ಚಿತ್ರದುರ್ಗ | ಯುವಕರು ದುಶ್ಚಟಗಳಿಂದ ದೂರವಿದ್ದು,  ಗುರಿಯ ಕಡೆಗೆ ಆತ್ಮವಿಶ್ವಾಸವಿರಲಿ; ನಿಮಾನ್ಸ್ ಸಮಾಲೋಚಕ ಹರ್ಷವರ್ಧನ.

Date:

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮ್ಹಾನ್ಸ್ ಮತ್ತು  ಸರ್ಕಾರಿ ಕಲಾ ಕಾಲೇಜ್ ಸಂಯುಕ್ತಾಶ್ರಯದಲ್ಲಿ ಪದವಿ ಹಂತದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ “ಅರಿವು” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಯುವ ಸಮಾಲೋಚಕ ಹಾಗೂ ಸಂಪನ್ಮೂಲ ವ್ಯಕ್ತಿ ಹರ್ಷವರ್ಧನ,” ಯುವಕರು ನಾನಾ ಬಗೆಯ ದುಶ್ಚಟಗಳಿಗೆ ಬಲಿಯಾಗದೆ,  ದುಶ್ಚಟಗಳಿಂದ ದೂರವಿದ್ದು,  ಗುರಿಯ ಕಡೆಗೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಯುವಕರು ತಮ್ಮ ತಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಮಾನಸಿಕವಾಗಿ ದೈಹಿಕವಾಗಿ ಹಾಗೂ ಸದೃಢವಾಗಿರಬೇಕು’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

1001790096

ಸಂಪನ್ಮೂಲ ವ್ಯಕ್ತಿ ಹಾಗೂ ನಿಮ್ಹಾನ್ಸ್ ತಾಂತ್ರಿಕ ವರ್ಗದ ನಾಗರಾಜ್,ವಿದ್ಯಾರ್ಥಿಗಳಿಗೆ ಸರ್ಕಾರಿ ಸೌಲಭ್ಯಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿ “ಯುವಕರಿಗೆ ಇರುವ ಸೌಲಭ್ಯ ಬಳಸಿಕೊಳ್ಳಿ ಹಾಗೂ ಮಾನಸಿಕವಾಗಿ ಹೆಚ್ಚು ಕ್ರಿಯಾಶೀಲರಾಗಿ ದೃಢವಾಗಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಬಿ.ಟಿ. ತಿಪ್ಪೇರುದ್ರಸ್ವಾಮಿ ಮಾತನಾಡಿ “ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯುವಜನರಿಗೆ ತುಂಬಾ ಉತ್ತಮವಾದ ಕಾರ್ಯಕ್ರಮಗಳನ್ನು ರೂಪಿಸಿವೆ, ಮಹತ್ತರವಾದ ಯೋಜನೆಗಳಿವೆ. ಅವುಗಳನ್ನು ನಾವೆಲ್ಲಾ ಸಮರ್ಥವಾಗಿ ಬಳಸಿಕೊಳ್ಳಬೇಕು ಹಾಗೂ ಇಂತಹ ಕಾರ್ಯಕ್ರಮಗಳು ಯುವಕರ ಮೇಲೆ ಹೆಚ್ಚು ಪ್ರಭಾವ ಬೀರಿ ಬದಲಾವಣೆಗಳೊಂದಿಗೆ ಯುವ ಜನರು ಗುರಿಯತ್ತ ಸಾಗಲು ಸಹಕಾರಿಯಾಗಿದೆ. ಹಾಗೂ ನಮ್ಮ ಕಾಲೇಜಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು  ಸಂತೋಷ ತಂದಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬೆಸ್ಕಾಂ ನೌಕರರಿಗೆ ಎಚ್ಚರಿಕೆ ಗಂಟೆ, ನಿರ್ಲಕ್ಷ್ಯದ ಅವಘಡಕ್ಕೆ ಜೈಲು ಶಿಕ್ಷೆ.

ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ಎನ್ ಎಸ್ ಎಸ್ ಅಧಿಕಾರಿಗಳಾದ ಬಸವರಾಜ್ ಹಾಗೂ  ನಿಮ್ಹಾನ್ಸ್ ತಾಂತ್ರಿಕ ವರ್ಗದ ಕುಮಾರಿ‌ ಅನು ಹಾಗೂ ಯುವ ಪರಿವರ್ತಕರಾದ ಅಂಜಲಿ‌, ಮೇಘ, ಸುಷ್ಮಾ ಸೇರಿದಂತೆ ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಎಚ್.ಪಿ.ವಿ ಲಸಿಕೆ ಅತ್ಯಂತ ಸುರಕ್ಷಿತ: ಡಾ. ಮೆಲ್ವಿನ್ ಕುಮಾರ್

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡುಬರುಲು ಹ್ಯೂಮನ್ ಪ್ಯಾಪಿಲೋಮ ವೈರಸ್(ಎಚ್.ಪಿ.ವಿ) ಹೆಚ್ಚಾಗಿ ಕಾರಣವಾಗುತ್ತದೆ....

ಚಿತ್ರದುರ್ಗ | ಭೀಕರ ಅಪಘಾತ: ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್...

ಚಿತ್ರದುರ್ಗ | ಅಡುಗೆ ಅನಿಲ ಕೊರತೆಯಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸರಬರಾಜು...

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...