ಚಿತ್ರದುರ್ಗ | ಹೆಣ್ಣು ಮಕ್ಕಳನ್ನು ಉಳಿಸಿ, ಓದಿಸಿ ಸುಶಿಕ್ಷಿತರಾಗಿಸಿ; ಪೊಲೀಸ್ ಉಪಾಧೀಕ್ಷಕ ದಿನಕರ್.

Date:

“ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ ಸುಶಿಕ್ಷಿತರಾಗಿಸಿ, ಭೇಟಿ ಬಚಾವ್ ಭೇಟಿ ಪಡಾವ್ ಎಂದು ಕಾನೂನು ಇದೆ ಅದನ್ನು ಪಾಲಿಸಿ” ಎಂದು ಚಿತ್ರದುರ್ಗ ಪೊಲೀಸ್ ಉಪಾಧೀಕ್ಷಕ ದಿನಕರ್ ಕರೆ ನೀಡಿದರು.

ಚಿತ್ರದುರ್ಗದಲ್ಲಿ ವಿಮುಕ್ತಿ ವಿದ್ಯಾ ಸಂಸ್ಥೆ, ಧಮ್ಮ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ‘ಹದಿ ಹರೆಯದ ಬಾಲಕಿಯರ ಜಾಗೃತಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು “ಹದಿಹರೆಯದ ಮಕ್ಕಳಿಗೆ ಯಾರಾದರೂ ಕಿರುಕುಳ, ದೌರ್ಜನ್ಯ, ಮತ್ತು ಬಾಲ್ಯ ವಿವಾಹ ಮಾಡಿದ್ದಾದರೆ ಸಂಬಂಧ ಪಟ್ಟವರೂ, ಅದಕ್ಕೆ ಸಹಾಯ ಮಾಡಿದವರೂ ಪ್ರಕರಣಕ್ಕೆ ಗುರಿಯಾಗುತ್ತಾರೆ. ಭೇಟಿ ಬಚಾವ್ ಭೇಟಿ ಪಡಾವ್, ಹೆಣ್ಣು ಮಕ್ಕಳನ್ನು ಉಳಿಸಿ ಹೆಣ್ಣು ಮಕ್ಕಳನ್ನು ಓದಿಸಿ ಎಂದು ಕಾನೂನಿದೆ, ಅದನ್ನು ಪಾಲಿಸಬೇಕು. ಹೆಣ್ಣುಮಕ್ಕಳು ಏನಾದರು ಸಮಸ್ಯೆ ಕಂಡು ಬಂದರೆ ಸಹಾಯವಾಣಿ ಸಂಖ್ಯೆ 1098, 112 ದೂರವಾಣಿಗಳಿಗೆ ಕರೆ ಮಾಡಿ” ಎಂದು ಸಲಹೆ ನೀಡಿದರು.

1001976695

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಚಿತ್ರದುರ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿ ಶೀಲಾ ಪಿ, “ಸಮಾಜದಲ್ಲಿ ಬಾಲ್ಯ ವಿವಾಹ ತಡೆಗಟ್ಟಬೇಕಿದೆ. ಎಲ್ಲಿಯಾದರೂ ಬಾಲ್ಯ ವಿವಾಹವಾಗುತ್ತಿದ್ದರೆ ತಡೆಯಬೇಕು. ಅಲ್ಲದೇ ಪೊಲೀಸ್ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ಕೊಡಿ. ಮಕ್ಕಳಿಗೆ ಬಾಲ್ಯ ವಿವಾಹ ಮತ್ತು ಇತರೆ ಸಮಸ್ಯೆ ಇದ್ದಲ್ಲಿ ಸಂಬಂಧಪಟ್ಟ ಇಲಾಖೆಗೆ ದೂರು ಕೊಡಿ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001976694

ಮಕ್ಕಳ ಕಲ್ಯಾಣ ಸಮಿತಿಯ ಪುಷ್ಪ ಎಸ್. ಡಿ. ಮಾತನಾಡಿ,”ಹದಿ ಹರೆಯದ ಮಕ್ಕಳು ಸಮಾಜಕ್ಕೆ ಮಾದರಿಯಾಗಿರಬೇಕು. ಯಾವುದೇ ಆಕರ್ಷಣೆಗೆ ಒಳಗಾಗದೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ” ಎಂದು ತಿಳಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಭಾರತ ಪಾಕಿಸ್ತಾನ ಮಧ್ಯೆ ಪ್ರಕ್ಷುಬ್ಧ ವಾತಾವರಣ, ವಾಣಿ ವಿಲಾಸ ಜಲಾಶಯಕ್ಕೆ ಪ್ರವೇಶ ನಿರ್ಬಂಧ.

