರಿ, ನಿರಾಕಾರಿ ಆದ್ದರಿಂದಲೇ ಭಗವಂತ ಅನ್ನುತ್ತಾರೆ. ಜಗತ್ತಿನ ಜೀವರಾಶಿಗೆ ಒಳಿತನ್ನು ಬಯಸುವನೇ ಭಗವಂತ. ಹಾಗಾಗಿ ಎಲ್ಲಾ ಧರ್ಮಗಳಲ್ಲೂ ಶಾಂತಿಯನ್ನು ಕಾಣಬಹುದು” ಎಂದು ತಿಳಿಸಿದರು.

ಕಾಂಗ್ರೆಸ್ ಅಧ್ಯಕ್ಷರು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಕೆ.ತಾಜ್ ಪೀರ್ ಮಾತನಾಡಿ, “ಮುಸ್ಲಿಂ ಸಮುದಾಯದಲ್ಲಿ ಪರಸ್ಪರ ಗೌರವಿಸುವುದು. ಗೌರವ ಭಾವನೆಯಿಂದ ನಡೆದುಕೊಳ್ಳುವುದು ಈ ಧರ್ಮದ ಮೂಲಮಂತ್ರ. ಒಬ್ಬರಿಗೊಬ್ಬರು ಗೌರವಿಸುವುದು, ಪ್ರೀತಿಸುವುದು, ಶಾಂತಿ & ಸೌಹಾರ್ದತೆಯಿಂದ ನಡೆದುಕೊಳ್ಳುವ ಮೂಲಕ ಸೌಹಾರ್ದ ಸಮಾಜ ಕಟ್ಟಬೇಕಿದೆ” ಎಂದು ಆಶಯ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001698763 1
ಮಸ್ಜಿದ್ ಎಂ ಅಲಾ ಮಸೀದಿಯ‌ ಸೌಹಾರ್ಧ ಇಫ್ತಾರ್ ಕೂಟದಲ್ಲಿ ಸರ್ವಧರ್ಮೀಯರು

ವಿಮುಕ್ತಿ ವಿದ್ಯಾ ಸಂಸ್ಥೆಯ ನಿರ್ದೇಶಕರಾದ ಆರ್.ವಿಶ್ವ ಸಾಗರ್ ಮಾತನಾಡಿ, “ದೇಶ, ರಾಜ್ಯ, ಜಿಲ್ಲೆಯಲ್ಲೂ ಶಾಂತಿ ವಾತಾವರಣ ನಿರ್ಮಾಣವಾಗಬೇಕು. ಕೆಲ ಶಕ್ತಿಗಳ ವಿಚಾರದಲ್ಲಿ ಜಾಗ್ರತೆ ಅಗತ್ಯವಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಮಾಜ ಪರಿವರ್ತನಾ ಚಳುವಳಿಯಿಂದ ಮನೆ ಮನೆಗೆ ಬುದ್ಧ, ಬಸವ, ಅಂಬೇಡ್ಕರ್ ಅಭಿಯಾನ

ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಫಾದರ್ ಅಲೆಕ್ಸಾಂಡರ್, ಕರ್ನಾಟಕ ಶಾಂತಿ & ಸೌಹಾರ್ದ ವೇದಿಕೆ ಅಧ್ಯಕ್ಷರಾದ ನರೇನಹಳ್ಳಿ ಅರುಣ್ ಕುಮಾರ್, ತಮಟಕಲ್ಲು ಹನುಮಂತಪ್ಪ, ಹೆಚ್.ಕುಮಾರ್, ಅರಣ್ಯ ಸಾಗರ್, ವಿಮುಕ್ತಿ ವಿದ್ಯಾ ಸಂಸ್ಥೆ ಅಧ್ಯಕ್ಷರಾದ ಶ್ರೀಮತಿ ಅನ್ನಪೂರ್ಣ ವಿಶ್ವ ಸಾಗರ್, ಬೀಬಿಜಾನ್, ಕೆ.ಬಿ.ನಾಗರತ್ನಮ್ಮ, ಟಿ.ಶಫೀವುಲ್ಲಾ, ಬೃೆಲಮ್ಮ ಮತ್ತು ಅಲಾ ಮಸ್ಜಿದ್ ನ ಮುಖಂಡರು ಪಾಲ್ಗೊಂಡಿದ್ದರು

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಎಚ್.ಪಿ.ವಿ ಲಸಿಕೆ ಅತ್ಯಂತ ಸುರಕ್ಷಿತ: ಡಾ. ಮೆಲ್ವಿನ್ ಕುಮಾರ್

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡುಬರುಲು ಹ್ಯೂಮನ್ ಪ್ಯಾಪಿಲೋಮ ವೈರಸ್(ಎಚ್.ಪಿ.ವಿ) ಹೆಚ್ಚಾಗಿ ಕಾರಣವಾಗುತ್ತದೆ....

ಚಿತ್ರದುರ್ಗ | ಭೀಕರ ಅಪಘಾತ: ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್...

ಚಿತ್ರದುರ್ಗ | ಅಡುಗೆ ಅನಿಲ ಕೊರತೆಯಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸರಬರಾಜು...

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...