ಚಿತ್ರದುರ್ಗ | ಚಳ್ಳಕೆರೆ, ಗೋಸಿಕೆರೆ ಸೇರಿ ಜಿಲ್ಲೆಯಲ್ಲಿ ಹಿಂದೂ ಮುಸ್ಲಿಮರ ಭಾವೈಕ್ಯತಾ ಹಬ್ಬ ಮೊಹರಂ ಆಚರಣೆಯ ಸಡಗರ

Date:

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಸಿಕೆರೆ ಗ್ರಾಮ ಸೇರಿದಂತೆ ಚಳ್ಳಕೆರೆ ನಗರ ಮತ್ತು ಇತರ ಗ್ರಾಮಗಳಲ್ಲಿ ಹಿಂದೂ ಮುಸ್ಲಿಮರ ಭಾವೈಕ್ಯತಾ ಹಬ್ಬ ಮೊಹರಂ ಹಬ್ಬವನ್ನು ಜನ ಸಡಗರದಿಂದ ಪಾಲ್ಗೊಂಡು ಆಚರಿಸಿದರು.

ಮೊಹರಂ 1

ಕಳೆದ ಮೂರು ದಿನಗಳ ಹಿಂದೆಯೇ ಪ್ರಾರಂಭವಾಗಿರುವ ಮೊಹರಂ ಹಬ್ಬವನ್ನು ಸೋಮವಾರದವರೆಗೆ ಐದು ದಿನಗಳು ಆಚರಿಸುವ ಸಂಪ್ರದಾಯವಿದ್ದು, ಮೊಹರಂ ಅನ್ನು ಪೀರ ದೇವರ ಹಬ್ಬ ಎಂದು ಕೂಡ ಈ ಭಾಗದಲ್ಲಿ ಕರೆಯುತ್ತಾರೆ. ಪೀರ ದೇವರು, ಅಲಿ, ಲಾಲ್, ಚಾಂದ್, ಹುಸೇನ್ ಸೇರಿದಂತೆ ಐದು ದೇವರುಗಳನ್ನು ಪ್ರತಿಷ್ಠಾಪಿಸಿ, ಮೆರವಣಿಗೆಯನ್ನು ಕೂಡ ಮಾಡುವುದು ಭಾವೈಕ್ಯತೆ ಹಬ್ಬ ಮೊಹರಂ ವಿಶೇಷವಾಗಿದ್ದು, ಇದರಲ್ಲಿ ಯಾವುದೇ ಅಡೆತಡೆ ಇಲ್ಲದೆ ಹಿಂದು ಮುಸ್ಲಿಮರು ಭಾವೈಕ್ಯತೆಯಿಂದ ಪಾಲ್ಗೊಂಡು ಭಕ್ತಿ ಸಮರ್ಪಿಸುತ್ತಾರೆ.

1002265769

ಅಲಾಯಿ ಕುಣಿಯನ್ನು ಮಾಡಿ ಅದರ ಸುತ್ತ ದೇವರೊಂದಿಗೆ ಭಕ್ತರು ಪ್ರದಕ್ಷಿಣೆ ಹಾಕಿ ದೇವರಿಗೆ ಭಕ್ತಿ ಸಲ್ಲಿಸಿ ಬೇಡಿಕೊಳ್ಳುವುದು ವಾಡಿಕೆ. ಶನಿವಾರ ಚಳ್ಳಕೆರೆ ತಾಲೂಕಿನ ಗೋಸಿಕೆರೆ ಗ್ರಾಮದಲ್ಲಿ ಅಲಾಯಿ ಕುಣಿ ಮಾಡಿ ಅದರ ಸುತ್ತ ಪ್ರದಕ್ಷಿಣೆ ಹಾಕಿ ಸಾವಿರಾರು ಭಕ್ತರು ಪ್ರೀತಿ ಸಮರ್ಪಿಸಿದರು. ಕಷ್ಟಗಳನ್ನು ಸುಡುವ ಪ್ರತೀಕವಾಗಿ ಅಲಾಯಿ ಕುಣಿಗೆ ಬೆಂಕಿಯನ್ನು ಹಾಕಿ ಅದರ ಸುತ್ತ ಕಷ್ಟಗಳನ್ನು ಕಳೆಯಲೆಂದು ಬೇಡಿಕೆ ಈಡೇರಿಕೆಗೆ ಪ್ರದಕ್ಷಿಣೆ ಹಾಕುತ್ತಾ ಭಕ್ತಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯಲು ದಾವಣಗೆರೆ ಮುಸ್ಲಿಂ ಒಕ್ಕೂಟ ಮಾನವ ಸರಪಳಿ ರಚಿಸಿ ಫ್ರತಿಭಟನೆ

ಅಲ್ಲದೆ ಹೊಳಲ್ಕೆರೆ ತಾಲೂಕಿನ ಬಿದುರ್ಗ, ಚಿಕ್ಕಜಾಜೂರು, ಹೊಸದುರ್ಗ ತಾಲೂಕಿನ ಜಾನಕಲ್ಲು,
ಹಿರಿಯೂರು ತಾಲೂಕಿನ ಹಲವು ಗ್ರಾಮಗಳು ಸೇರಿದಂತೆ ಹಲವೆಡೆ ಮೊಹರಂ ಹಬ್ಬವನ್ನು ವಿಶೇಷವಾಗಿ ಭಾವೈಕ್ಯತೆಯಿಂದ ಆಚರಿಸಲಾಗುತ್ತದೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...