ಚಿತ್ರದುರ್ಗ | ಪ್ರಜೆಗಳ ರಕ್ಷಿಸುವ ಸಂವಿಧಾನಕ್ಕೆ ಅಪಾಯ, ಸಂವಿಧಾನ ಯಾನ ಕಾರ್ಯಕ್ರಮದಲ್ಲಿ ಚಿಂತನೆ

Date:

“ಭಾರತದ ಪ್ರತಿಯೊಬ್ಬ ಪ್ರಜೆಗಳನ್ನು ರಕ್ಷಣೆ ಮಾಡುವ ಸಂವಿಧಾನಕ್ಕೆ ಅಪಾಯವಾದರೆ ಜನಸಾಮಾನ್ಯರ ಪಾಡೇನು? ಈ ಕುರಿತು ಪ್ರಗತಿಪರರು, ಪ್ರಜ್ಞಾವಂತರು ಚಿಂತಿಸಬೇಕಿದೆ” ಎಂದು ಸಾಮಾಜಿಕ ಚಿಂತಕ ಜೆ.ಯಾದವರೆಡ್ಡಿ ಚಿತ್ರದುರ್ಗದಲ್ಲಿ “ಸಂವಿಧಾನ ಯಾನ” ಕಾರ್ಯಕ್ರಮದಲ್ಲಿ ಆತಂಕ ವ್ಯಕ್ತಪಡಿಸಿದರು.

ಚಿತ್ರದುರ್ಗದಲ್ಲಿ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ “ಸಂವಿಧಾನ ಯಾನ, ದೇಶ ರಕ್ಷಣೆಯ ಹೊಣೆ ನಮ್ಮದಾಗಿಸಿಕೊಳ್ಳೋಣ ಬನ್ನಿ, ಸಂವಿಧಾನ ರಕ್ಷಣಾ ಪಡೆಗೆ ಸೇರ್ಪಡೆಯಾಗೋಣ ಬನ್ನಿ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಸಂವಿಧಾನಕ್ಕೆ 140 ವರ್ಷಗಳ ಶಕ್ತಿಯಿದೆ.‌ ಇದು ಯಾರ ಆಸ್ತಿಯಲ್ಲ. ಸಂವಿಧಾನ ಆಶಯಗಳಿಗೆ ವಿರುದ್ಧವಾದ ಘಟನೆಗಳು ನಡೆಯುತ್ತಿವೆ. ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿದಾಗ ದೇಶದ ಪ್ರಧಾನಿ ಸಮರ್ಥಿಸಿಕೊಂಡರು, ಇವೆಲ್ಲವನ್ನು ಗಮನಿಸಿದಾಗ ಸಂವಿಧಾನಕ್ಕೆ ಅಪಾಯವಿದೆ ಎನ್ನುವುದು ತಿಳಿಯುತ್ತದೆ” ಎಂದು ಹೇಳಿದರು.

1001625584
ಪತ್ರಿಕಾಭವನದಲ್ಲಿ ಸಂವಿಧಾನ ಯಾನ ಕಾರ್ಯಕ್ರಮದಲ್ಲಿ ಸಂವಿಧಾನ ರಕ್ಷಣೆ ಕುರಿತು ಚಿಂತನೆ

