ಚಿತ್ರದುರ್ಗ | ತಳಕಿನಲ್ಲಿ ಸರಣಿ ಕಳ್ಳತನ: ಸಾರ್ವಜನಿಕರು ಅಂಗಡಿ ಮಾಲೀಕರಿಗೆ ಆತಂಕ

Date:

ತಳಕು ಬಸ್ ನಿಲ್ದಾಣದಲ್ಲಿ ಕೈ ಚಳಕ ತೋರಿರುವ ಕಳ್ಳರು ಒಂದೇ ರಾತ್ರಿಯಲ್ಲಿ ಮೂರು ಪೆಟ್ಟಿಗೆ ಅಂಗಡಿಗಳಲ್ಲಿ ಡಬ್ಬ ಮುರಿದು ಸರಣಿ ಕಳ್ಳತನ ಮಾಡಿದ್ದಾರೆ. ಇದರಿಂದಾಗಿ ತಳಕು ಸೇರಿದಂತೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಳ್ಳಿಗಳಲ್ಲಿ, ನಗರ ಭಾಗದಲ್ಲಿ ಸಾರ್ವಜನಿಕರಿಗೆ ಹಾಗೂ ರಸ್ತೆ ಬದಿಯ ಅಂಗಡಿಗಳ ಮಾಲೀಕರಿಗೆ ಆತಂಕ ಶುರುವಾಗಿದೆ.

ಇದೀಗ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದ ನಿಲ್ದಾಣದಲ್ಲಿ ಒಂದೇ ದಿನ ರಾತ್ರಿ ಕಳ್ಳರು ಕಿರಾಣಿ ಅಂಗಡಿ, ಡಬ್ಬದ ಅಂಗಡಿ, ನಂದಿನಿ ಮಿಲ್ಕ್ ಪಾರ್ಲರ್, ಬೇಕರಿ ಸೇರಿದಂತೆ ಅಂಗಡಿಗಳಲ್ಲಿ ಕಳ್ಳತನ ಮಾಡಿದ್ದು ನಾಗರೀಕರಿಗೆ ಆತಂಕ ಹುಟ್ಟಿಸಿದೆ.

1003113053
ತಗಡಿನ ಶೀಟ್ ಕತ್ತರಿಸಿ ಒಳನುಗ್ಗಿರುವ ಕಳ್ಳರು

ತಳಕಿನ ಬಸ್ ನಿಲ್ದಾಣದಲ್ಲಿ ರಸ್ತೆ ಬದಿ ಇರುವ ಭಾಗ್ಯಮ್ಮ ಎನ್ನುವವರ ಬೇಕರಿಯಲ್ಲಿ 3,000 ಮೌಲ್ಯದ ಗುಟ್ಕಾ ಸಿಗರೇಟ್ ಹಾಗೂ 2,000 ನಗದು, ಗಂಗಮ್ಮ ಎನ್ನುವವರ ಬೇಕರಿಯಲ್ಲಿ ಸುಮಾರು 9,000 ಗುಟ್ಕಾ ಸಿಗರೇಟ್ ಇನ್ನಿತರ ವಸ್ತುಗಳು ಹಾಗೂ 3,000 ನಗದು, ಸೈಯದ್ ಮೂಸಂ ಎನ್ನುವವರ ಕಿರಾಣಿ ಅಂಗಡಿಯಲ್ಲಿ 40,000 ಮೌಲ್ಯದ ಗುಟ್ಕಾ ಸಿಗರೇಟ್, ಅಡುಗೆ ಎಣ್ಣೆ, ದಿನಬಳಕೆ ವಸ್ತುಗಳನ್ನು ಕಳವು ಮಾಡಿದ್ದು ಅಂಗಡಿಗಳ ತಗಡು ಮುರಿದು ಕಳ್ಳರು ಒಳಹೊಕ್ಕಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003113057
ಅಂಗಡಿಗಳ ಶೀಟ್ ಮುರಿದು ಕಳ್ಳತನ

ಚಳ್ಳಕೆರೆ ತಾಲೂಕಿನ ನಗರ ಸೇರಿದಂತೆ ಹಳ್ಳಿಗಳ ಮತ್ತು ರಸ್ತೆ ಭಾಗದ ಅಂಗಡಿಗಳು ಮತ್ತು ಮನೆಗಳಲ್ಲಿ ಪದೇ ಪದೇ ಕಳ್ಳತನ ಮತ್ತು ದರೋಡೆ ಪ್ರಕರಣಗಳು ವರದಿಯಾಗುತ್ತಿದ್ದು, ಇವು ಸಾರ್ವಜನಿಕರ ಮತ್ತು ಪೊಲೀಸರ ನಿದ್ದೆಗೆಡಿಸಿವೆ.‌ ಇವುಗಳಲ್ಲಿ ಕೆಲವೇ ಬೆರಳೆಣಿಕೆಯಷ್ಟು ಪ್ರಕರಣಗಳಲ್ಲಿ ಮಾತ್ರವೇ ಆರೋಪಿಗಳ ಪತ್ತೆಯಾಗಿದ್ದು, ಬಹಳಷ್ಟು ಪ್ರಕರಣಗಳಲ್ಲಿ ಆರೋಪಿಗಳ ಸುಳಿವು ಸಿಗದೇ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.‌ ಚಳ್ಳಕೆರೆ ನಗರ, ಹೆದ್ದಾರಿ ಮತ್ತು ಗ್ರಾಮಾಂತರ ಭಾಗಗಳಲ್ಲಿ ಸುರಕ್ಷತೆಗಾಗಿ ಸಾರ್ವಜನಿಕರಿಂದ ಆಗ್ರಹ ಕೇಳಿ ಬಂದಿದೆ.‌

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಿಐಟಿಯು ನಾಯಕಿ ವರಲಕ್ಷ್ಮಿಗೆ ಪ್ರತಿಷ್ಠಿತ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ. ಚಿತ್ರದುರ್ಗ | ಸಿಐಟಿಯು ನಾಯಕಿ ವರಲಕ್ಷ್ಮಿಗೆ ಪ್ರತಿಷ್ಠಿತ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ

ಸ್ಥಳಕ್ಕೆ ತಳಕು ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.‌

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...