‌ರಾಜ್ಯಾದ್ಯಂತ ಬೀದಿನಾಯಿಗಳಿಂದ ಮಾರಣಾಂತಿಕ ದಾಳಿ: ಸುರಕ್ಷತೆ, ನಿಯಂತ್ರಣಕ್ಕೆ ನಾಗರಿಕರ ಆಗ್ರಹ

Date:

ಬಹುತೇಕ ಕಡೆ ಗುಂಪು ಗುಂಪಾಗಿ ಓಡಾಡುವ, ಮಲಗಿರುವ, ಕಚ್ಚಾಡುವ ಬೀದಿನಾಯಿಗಳು ಸರ್ವೇಸಾಮಾನ್ಯವಾಗಿ ಕಾಣಸಿಗುತ್ತವೆ. ಇದು ಕೇವಲ ದಾವಣಗೆರೆ, ಚಿತ್ರದುರ್ಗ ನಗರ ಹಾಗೂ ಜಿಲ್ಲೆಯ ಹಳ್ಳಿಗಳಲ್ಲಿ ಮಾತ್ರವಲ್ಲ ರಾಜ್ಯದ ಬಹುತೇಕ ಕಡೆ ಇದೇ ಸ್ಥಿತಿ ಇದ್ದು, ಮಕ್ಕಳು, ಒಂಟಿ ಮಹಿಳೆಯರು, ದನಗಳು, ಪಶುಗಳು ಬೀದಿನಾಯಿಗಳ ದಾಳಿಗೆ ಬಲಿಯಾಗಿ ತೀವ್ರ ಗಾಯಗೊಂಡ, ಮೃತಪಟ್ಟ ಘಟನೆಗಳು ಸಂಭವಿಸಿವೆ. ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಎಲ್ಲೆಡೆ ನಾಗರಿಕರ ಆಗ್ರಹ ಕೇಳಿಬಂದಿದೆ.

ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ನಿರಾತಂಕವಾಗಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಂಖ್ಯೆ ಮಿತಿಮೀರುತ್ತಿದೆ. ಸ್ಥಳೀಯ ಆಡಳಿತಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿವೆ. ಅಲ್ಲದೆ ದಾಳಿ ಕೂಡ ಹೆಚ್ಚುತ್ತಿದ್ದು, ಭಾನುವಾರ ಐವರ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾವಿನ ಕೋಟೆ ಮತ್ತು ಸಾಸ್ವೆಹಳ್ಳಿಯಲ್ಲಿ ನಡೆದಿದೆ.

ಮಾವಿನಕೋಟೆಯಲ್ಲಿ ಓರ್ವ ವೃದ್ಧ, ಮೂವರು ಮಕ್ಕಳು ಸೇರಿ ನಾಲ್ವರ ಮೇಲೆ ಹಾಗೂ ಸಾಸ್ವೆಹಳ್ಳಿಯ ಓರ್ವ ಬಾಲಕನ ಮೇಲೆ ನಾಯಿಗಳು ದಾಳಿ ಮಾಡಿವೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾಯಿ ದಾಳಿ ಹೆಚ್ಚುತ್ತಿದ್ದರೂ ಗ್ರಾಮ ಪಂಚಾಯಿತಿ ಪಿಡಿಒ, ಸಿಬ್ಬಂದಿ ಹಾಗೂ ಸದಸ್ಯರು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಶೀಘ್ರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಬೇಕಾಗುತ್ತದೆ” ಎಂದು ಮಾವಿನಕೋಟೆ ಗ್ರಾಮಸ್ಥರೊಬ್ಬರು ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸದಸ್ಯರ ವಿರುದ್ಧ ಆಕ್ರೋಶ ಹೊರಹಾಕಿದರು.

1002669490

ಮಾಂಸಾಹಾರಿಗಳಾಗಿ ಪರಿವರ್ತನೆಯಾಗುತ್ತಿರುವ ಬೀದಿ ನಾಯಿಗಳು;  