ವಿಮುಕ್ತಿ ವಿದ್ಯಾ ಸಂಸ್ಥೆಯ ನಿರ್ದೇಶಕರಾದ ವಿಶ್ವ ಸಾಗರ್ ಮಕ್ಕಳ ಕಲ್ಯಾಣ ಸಮಿತಿಗೆ ಮನವಿ ಸಲ್ಲಿಸಿ,” ಸಾವಿರಾರು ಅಂಗವಿಕಲ ಮಕ್ಕಳ ಸಮಸ್ಯೆ ಬಗ್ಗೆ ಗಮನಹರಿಸಬೇಕು. ಪ್ರತಿಯೊಂದು ಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಸಾನಿಟೇಸರ್, ಪ್ಯಾಡ್ ಇರಬೇಕು, ಹಳ್ಳಿಗಳಲ್ಲಿ ಹದಿಹರೆಯ ಮಕ್ಕಳಿಗೆ ಜಾಗೃತಿ ಕಾರ್ಯಕ್ರಮ ನೆಡಸಬೇಕು” ಎಂದು ಮಕ್ಕಳ ಸಮಸ್ಯೆಗಳ ಕುರಿತು ಕೇಳಿಕೊಂಡರು.

ಇದನ್ನೂ ಓದಿ ; ಚಿತ್ರದುರ್ಗ | ಸಾಣೇಹಳ್ಳಿ ತರಳಬಾಳು ಮಠದಲ್ಲಿ ಬಸವಾದಿ ಶರಣರ ವಚನಗಳ ರಾಜ್ಯ ಮಟ್ಟದ ಸ್ಪರ್ಧೆ.

ಕಾರ್ಯಕ್ರಮದಲ್ಲಿ ವಿಮುಕ್ತಿ ಸಂಸ್ಥೆಯ ಅಧ್ಯಕ್ಷೆ ಅನ್ನಪೂರ್ಣ ಸಂಸ್ಥೆಯಲ್ಲಿ ಮಕ್ಕಳ ಮತ್ತು ಮಹಿಳೆಯರ ಬೆಳವಣಿಗೆ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಬಿಬಿಜಾನ್, ನಾಗರತ್ನ ಸೇರಿದಂತೆ ವಿಧ್ಯಾರ್ಥಿಗಳು, ಮಕ್ಕಳು ಪಾಲ್ಗೊಂಡಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪತ್ನಿ ಕೆಲಸದಾಳಲ್ಲ, ಗಂಡನೂ ಮನೆಗೆಲಸಗಳಲ್ಲಿ ನೆರವಾಗಬೇಕು’ – ಸುಪ್ರೀಂ ಕೋರ್ಟ್‌

ಪತ್ನಿ ಅಡುಗೆ, ಇತ್ಯಾದಿ ಮನೆಗೆಲಸಗಳನ್ನು ಸರಿಯಾಗಿ ಮಾಡುತ್ತಿಲ್ಲ. ಇದು ಕ್ರೌರ್ಯ ಎಂದು...

ಚಿತ್ರದುರ್ಗ | ಆಸಿಡ್ ದಾಳಿ: ಸಂತ್ರಸ್ತರ ಆರೋಗ್ಯ ವಿಚಾರಣೆ

ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ ನಡೆದ ಆಸಿಡ್ ದಾಳಿಯಲ್ಲಿ ಗಾಯಗೊಂಡು ದಾವಣಗೆರೆಯ ಎಸ್.ಎಸ್....

ಚಿತ್ರದುರ್ಗ | ಕೌಟುಂಬಿಕ ಕಲಹ: ಪತ್ನಿ, ಮಗಳು ಸೇರಿ ಐವರ ಮೇಲೆ ಆಸಿಡ್‌ ದಾಳಿ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನನ್ನು ಬಿಟ್ಟು ಹೋಗಿದ್ದ ಪತ್ನಿ,...

ಕಥುವಾ ಪ್ರಕರಣ | ಭದ್ರತೆ ಕಡಿತ; ‘ಮಗಳು ಶಾಲೆಗೂ ಹೋಗುತ್ತಿಲ್ಲ’ ಎಂದ ವಕೀಲೆ ದೀಪಿಕಾ

2018ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ...