ಚಿತ್ರದುರ್ಗ | ಬೆಸ್ಕಾಂ ನೌಕರರಿಗೆ ಎಚ್ಚರಿಕೆ ಗಂಟೆ, ನಿರ್ಲಕ್ಷ್ಯದ ಅವಘಡಕ್ಕೆ ಜೈಲು ಶಿಕ್ಷೆ.

Date:

ಬೆಸ್ಕಾಂ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಜೆಎಂಎಫ್‌ಸಿ
ನ್ಯಾಯಾಲಯದ ತೀರ್ಪು ಬೆಸ್ಕಾಂ ನೌಕರರಿಗೆ ಎಚ್ಚರಿಕೆಯ ಗಂಟೆಯಾಗಿದ್ದು, ನಿರ್ಲಕ್ಷ್ಯ ತೋರಿದ ಎಇಇ, ಮೆಕ್ಯಾನಿಕ್‌ ಹಾಗೂ ಮತ್ತೊಬ್ಬ ಸಿಬ್ಬಂದಿ ಸೇರಿ ಮೂರು ಜನರಿಗೆ ಎರಡು ವರ್ಷ ಜೈಲು ಶಿಕ್ಷೆ , ದಂಡ ವಿಧಿಸಿ ಆದೇಶಿಸಿದೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ನಗರದ ಭೋವಿ ಕಾಲನಿಯ 14 ವರ್ಷದ ಪುತ್ರ ಕಿರಣ್‌ ಪಂಪ್‌ಹೌಸ್‌ ಬಳಿ 2015 ಜೂನ್‌  ಒಂದರಂದು ಆಟವಾಡುತ್ತಿದ್ದಾಗ ಸಮೀಪದ ವಿದ್ಯುತ್‌ ಕಂಬದಲ್ಲಿದ್ದ ಹಳೆಯ ಸ್ವಿಚ್‌ ಬೋರ್ಡ್‌ನ ವೈಯರ್‌ ತಾಗಿ ವಿದ್ಯುತ್ ಆಘಾತದಿಂದ ಬಾಲಕ ಮೃತಪಟ್ಟಿದ್ದ.

ಮೊಳಕಾಲ್ಮೂರು ನಗರ ಪೊಲೀಸ್‌ ಠಾಣೆಯಲ್ಲಿ ಬೆಸ್ಕಾಂ ನೌಕರರ ನಿರ್ಲಕ್ಷ್ಯ ವಿರುದ್ಧ ದೂರು ದಾಖಲಿಸಿದ್ದರು. ಎಇಇ ಸೇರಿದಂತೆ ಮೂರು ಜನರನ್ನು ಆರೋಪಿಗಳನ್ನಾಗಿ ಮಾಡಲಾಗಿತ್ತು. ಪೊಲೀಸ್ ಉಪ ನಿರೀಕ್ಷಕ ಲೋಕೇಶ್‌ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯ ವಿಚಾರಣೆಯಲ್ಲಿ ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯ ಕಂಡು ಬಂದಿದ್ದು, ನಿರ್ಲಕ್ಷ್ಯ ತೋರಿದ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ವಿಚಾರಣೆ ನಡೆಸಿದ ಮೊಳಕಾಲ್ಮೂರು ಪ್ರಧಾನ ಸಿ.ಜೆ. ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಿಯಾಂಕ ಕೆ.ಟಿ. ಅವರು ಆರೋಪಿಗಳಾದ ಬೆಸ್ಕಾಂ ಎಇಇ, ಮೆಕ್ಯಾನಿಕ್‌ ಮತ್ತೊಬ್ಬರಿಗೆ 2 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 1 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಮೊಹಮ್ಮದ್‌ ಶಂಶಿರ್‌ ಅಲಿ ವಕಾಲತ್ತು ವಹಿಸಿ, ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...