“ಮಾಂಸದ ಅಂಗಡಿಗಳು, ಮಾಂಸಾಹಾರ ಹೋಟೆಲ್, ಮೀನಿನ ಅಂಗಡಿ, ರಸ್ತೆ ಬದಿಯ ಕಬಾಬ್- ಬಿರಿಯಾನಿ ಅಂಗಡಿ, ಕಸದ ರಾಶಿಗಳ ಮುಂದೆ ಬೀಡುಬಿಟ್ಟಿರುವ ನಾಯಿಗಳು ನಿತ್ಯ ಮಾಂಸಾಹಾರಕ್ಕೆ ಒಗ್ಗಿಕೊಂಡು ಮಾಂಸಾಹಾರಿಗಳಾಗಿ ಪರಿವರ್ತನೆಯಾಗುವತ್ತ ಸಾಗುತ್ತಿವೆ.‌ ಅಲ್ಲಿಯೇ ಸುತ್ತಮುತ್ತ ಆವಾಸಸ್ಥಾನ ಮಾಡಿಕೊಂಡಿರುತ್ತವೆ. ಅಂಗಡಿಯವರೂ ಕೂಡ ಅಳಿದುಳಿದ ಆಹಾರ, ಮಾಂಸದ ತ್ಯಾಜ್ಯವನ್ನು ವಿಲೇವಾರಿ ತಲೆನೋವಿನಿಂದ ತಪ್ಪಿಸಿಕೊಳ್ಳಲು ನಾಯಿಗಳಿಗೆ ಹಾಕುವ ಘಟನೆ ಸರ್ವೇ ಸಾಮಾನ್ಯ.‌ ಏನಾದರೂ ಅಲ್ಲಿನ ತ್ಯಾಜ್ಯ ಸಿಗದಿದ್ದಾಗ ಆಹಾರ ಬೇಕಾದಾಗ ಸಾಮಾನ್ಯವಾಗಿ ಪಶುಗಳ, ಮನುಷ್ಯರ ಮೇಲೆ ಎರಗುವ ರೂಢಿ ಮಾಡಿಕೊಳ್ಳುತ್ತವೆ” ಎಂದು ಸಾರ್ವಜನಿಕರೊಬ್ಬರು ಕಳವಳ ವ್ಯಕ್ತಪಡಿಸಿದರು.

“ದಾವಣಗೆರೆಯಲ್ಲಿ ಬೀದಿನಾಯಿ ದಾಳಿಯ ಪ್ರಕರಣಗಳು ನಿರಂತರವಾಗಿ ದಾಖಲಾಗುತ್ತಿವೆ. ನಾಲ್ಕು ತಿಂಗಳ ಹಿಂದೆ ಶಾಸ್ತ್ರೀನಗರದ ನಿವಾಸಿ ಮೊಹಮ್ಮದ್ ಶಾಕೀರ್ ಅಲಿ ಮತ್ತು ಅತೀಹಾ ಖಾನಂ ದಂಪತಿಯ ಪುತ್ರಿ ಖದೀರಾ ಬಾನು(4) ನಾಯಿದಾಳಿಗೆ ತುತ್ತಾಗಿ ಗಂಭೀರವಾಗಿ ಗಾಯಗೊಂಡಿದ್ದಳು. ಬೀದಿನಾಯಿ ದಾಳಿಗೆ ಒಳಗಾಗಿ ಮುಖ ಮತ್ತು ಕೈಗೆ ತೀವ್ರ ಗಾಯಗಳಾಗಿದ್ದು, ರೇಬೀಸ್ ತಗುಲಿ ಬೆಂಗಳೂರಿನ ಆಸ್ಪತ್ರೆ ಸೇರಿ ನಾಲ್ಕಾರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದ್ದರೂ ಫಲಕಾರಿಯಾಗದೆ ಕಳೆದ ತಿಂಗಳು ಮೃತಪಟ್ಟಿದ್ದಳು.

1002670887

ದಾವಣಗೆರೆ ನಗರದ ನಿಟುವಳ್ಳಿ ಬಡಾವಣೆ ಬಳಿ ಖಾಲಿ ನಿವೇಶನವೊಂದರ ಬಳಿ ಸಣ್ಣ ಹಸುವೊಂದರ ಮೇಲೆ ದಾಳಿ ನಡೆಸಿದ್ದ ಬೀದಿನಾಯಿಗಳು ಹಸುವನ್ನು ಸಾಯಿಸಿ ಹೊಟ್ಟೆಯ ಭಾಗದ ಮಾಂಸವನ್ನು ಸಂಪೂರ್ಣವಾಗಿ ತಿಂದು ಹಾಕಿದ್ದವು.

