ಚಿತ್ರದುರ್ಗ | ಮಹಿಳೆಯರ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಕೊಡುಗೆ ಅಪಾರ.

Date:

“ಮಹಿಳೆಯರ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಅವರ ಕೊಡುಗೆ ಬಹಳ ದೊಡ್ಡದು. ಇದು ಸಾಕ್ಷರತೆ ಹೆಚ್ಚಲು ಕಾರಣವಾಯಿತು” ಎಂದು ಚಿತ್ರದುರ್ಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂಆರ್ ಮಂಜುನಾಥ್ ಸ್ಮರಿಸಿದರು.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತಳಕು ಹೋಬಳಿಯ ಕ್ಲಸ್ಟರ್ ಮಟ್ಟದ ತರಾಸು ಶಿಕ್ಷಕರ ವೇದಿಕೆಯು ಶಾದಿ ಮಹಲ್ ನಲ್ಲಿ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಪುಲೆ ಜಯಂತಿ ಹಾಗೂ ಶೈಕ್ಷಣಿಕ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು “ಸಾವಿತ್ರಿಬಾಯಿ ಫುಲೆ ಅವರು 150 ವರ್ಷಗಳ ಹಿಂದೆಯೇ ಶಿಕ್ಷಣದ ಮಹತ್ವ ಅರಿತಿದ್ದರು. ಅದನ್ನು ದಾಸೋಹದ ರೂಪದಲ್ಲಿ ಮಹಿಳೆಯರಿಗೆ ಹಂಚಿದ್ದರಿಂದ ಹೆಚ್ಚಿನ ಜನರು ಶಿಕ್ಷಣ ಪಡೆಯಲು ಸಾಧ್ಯವಾಯಿತು. ವಿಶೇಷವಾಗಿ ಮಹಿಳೆಯರು ಅನೇಕ ರಂಗಗಳಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟರು.

1001652779
ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ

“ಸಾವಿತ್ರಿಬಾಯಿ ತಮ್ಮ 17ನೇ ವಯಸ್ಸಿನಲ್ಲಿ ಶಾಲೆ ಆರಂಭಿಸಿದ್ದರು. ಅದಕ್ಕೆ ಸಾಕಷ್ಟು ವಿರೋಧವಿತ್ತು. ಸಾವಿತ್ರಿಬಾಯಿ ಅವರು ಆ ಕಾಲದಲ್ಲಿ ಶಿಕ್ಷಣ ಕೊಡಲು ಮುಂದಾದಾಗ ಜನ ಕಲ್ಲಿನಿಂದ ಅವರಿಗೆ ಹೊಡೆಯುತ್ತಿದ್ದರು. ಆದರೂ ವಿರೋಧಗಳ ನಡುವೆಯೂ ಶಿಕ್ಷಣ ಕೊಡುವುದನ್ನು ಬಿಡಲಿಲ್ಲ. ಆಗ ಅವರ ಪತಿ ಜ್ಯೋತಿಬಾ ಫುಲೆ ಅವರ ಬೆನ್ನಿಗೆ ನಿಂತು ಬೆಂಬಲಿಸಿದ್ದರು. ಇಂದು ಜನ ಅವರ ತ್ಯಾಗ ನೆನೆದು ಅವರ ಭಾವಚಿತ್ರಕ್ಕೆ ಹೂಮಳೆಗರೆಯುತ್ತಿದ್ದಾರೆ. ಇದೇ ಶಿಕ್ಷಣಕ್ಕಿರುವ ದೊಡ್ಡ ಶಕ್ತಿ’. ಆರಂಭದಲ್ಲಿ ಅವರ ಶಾಲೆಯಲ್ಲಿ ಎಂಟು ಮಕ್ಕಳಷ್ಟೇ ಇದ್ದರು. ನಂತರ ಆ ಸಂಖ್ಯೆ 500ರ ಗಡಿ ದಾಟಿತು. ದೇಶದ ಮೊದಲ ಅನಾಥಾಶ್ರಮ, ವಿಧವಾ ಆಶ್ರಮ, ಕೂಲಿ ಕಾರ್ಮಿಕರ ಮಕ್ಕಳಿಗೆ ರಾತ್ರಿ ಶಾಲೆ ತೆರೆದವರು ಸಾವಿತ್ರಿಬಾಯಿ. ಪ್ಲೇಗ್‌ ರೋಗ ಬಂದಾಗ ಗಂಜಿ ಕೇಂದ್ರ ತೆರೆದಿದ್ದರು”ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001652780 1

ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಮಾತನಾಡಿ “ಇಂದಿನ ಹೊಸ ಶಿಕ್ಷಣ ನೀತಿಯಲ್ಲಿನ ಅನೇಕ ವಿಚಾರಗಳನ್ನು ಸಾವಿತ್ರಿಬಾಯಿ ಅಂದಿನ ಕಾಲದಲ್ಲೇ ಹೇಳಿದ್ದರು. ಪ್ರಚಾರದ ಕೊರತೆಯಿಂದ ಅವರು ಬೆಳಕಿಗೆ ಬಂದಿಲ್ಲ. ಇತ್ತೀಚಿನ ವರ್ಷಗಳಲ್ಲಿ ಸಂಶೋಧನೆ, ಪುಸ್ತಕದ ಮೂಲಕ ದಾಖಲಿಸುವ ಉತ್ತಮ ಕೆಲಸ ನಡೆಯುತ್ತಿದೆ. ಎಂದು ಅಭಿಪ್ರಾಯ ಪಟ್ಟರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನಗರದಲ್ಲಿ ಪೊಲೀಸ್ ಇಲಾಖೆಯ
ಪೊಲೀಸರೊಂದಿಗೆ ಮ್ಯಾರಥಾನ್ 2025.

ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಟಿ ವೀರೇಶ್ ಅನುದಾನಿತ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ ಸುರೇಶ್, ಪಿ ರಾಜಣ್ಣ, ಜಾಕೀರ್ ಹುಸೇನ್, ಮಾರುತಿ ಭಂಡಾರಿ, ತಿಪ್ಪೇಸ್ವಾಮಿ, ಕೃಷ್ಣಮೂರ್ತಿ, ಅಶೋಕ್, ಪ್ರಹ್ಲಾದ್, ಪಿಡಿಒ ಓಬಣ್ಣ, ಶಶಿರಾಜ್, ಮಾರಣ್ಣ, ಜಯಲಕ್ಷ್ಮಿ, ರಾಧಾಮಣಿ, ಸುಜಾತ, ಸೌಭಾಗ್ಯಮ್ಮ, ತಿಪ್ಪಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಕೌಟುಂಬಿಕ ಕಲಹ: ಪತ್ನಿ, ಮಗಳು ಸೇರಿ ಐವರ ಮೇಲೆ ಆಸಿಡ್‌ ದಾಳಿ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನನ್ನು ಬಿಟ್ಟು ಹೋಗಿದ್ದ ಪತ್ನಿ,...

ಕಥುವಾ ಪ್ರಕರಣ | ಭದ್ರತೆ ಕಡಿತ; ‘ಮಗಳು ಶಾಲೆಗೂ ಹೋಗುತ್ತಿಲ್ಲ’ ಎಂದ ವಕೀಲೆ ದೀಪಿಕಾ

2018ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಚಿತ್ರದುರ್ಗ | ಹಾಯ್ಕಲ್ ಗ್ರಾಮದಲ್ಲಿ ಚರಂಡಿ ಅವ್ಯವಸ್ಥೆ; ಅನುದಾನವಿಲ್ಲ ಎಂದ ಪಂಚಾಯಿತಿ, ಶಾಸಕರಿಗೆ ದೂರು

​ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿ ಬೆಳಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಯ್ಕಲ್...