ಚಿತ್ರದುರ್ಗ | ಸಹನೆ, ಸಹಕಾರ, ತ್ಯಾಗ ಮಾನವನ ದೊಡ್ಡಶಕ್ತಿ;ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ.

Date:

“ಆಧುನಿಕ ಯುಗದಲ್ಲಿ ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ. ಸಹನೆ, ಸಹಿಸಿಕೊಳ್ಳುವ ಗುಣ ಮಾನವನ ದೊಡ್ಡ ಶಕ್ತಿಯಿದ್ದಂತೆ. ಸಹನೆ, ಸಹಕಾರ, ತ್ಯಾಗದ ಮೂಲಕ ಒತ್ತಡದ ಜೀವನದಿಂದ ಹೊರ ಬರಲು ಸಾಧ್ಯ.‌ ಧ್ಯಾನ, ಮಿತವಾದ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು” ಎಂದು ಚಿತ್ರದುರ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಆರ್ಥಿಕ ಚಿಂತಕ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಅಭಿಪ್ರಾಯಪಟ್ಟರು.

ಚಿತ್ರದುರ್ಗ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದಲ್ಲಿ ಏರ್ಪಡಿಸಲಾಗಿದ್ದ ಪ್ರತಿಭಾ ಪುರಸ್ಕಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು “ಸರ್ಕಾರಿ ನೌಕರರು ಕೆಲಸದಿಂದ ನಿವೃತ್ತರಾಗಿರಬಹುದು. ಆದರೆ ಪ್ರವೃತ್ತಿಯಿಂದ ಅಲ್ಲ. ಪ್ರತಿಭೆಗಳನ್ನು ಗೌರವಿಸುವ ಮೂಲಕ ವಿದ್ಯಾರ್ಥಿಗಳಿಗೆ ಇನ್ನು ಪ್ರೋತ್ಸಾಹ ನೀಡಿದಂತಾಗುತ್ತದೆ. ಹೆಚ್ಚಿನ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಪ್ರೋತ್ಸಾಹಿಸುವುದರಿಂದ ಅವರು ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಹಕಾರಿಯಾಗಲಿದೆ. ಒಳ್ಳೆಯ ಹೃದಯವಿದ್ದವರು ದೀರ್ಘಾಯುಷಿಗಳಾಗಿರುತ್ತಾರೆ. ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯವಾಗಿರಬೇಕಾದರೆ ಭಾವನಾತ್ಮಕ ಬದುಕು ಮುಖ್ಯ” ಎಂದು ಹೇಳಿದರು.

1002093706
ಚಿತ್ರದುರ್ಗ ಜಿಲ್ಲಾ ನೌಕರರ ಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

“ನಿವೃತ್ತಿಯ ನಂತರ ಒಂದಲ್ಲ ಒಂದು ರೀತಿಯ ಚಟುವಟಿಕೆಯಲ್ಲಿ ತೊಡಗಿಕೊಂಡಾಗ ಲವಲವಿಕೆಯಿಂದ ಇರಬಹುದಲ್ಲದೆ, ತಲ್ಲಣಗೊಂಡಿರುವ ಮನಸ್ಸುಗಳನ್ನು ಹತೋಟಿಯಲ್ಲಿಟ್ಟುಕೊಳ್ಳಬಹುದು. ಸ್ಥಿತ ಪ್ರಜ್ಞೆ ಬೆಳೆಸಿಕೊಂಡು ಸುತ್ತಮುತ್ತಲಿನ ವಾತಾವರಣವನ್ನು ತಣ್ಣಗಾಗಿಸಿಕೊಂಡು ಹಿರಿಯರ ಸಲಹೆ ಮಾರ್ಗದರ್ಶನಗಳನ್ನು ಪಡೆದುಕೊಂಡಾಗ ಸಮಾಜ ಸಂಘಟನೆ ಬಲಿಷ್ಟವಾಗಿರುತ್ತದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ತಿಮ್ಮಯ್ಯ ಮಾತನಾಡಿ “ಮಧ್ಯಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ. ಚಿತ್ರದುರ್ಗ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಜಾಸ್ತಿಯಿದ್ದು, ಉತ್ತಮ ಫಲಿತಾಂಶಕ್ಕೆ ನಿವೃತ್ತ ನೌಕರರ ಮಾರ್ಗದರ್ಶನ ಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಾರಂಭಿಸಿ, ಇಲ್ಲವೇ ಹೋರಾಟ ಎದುರಿಸಿ; ರೈತ ಸಂಘ

ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷ ಪ್ರೇಮನಾಥ್ ಮಾತನಾಡಿ “ನೌಕರರ ಸಂಘದ ಬೆಳವಣಿಗೆ ಹಿಂದೆ ನಿವೃತ್ತ ನೌಕರರ ಸಹಕಾರವಿದೆ. ಎಲ್ಲರ ದೇಣಿಗೆ ಸಹಕಾರದಿಂದ ಕಟ್ಟಡ ನಿರ್ಮಾಣವಾಗಿದೆ. ಸಂಘದಲ್ಲಿ ಮನೋರಂಜನಾ ಕೇಂದ್ರವಿದೆ. ನಿವೃತ್ತ ನೌಕರರು ಆರಾಮವಾಗಿ ಕಾಲ ಕಳೆಯಬಹುದು. ದಿನನಿತ್ಯವೂ ನಗರವನ್ನು ಶುಚಿಗೊಳಿಸುವ ಹತ್ತು ಪೌರ ಕಾರ್ಮಿಕರಿಗೆ ಮುಂದಿನ ದಿನಗಳಲ್ಲಿ ಸನ್ಮಾನಿಸಲಾಗುವುದು. ಪ್ರತಿಭಾ ಪುರಸ್ಕಾರಕ್ಕೆ ಒಳಗಾಗಿರುವ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೆ ಹೋದ ಮೇಲೆ ಹೆತ್ತವರನ್ನು ಕೈಬಿಡದೆ ಪೋಷಿಸಬೇಕು” ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನಿವೃತ್ತ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ವೈ.ಚಂದ್ರಶೇಖರಯ್ಯ, ನಿಕಟಪೂರ್ವ ಅಧ್ಯಕ್ಷ ರಂಗಪ್ಪರೆಡ್ಡಿ, ಉಪಾಧ್ಯಕ್ಷರುಗಳಾದ ಎಫ್.ಆರ್.ಅಲಗೇರಿ, ಮಂಜುನಾಥ್, ಪ್ರಧಾನ ಕಾರ್ಯದರ್ಶಿ ತಿಮ್ಮಪ್ಪ, ಕಾರ್ಯಾಧ್ಯಕ್ಷ ಎಂ.ಶಿವಾನಂದಪ್ಪ, ಖಜಾಂಚಿ ಎನ್.ಆರ್.ಬೈಯಣ್ಣ ಹಾಗೂ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು, ವಿಧ್ಯಾರ್ಥಿಗಳು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಎಚ್.ಪಿ.ವಿ ಲಸಿಕೆ ಅತ್ಯಂತ ಸುರಕ್ಷಿತ: ಡಾ. ಮೆಲ್ವಿನ್ ಕುಮಾರ್

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡುಬರುಲು ಹ್ಯೂಮನ್ ಪ್ಯಾಪಿಲೋಮ ವೈರಸ್(ಎಚ್.ಪಿ.ವಿ) ಹೆಚ್ಚಾಗಿ ಕಾರಣವಾಗುತ್ತದೆ....

ಚಿತ್ರದುರ್ಗ | ಭೀಕರ ಅಪಘಾತ: ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್...

ಚಿತ್ರದುರ್ಗ | ಅಡುಗೆ ಅನಿಲ ಕೊರತೆಯಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸರಬರಾಜು...

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...