“ಸಂವಿಧಾನವನ್ನು ಗೌರವಿಸದವರು ಯಾವ ಸ್ಥಿತಿಗೆ ಬಂದಿದ್ದರು ಎನ್ನುವುದನ್ನು ಈಗಿನ ಪ್ರಧಾನಿ ಅರ್ಥಮಾಡಿಕೊಂಡು ಸಂವಿಧಾನವನ್ನು ಗೌರವಿಸಬೇಕು. ಗೌರಿ ಲಂಕೇಶ್, ಎಂ.ಎಂ.ಕಲುಬುರ್ಗಿಯವರಂತಹ ಚಿಂತಕರ ಹತ್ಯೆಗೈದ ಹಂತಕರನ್ನು ಇನ್ನು ಪತ್ತೆ ಹಚ್ಚಲು ಆಗಿಲ್ಲ. ಸಂವಿಧಾನ ದೊಡ್ಡದು. ಕೇಂದ್ರ ಸರ್ಕಾರ ರಿಸರ್ವ್ ಬ್ಯಾಂಕ್, ಚುನಾವಣಾ ಆಯೋಗಗಳಲ್ಲಿ ಹಸ್ತಕ್ಷೇಪ ಮಾಡಿದ್ದು, ಚುನಾವಣಾ ವ್ಯವಸ್ಥೆ ಕುಲಗೆಟ್ಟಿದೆ. ಒಕ್ಕೂಟದ ವ್ಯವಸ್ಥೆ ನಾಶವಾಗುತ್ತಿದೆ. ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ ಹೇರಿಕೆ ಅಕ್ಷಮ್ಯ. ಬಹುತ್ವ, ಸೌಹಾರ್ದತೆ, ಸಾಮರಸ್ಯವನ್ನು ಹಾಳು ಮಾಡುವ ಕೆಲಸಗಳಾಗುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಕೀಲರ ಸಂಘದ ಅಧ್ಯಕ್ಷ ವೈ. ತಿಪ್ಪೇಸ್ವಾಮಿ ಮಾತನಾಡಿ, “ಅಕ್ಷರ ಜ್ಞಾನವುಳ್ಳ ಪ್ರತಿಯೊಬ್ಬ ನಾಗರಿಕನು ಸಂವಿಧಾನವನ್ನು ಓದಿಕೊಳ್ಳಬೇಕಿದೆ ನಾಗರೀಕರಿಂದ ಹಿಡಿದು ವಕೀಲರವರಿಗೆ ಎಲ್ಲರೂ ನಾವು ಸಂವಿಧಾನವನ್ನು ಸರಿಯಾಗಿ ಅರ್ಥೈಸಿಕೊಂಡಿದ್ದೇವೆ ಎನ್ನುವುದನ್ನು ಆತ್ಮವಲೋಕನ ಮಾಡಿಕೊಳ್ಳಬೇಕಿದೆ. ಸಂವಿಧಾನಕ್ಕೆ ಅಪಚಾರವಾಗದಂತೆ ದೇಶ ಮತ್ತು ಸಂವಿಧಾನವನ್ನು ರಕ್ಷಿಸಬೇಕಿದೆ. ಸಂಘಟನೆ ಶಕ್ತಿ ಮತ್ತು ಸಹಕಾರದಿಂದ ಮಾತ್ರ ಸಂವಿಧಾನವನ್ನು ಉಳಿಸಲು ಸಾಧ್ಯ” ಎಂದು ಪ್ರತಿಪಾದಿಸಿದರು.

1001625586
Oplus_0

ವಕೀಲ ಬಿ ಕೆ ರೆಹಮತುಲ್ಲಾ ಮಾತನಾಡಿ, “ಮಹಾತ್ಮ ಗಾಂಧಿ ಸತ್ಯ, ಅಹಿಂಸೆ ಮತ್ತು ಸತ್ಯಾಗ್ರಹದಿಂದ ನೂರಾರು ವರ್ಷ ಆಳಿದ ಬ್ರಿಟಿಷರಿಂದ ಸ್ವಾತಂತ್ರ್ಯವನ್ನು ಗಳಿಸಿ ಕೊಟ್ಟರು. ಇದರ ಹಿಂದೆ ಅನೇಕ ಮಹನೀಯರ ತ್ಯಾಗ ಬಲಿದಾನವಿದೆ. ದುರಂತವೆಂದರೆ ಗಾಂಧಿಯನ್ನು ನಮ್ಮವರೇ ಕೊಂದುಬಿಟ್ಟರು” ಎಂದು ಕಳವಳ ವ್ಯಕ್ತಪಡಿಸಿದರು.

“ಬಲ್ಕಿಸ್‌ಭಾನು ಪ್ರಕರಣದಲ್ಲಿ ಗುಜರಾತ್ ಸೆಷನ್ಸ್ ನ್ಯಾಯಾಲಯ ಹೈಕೋಟ್ ಮತ್ತು ಸುಪ್ರೀಂಕೋರ್ಟ್ ಹನ್ನೊಂದು ಆರೋಪಿಗಳಿಗೆ ಸಜೆ ನೀಡಿದವು.‌ ಕೇಂದ್ರ ಸರ್ಕಾರ ರಾಷ್ಟ್ರಪತಿಗೆ ಪತ್ರ ಬರೆದ ಪರಿಣಾಮ ಎಲ್ಲರನ್ನು ಖುಲಾಸೆಗೊಳಿಸಿತು. ಇದನ್ನು ನೋಡಿದರೆ ಸಂವಿಧಾನ ಉಳಿವಿನ ಬಗ್ಗೆ ಜಿಜ್ಞಾಸೆ ಕಾಡುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.‌

“ಕೇಂದ್ರ ಸರ್ಕಾರ ಕಾನೂನಿನ ಮಧ್ಯೆ ಪ್ರವೇಶಿಸಿದರೆ ಸಂವಿಧಾನ, ಕಾನೂನು ಏಕೆ ಇರಬೇಕು? ಕೇಶವಾನಂದ ಭಾರತಿ ಪ್ರಕರಣ ದತೀರ್ಪು ಎತ್ತಿ ಹಿಡಿದು ಸಂವಿಧಾನ ರಕ್ಷಿಸಬೇಕಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; 10 ಅಡಿಗೂ ಅಧಿಕ ಎತ್ತರಕ್ಕೆ ಹಾರಿಬಿದ್ದ ಮಹಿಳೆ ಸಾವು

ಕಾರ್ಯಕ್ರಮದಲ್ಲಿ ನ್ಯಾಯವಾದಿ ಸಿ.ಶಿವುಯಾದವ್, ನ್ಯಾಯವಾದಿ ಬೀಸ್ನಳ್ಳಿ ಜಯಣ್ಣ, ನಿವೃತ್ತ ಪಿ.ಯು. ಡಿ.ಡಿ.ಪಿ.ಐ. ಶಿವಕುಮಾರ್, ಯುವ ನ್ಯಾಯವಾದಿ ಓ, ಪ್ರತಾಪ್‌ಜೋಗಿ, ಮಾಲತೇಶ್ ಅರಸ್, ಅಶೋಕ್‌ ಬೆಳಗಟ್ಟ, ನ್ಯಾಯವಾದಿ ಮಹಮದ್ ಸಾಧಿಕ್‌ವುಲ್ಲಾ, ಟಿ.ಶಫಿವುಲ್ಲಾ, ದಿಲ್‌ಶಾದ್ ಉನ್ನಿಸ, ವಕೀಲರ ಸಂಘದ ಮಾಜಿ ಅಧ್ಯಕ್ಷ ವಿಜಯಕುಮಾರ್ ಹಾಗೂ ಇತರರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಎಚ್.ಪಿ.ವಿ ಲಸಿಕೆ ಅತ್ಯಂತ ಸುರಕ್ಷಿತ: ಡಾ. ಮೆಲ್ವಿನ್ ಕುಮಾರ್

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡುಬರುಲು ಹ್ಯೂಮನ್ ಪ್ಯಾಪಿಲೋಮ ವೈರಸ್(ಎಚ್.ಪಿ.ವಿ) ಹೆಚ್ಚಾಗಿ ಕಾರಣವಾಗುತ್ತದೆ....

ಚಿತ್ರದುರ್ಗ | ಭೀಕರ ಅಪಘಾತ: ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್...

ಚಿತ್ರದುರ್ಗ | ಅಡುಗೆ ಅನಿಲ ಕೊರತೆಯಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸರಬರಾಜು...

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...