ಚಿತ್ರದುರ್ಗ | ಸರ್ಕಾರಿ ಶಾಲೆಯಲ್ಲಿ ಪಠ್ಯಾಧಾರಿತ ಸಾಂಸ್ಕೃತಿಕ ಓದು ಕಾರ್ಯಕ್ರಮ

Date:

ಚಿತ್ರದುರ್ಗದ ವಿವೇಕಾನಂದ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ.ಬಿ.ದೇವರಾಜ ಕ್ರೀಡಾ ಸಾಂಸ್ಕೃತಿಕ ಟ್ರಸ್ಟ್, ರಂಗಸೌರಭ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಪಠ್ಯಾಧಾರಿತ ಸಾಂಸ್ಕೃತಿಕ ಓದು ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಆರ್ಥಿಕ ಯುವಚಿಂತಕ ಡಿ.ಬಸವರಾಜ್ ಮಾತನಾಡಿ “ಹಿರಿಯರ ಮಾರ್ಗದರ್ಶನಗಳು ಮನುಕುಲದ ಭವಿಷ್ಯಕ್ಕೆ ಉತ್ತಮ ಅಡಿಪಾಯವಾಗಿದೆ. ಅವರು ನೆರವೇರಿಸಿಕೊಂಡು ಬಂದ ಆಚಾರ ವಿಚಾರಗಳನ್ನು ನಾವೆಂದಿಗೂ ಮರೆಯಬಾರದು. ಪ್ರಬುದ್ಧಮಾನಕ್ಕೆ ಬಂದ ಇಂದಿನ ಯುವಪೀಳಿಗೆ ಬಹುತೇಕ ಸರ್ಕಾರಿ ಶಾಲೆಗಳಿಂದ ಬಂದವರೇ ಆಗಿದ್ದಾರೆ. ಅಂಥವರು ಸಮಾಜದ ಯಾವುದೇ ಸ್ಥಾನದಲ್ಲಿದ್ದರೂ ಸರ್ಕಾರಿ ಶಾಲಾ ಮಕ್ಕಳ ಮೂಲಸೌಕರ್ಯಗಳತ್ತ ಗಮನಹರಿಸಬೇಕು. ಸರ್ಕಾರಿ ಶಾಲಾಮಕ್ಕಳ ಪೋಷಕರು ಕೂಲಿನಾಲಿ ಮಾಡಿ ಮಕ್ಕಳ ಉತ್ತಮ ಭವಿಷ್ಯಕ್ಕೆ ಶ್ರಮಿಸುತ್ತಾರೆ. ಆ ಪೋಷಕರ ಶ್ರಮಕ್ಕೆ ಮಕ್ಕಳೂ ಸಹ ತಕ್ಕ ಪ್ರತಿಫಲವನ್ನು ನೀಡಬೇಕು” ಎಂದು ಕರೆ ನೀಡಿದರು.

1002605301

“ಇಂದಿಗೂ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರು, ಕಾಂಪೌಂಡು, ಪಾಠೋಪಕರಣಗಳು ಮತ್ತು ಪೀಠೋಪಕರಣಗಳ ಅವಶ್ಯಕತೆಯಿದೆ. ಮುಗ್ಧ ಮಕ್ಕಳ ಅವಶ್ಯಕತೆಗಳನ್ನು ಪೂರೈಸಬೇಕು. ದೊಡ್ಡಪೇಟೆಯ ಗಲ್ಲಿಯೊಂದಕ್ಕೆ ನಮ್ಮ ತಂದೆಯವರ ಬಿ.ದೇವರಾಜ ರಸ್ತೆ ಎಂದು ಹೆಸರಿಟ್ಟಿದ್ದಾರೆ. ಅವರ ಹೆಸರಲ್ಲಿ ನಗರದಲ್ಲಿ ನಿರಂತರವಾಗಿ ಉಪಯುಕ್ತ ಕಾರ್ಯಕ್ರಮಗಳನ್ನು ನಡೆಸಲು ಉತ್ಸುಕರಾಗಿದ್ದೇವೆ. ಇದಕ್ಕೆ ಸಾರ್ವಜನಿಕರು, ಸಂಘ ಸಂಸ್ಥೆಗಳು ಪ್ರೋತ್ಸಾಹ ನೀಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿ “ಅವರು ಕನ್ನಡನಾಡಿನ ಸಾಹಿತ್ಯ ಮತ್ತು ಸಾಂಸ್ಕೃತಿಕ ಜಗತ್ತನ್ನು ಮಕ್ಕಳಿಗೆ ತಿಳಿಸಬೇಕು. ಶಾಲಾ ಮಕ್ಕಳ ಪಠ್ಯಗಳನ್ನು ಆಧರಿಸಿ ಗದ್ಯ ಮತ್ತು ಪದ್ಯಗಳನ್ನು ಸಾಂಸ್ಕೃತಿಕವಾಗಿ ಪರಿಚಯಿಸುತ್ತಿರುವುದು ಹೆಚ್ಚು ಅರ್ಥಪೂರ್ಣವಾಗಿದೆ. ಇಂದಿನ ಈ ಕಾರ್ಯಕ್ರಮದ ರೂಪುರೇಷೆಗಳು ಪ್ರತಿ ಸರ್ಕಾರಿ ಶಾಲೆಗಳಲ್ಲಿ ಕಾರ್ಯಗತವಾಗಬೇಕು” ಎಂದರು.

1002605302

ರಂಗ ನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದು ಮಾತನಾಡಿ “ನಗರದ ಬಹುತೇಕ ರಸ್ತೆಗಳಿಗೆ ಗಣ್ಯವ್ಯಕ್ತಿಗಳ ಹೆಸರಿಟ್ಟಿದ್ದಾರೆ. ಅವರ ಆದರ್ಶ ಮತ್ತು ಆಶೋತ್ತರಗಳನ್ನು ದೇಶ ಕಟ್ಟುವ ಭವಿಷ್ಯದ ಪೀಳಿಗೆಗೆ ಪಠ್ಯದ ಜೊತೆಗೆ ಪರಿಚಯಿಸಿದರೆ ಬೋಧನೆ ಮತ್ತಷ್ಟು ಪರಿಣಾಮಕಾರಿಯಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಅಂಬೇಡ್ಕರರ ದಲಿತರ ಮಹಾಡ್ ಹೋರಾಟವನ್ನು ಪತ್ರಿಕೆಗಳು ದ್ರೋಹ ಎಂದಿದ್ಧವು; ಡಿ ಉಮಾಪತಿ

ಮುಖ್ಯ ಅತಿಥಿಗಳಾಗಿ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ಟಿ.ಷಣ್ಮುಖಪ್ಪ, ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷೆ ಬಿ.ವಿಮಲಾಕ್ಷಿ, ಯೋಗ ಚಿಕಿತ್ಸಕ ಎಂ.ಬಿ.ಮುರುಳಿ, ಆಯುರ್ವೇದ ತಜ್ಞವೈದ್ಯ ಡಾ.ಲಿಂಗದೊರೆ, ಜಿ.ಎಂ.ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ವರುಣ್, ಉದ್ಯಮಿ ಜಿ.ಎಂ.ಮಂಜುನಾಥ್, ಸಹಶಿಕ್ಷಕರಾದ ಪಿ.ಬಿ.ಅನುಸೂಯ, ಟಿ.ಎನ್.ಶೋಭ ಸೇರಿದಂತೆ ಶಾಲಾ ಮಕ್ಕಳು ಸಮಾಜದಲ್ಲಿ ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...