ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

Date:

“ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದ ವಿವಿಧ ಭಾಗಗಳಲ್ಲಿ ಪೆಟ್ಟಿಗೆ ಅಂಗಡಿ, ಗೂಡಂಗಡಿ ಮುಂಗಟ್ಟುಗಳಲ್ಲಿ ಅಕ್ರಮವಾಗಿ ಮದ್ಯ ವ್ಯಾಪಾರ ನಡೆಯುತ್ತಿದ್ದು, ಕೂಡಲೇ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ) ಬಣದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮುಖಂಡರು ಅಬಕಾರಿ ಇಲಾಖೆಯ ನಿರೀಕ್ಷಕರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಮುಖಂಡರು “ಚಳ್ಳಕೆರೆ ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಚಿಕ್ಕ ದಿನಸಿ ಮಾರಾಟದ ಚಿಲ್ಲರೆ ಅಂಗಡಿಗಳು, ಗೂಡಂಗಡಿಗಳಲ್ಲಿ ಅನಧಿಕೃತವಾಗಿ ಮದ್ಯ ವ್ಯಾಪಾರವು ಅನಧಿಕೃತವಾಗಿ ನಿರ್ಭೀತಿಯಿಂದ ರಾಜಾರೋಷವಾಗಿ ನಡೆಯುತ್ತಿದ್ದು ಚಳ್ಳಕೆರೆ ನಗರದ ಮಧ್ಯದ ಅಂಗಡಿಗಳ ಮುಖಾಂತರ ಸರಬರಾಜು ಆಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ಮನೆ ಮನೆಗೆ ನೀರು, ತಂಪು ಪಾನೀಯಗಳು ಹೇಗೆ ಸರಬರಾಜು ಆಗುತ್ತದೆಯೋ, ಹಾಗೆ ಮದ್ಯದ ಬಾಟಲಿಗಳು ಸಹ ಮದ್ಯದ ಅಂಗಡಿಗಳಿಂದ ಗ್ರಾಮೀಣ ಪ್ರದೇಶದ ಚಿಲ್ಲರೆ ದಿನಸಿ ಅಂಗಡಿ, ಗೂಡಂಗಡಿಗಳಿಗೆ ಸರಬರಾಜಾಗುತ್ತಿದೆ. ಸ್ಥಳೀಯವಾಗಿ ಪಂಚಾಯಿತಿಯ ಅಧಿಕಾರಿಗಳು ಕೂಡ ಪ್ರಾಮಾಣಿಕವಾಗಿ ಗಮನಹರಿಸಿ ಅಕ್ರಮ ಮದ್ಯದ ಮಾರಾಟವನ್ನು ನಿಲ್ಲಿಸುವ ಪ್ರಯತ್ನ ಮಾಡುತ್ತಿಲ್ಲ. ಅಲ್ಲದೆ ರಸ್ತೆ ಬದಿಯ ಢಾಬಾ ಹೋಟೆಲ್ಗಳಲ್ಲಿ ಕೂಡ ಅಕ್ರಮ ಮದ್ಯ ಸರಬರಾಜು ಆಗುತ್ತಿದೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 09 29 at 12.39.12 PM 2

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಒಳಮೀಸಲಾತಿ ಆದೇಶ ಕಾನೂನಾಗಲು ಸುಗ್ರೀವಾಜ್ಞೆ ಜಾರಿಗೊಳಿಸಿ: ಮಾಜಿ ಸಚಿವ ಆಂಜನೇಯ

“ಈ ಅಕ್ರಮ ಮದ್ಯ ಮಾರಾಟದಿಂದಾಗಿ ಅನೇಕ ಯುವಕರು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿತದ ವ್ಯಸನಕ್ಕೆ ಒಳಗಾಗುತ್ತಿದ್ದು, ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ) ಬಣ ಒತ್ತಾಯಿಸುತ್ತದೆ. ಅನಧಿಕೃತ ಮದ್ಯದ ಮಾರಾಟವನ್ನು ಶೀಘ್ರ ಕ್ರಮ ಕೈಗೊಂಡು ನಿಲ್ಲಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಅಬಕಾರಿ ಇಲಾಖೆ ವಿರುದ್ದ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಾರಕ ಆಯುಧದೊಂದಿಗೆ ಓಡಾಟ: ಆತಂಕ ಭಯ ಹುಟ್ಟಿಸಿದ ವ್ಯಕ್ತಿ ಬಂಧಿಸಿದ ಪೊಲೀಸರು

ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾದ ಪಿ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಚಂದ್ರಣ್ಣ, ಗೌರವಾಧ್ಯಕ್ಷ ಭೋಜರಾಜು, ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಮುರಳಿ, ಗಿರೀಶ್ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...