ಹಲವಾರು ನಗರಗಳಲ್ಲಿ ಹೆಚ್ಚಾಗಿರುವ ಬೀದಿನಾಯಿಗಳನ್ನು ನಿಯಂತ್ರಿಸಲು ಪಾಲಿಕೆಗಳು ಹೆಣಗಾಡುತ್ತಿವೆ. ಈ ನಡುವೆ ಗ್ರಾಮೀಣ ಭಾಗದಲ್ಲಿಯೂ ನಾಯಿಗಳ ಹಾವಳಿ ಹೆಚ್ಚಾಗಿದ್ದು, ದಾವಣಗೆರೆ ಜಿಲ್ಲೆಯ ಗ್ರಾಮವೊಂದರಲ್ಲಿ ನಾಯಿಗಳ ದಾಳಿಯಿಂದ 15 ಕುರಿಗಳು ಸಾವನ್ನಪ್ಪಿವೆ. ಚನ್ನಗಿರಿ ತಾಲೂಕಿನ ಕಂಸಾಗರ ಗ್ರಾಮದಲ್ಲಿ ಕುರಿ ಹಿಂಡಿನ ಮೇಲೆ ಬೀದಿನಾಯಿಗಳು ದಾಳಿ ಮಾಡಿದ್ದವು. 15 ಕುರಿಗಳು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಕುರಿಗಳು ಗಂಭೀರವಾಗಿ ಗಾಯಗೊಂಡಿದ್ದವು.

“ಮಂಡಕ್ಕಿ ಭಟ್ಟಿ, ಶಾಸ್ತ್ರೀನಗರದಲ್ಲೂ ಹಸುಗಳು, ಹಂದಿ ಸೇರಿದಂತೆ ಸಣ್ಣ ಸಣ್ಣ ಪ್ರಾಣಿಗಳ ಮೇಲೆ ದಾಳಿ ನೆಡೆಸಿ ಕೊಂದು ತಿನ್ನುತ್ತವೆ. ಮಕ್ಕಳು, ಮಹಿಳೆಯರು ದಾರಿಯಲ್ಲಿ ಓಡಾಡಲು ಭಯಪಡುವ ಸ್ಥಿತಿ ವಾತಾವರಣ ನಿರ್ಮಾಣವಾಗಿದೆ. ಕಾರ್ಪೊರೇಷನ್ ಮೆಂಬರ್, ಆಫೀಸರ್‌ಗಳಿಗೆ ತಿಳಿಸಿದರೂ ಏನೂ ಪ್ರಯೋಜನವಾಗಿಲ್ಲ. ಬೀದಿಯಲ್ಲಿ ಮನೆಗಳಿಗೆ ಹೋಗುವಾಗ ಇನ್ನೊಬ್ಬರ ಆಸರೆಯೊಂದಿಗೆ ಗುಂಪು ಗುಂಪಾಗಿ ಓಡಾಡುವ ಭಯದ ವಾತಾವರಣ ಸೃಷ್ಟಿಯಾಗಿದೆ” ಎಂದು ಉದ್ಯೋಗಕ್ಕಾಗಿ ಪ್ರತಿನಿತ್ಯ ಸಂಚರಿಸುವ ಮಂಡಕ್ಕಿ ಭಟ್ಟಿ ನಿವಾಸಿ ಸೋನು ಅಳಲು ತೋಡಿಕೊಂಡರು.

1002669491

ರಾಜ್ಯದಲ್ಲೂ ಅಲ್ಲಲ್ಲಿ ಬೀದಿ ನಾಯಿ ಹಾವಳಿ ಮುಂದುವರೆದಿದೆ.‌ ಮಹಿಳೆ ಮೇಲೆ ಬೀದಿನಾಯಿ ದಾಳಿ ಮಾಡಿದ ಘಟನೆ ಮೂರು ದಿನಗಳ ಹಿಂದೆ ತುಮಕೂರು ಜಿಲ್ಲೆಯ ಗುಬ್ಬಿ ನ್ಯಾಯಾಲಯದ ಆವರಣದಲ್ಲಿ ನಡೆಯಿತು. ಶೌಚಾಲಯದಿಂದ ಹೊರಬರುತ್ತಿದ್ದಂತೆ ಮಹಿಳೆಯ ಮೇಲೆರಗಿದ ನಾಯಿ, ಅವರ ಮುಖಕ್ಕೆ ಕಚ್ಚಿದೆ. ಬೀದಿನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಪರದಾಡುತ್ತಿದ್ದ ಮಹಿಳೆ‌ಯನ್ನು ನೋಡಿದ ಸ್ಥಳದಲ್ಲಿದ್ದವರು ಆಕೆಯನ್ನು ರಕ್ಷಿಸಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದಷ್ಟೂ ಪದೇ ಪದೆ ದಾಳಿ ಮಾಡುತ್ತಿದ್ದ ನಾಯಿಯನ್ನು ಕಂಡ ಸ್ಥಳೀಯರು ರೊಚ್ಚಿಗೆದ್ದು ಹೊಡೆದು ಸಾಯಿಸಿದ್ದಾರೆ.

ಗಾಯಗೊಂಡು ನರಳುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಸ್ಥಳೀಯರು, ತಾಲೂಕು‌ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಿದ್ದಾರೆ.

“ಚಿತ್ರದುರ್ಗ ಜಿಲ್ಲೆಯಲ್ಲಿ ಕೂಡ ನಾಯಿ ಹಾವಳಿ ಹೆಚ್ಚಾಗಿದ್ದು, ಚಳ್ಳಕೆರೆಯಲ್ಲಿ ಕಳೆದ ತಿಂಗಳು ಎಂಟತ್ತು ಪ್ರಕರಣಗಳು ದಾಖಲಾಗಿವೆ. ಸ್ಥಳೀಯ ಸಂಸ್ಥೆಗಳು ಮತ್ತು ನಗರಾಡಳಿತ ಬೀದಿನಾಯಿಗಳ ನಿಯಂತ್ರಣಕ್ಕೆ ಮುಂದಾಗಬೇಕು” ಎಂದು ನಿವಾಸಿ ಮುರಳಿ ಒತ್ತಾಯಿಸಿದರು.

ದಾವಣಗೆರೆ ಜಿಲ್ಲಾಧಿಕಾರಿ ಜಿ ಎಂ ಗಂಗಾಧರಸ್ವಾಮಿ ಈ ಕುರಿತು ಸಭೆ ನಡೆಸಿದ್ದು, “ನಾಯಿಗಳು ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ಮಾಡುವುದರ ನಿಯಂತ್ರಣಕ್ಕಾಗಿ ನಾಯಿಗಳು ಹೆಚ್ಚಾಗದಂತೆ ನಗರಾಭಿವೃದ್ಧಿ ಕೋಶ, ಮಹಾನಗರಪಾಲಿಕೆ ಸಂಬಂಧಿಸಿದ ಟೆಂಡರ್ ಮೂಲಕ ಸಂಸ್ಥೆಗಳನ್ನು ಗುರುತಿಸಿ ಎಲ್ಲ ನಾಯಿಗಳಿಗೆ ಪಶುಪಾಲನಾ ಸಹಯೋಗದೊಂದಿಗೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗದಂತೆ ಲಸಿಕೆ ಹಾಕಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ನಾಯಿ ಕಚ್ಚಿದಾಗ ಲಸಿಕೆ ನೀಡಲು ಸಾರ್ವಜನಿಕರಿಗೆ ಸಹಾಯವಾಗುವಂತೆ 108 ಇಲ್ಲವೇ 1098 ಸಹಾಯವಾಣಿ ರಚನೆ ಮಾಡಿ, ಕರೆ ಬಂದ ಕೂಡಲೇ ಅವರ ಮನೆಗೆ ತೆರಳಿ ಚಿಕಿತ್ಸೆ ನೀಡಬೇಕು. ಜಿಲ್ಲೆಯಲ್ಲಿರುವ ಎಲ್ಲ ಬೀದಿನಾಯಿ, ಸಾಕುನಾಯಿಗಳಿಗೆ ರೇಬಿಸ್ ಲಸಿಕೆ ನೀಡಲು ಕ್ರಮಕೈಗೊಳ್ಳಬೇಕು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಫೇಸ್ಬುಕ್ ನಲ್ಲಿ ಗಣೇಶ ವಿಸರ್ಜನೆಗೆ ಡಿಜೆ ಬಳಕೆ ಸುಳ್ಳು ಸುದ್ದಿ: ಪ್ರಕರಣ ದಾಖಲಿಸಿದ ಪೊಲೀಸರು

ಒಟ್ಟಿನಲ್ಲಿ ರಾಜ್ಯದ ಜನತೆ ಮೇಲೆ ಅಲ್ಲಲ್ಲಿ ಆಗುತ್ತಿರುವ ಬೀದಿನಾಯಿಗಳ ದಾಳಿಗಳಿಂದ ಮುಕ್ತರಾಗಬೇಕಿದೆ. ಇದಕ್ಕಾಗಿ ಸ್ಥಳೀಯ ಸಂಸ್ಥೆಗಳು, ಆಡಳಿತಗಳು ಸುರಕ್ಷತೆ ಕ್ರಮ ಕೈಗೊಳ್ಳಬೇಕು ಎನ್ನುವುದು ನಾಗರಿಕರು ಒತ್ತಾಯಿಸಿದರು.

WhatsApp Image 2025 11 17 at 5.21.38 PM
ವಿನಾಯಕ್ ಚಿಕ್ಕಂದವಾಡಿ
+ posts

ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ವಿನಾಯಕ್ ಚಿಕ್ಕಂದವಾಡಿ
ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...