ಮನುಸ್ಮೃತಿಯ ಘರ್ ವಾಪ್ಸಿಯನ್ನು ಸಂವಿಧಾನ ತಡೆದು ನಿಲ್ಲಿಸಿದೆ: ಕೆ.ವಿ.ಪ್ರಭಾಕರ್

Date:

ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು, ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಪ್ರಚಾರ ಇಲಾಖೆ, SC/ST ಸಂಪಾದಕರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ವಿಚಾರಗೋಷ್ಠಿಯನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, “ಸಂವಿಧಾನದ ಕುತ್ತಿಗಿಗೇ ಕೈ ಹಾಕಲಾಗುತ್ತಿದೆ. ಇದಕ್ಕೆ ಸುದ್ದಿ ಮಾಧ್ಯಮ ಮೂಕಸಾಕ್ಷಿಯಾಗಿರುವುದು ಅಪಾಯಕಾರಿ” ಎಂದರು.

“ಈ ಹೊತ್ತಿನ ಬಹಳ ಪತ್ರಕರ್ತರ ಕೈಯಲ್ಲಿ ವಿಚಾರ, ವಿಮರ್ಷೆಗಿಂತ ಹೆಚ್ಚಾಗಿ ಪೆಟ್ರೋಲ್, ಬೆಂಕಿಪೊಟ್ಟಣವೇ ಹೆಚ್ಚಾಗಿದೆ. ಕಡ್ಡಿಗೀರುವ ಅವಕಾಶಕ್ಕಾಗಿ ಕಾಯುತ್ತಿರುವಂತೆ ಕಾಣುತ್ತಾರೆ. ಪ್ರಜಾಪ್ರಭುತ್ವದ ಪ್ರಾಣ ಪಕ್ಷಿ ಸುದ್ದಿ ಸಂಸ್ಥೆಗಳ ಕೈಯಲ್ಲಿದೆ. ಪ್ರಾಣ ಉಳಿಸುವುದು, ಬಿಡುವುದು ಇವರಿಗೇ ಬಿಟ್ಟಿದೆ. ಸುದ್ದಿ ಮಾಧ್ಯಮದ ಆತ್ಮ ಆಗಿರುವ “ವಾಕ್ ಸ್ವಾತಂತ್ರ್ಯ ಮತ್ತು ಜಾತ್ಯತೀತತೆ ಹಾಗೂ ಸಾಮಾಜಿಕ ನ್ಯಾಯ”ವೇ ಅಂಬೇಡ್ಕರ್ ದೃಷ್ಟಿಕೋನದ ಆತ್ಮವೂ ಆಗಿದೆ. ಅಂಬೇಡ್ಕರ್ ಕೊಟ್ಟ ಸಂವಿಧಾನದ ಮೌಲ್ಯವೂ ಆಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇವತ್ತಿನ‌ ಸುದ್ದಿ ಮಾಧ್ಯಮಗಳ ರಚನೆ ಮತ್ತು ಆಚರಣೆಯಲ್ಲಿ ಜಾತ್ಯತೀತತೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ, ಅಂಬೇಡ್ಕರ್ ದೃಷ್ಟಿಕೋನದ ಮರ್ಯಾದೆಗೇಡು ಹತ್ಯೆ ನಡೆಯುತ್ತಿದೆ. ದೇಶದಲ್ಲಿ ಎರಡು ತದ್ವಿರುದ್ದವಾದ ಬೆಳವಣಿಗೆಗಳು ಅತೀ ವೇಗವಾಗಿ ನಡೆಯುತ್ತಿವೆ. ಒಂದು ಅಂಬೇಡ್ಕರ್ ಅವರ ವಿಗ್ರಹಗಳನ್ನು ಅತೀ ಹೆಚ್ಚು ನಿರ್ಮಿಸುತ್ತಲೇ ಅಂಬೇಡ್ಕರ್ ಅವರ ವಿಚಾರಗಳನ್ನು ಕೊಲ್ಲುವ ಪ್ರಕ್ರಿಯೆ ಕೂಡ ಹೆಚ್ಚು ವೇಗ ಪಡೆದುಕೊಂಡಿದೆ. ವಿಗ್ರಹಗಳನ್ನು ಸ್ಥಾಪಿಸಿ, ವಿಚಾರಗಳನ್ನು ಕೊಲ್ಲುವ ಈ ವಿದ್ಯಮಾನಕ್ಕೆ ಸುದ್ದಿ ಮಾಧ್ಯಮ ” ಮೂಕಸಾಕ್ಷಿ”ಯಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಇಡೀ ದೇಶದಲ್ಲಿ ಅತೀ ಹೆಚ್ಚು ಅಂಬೇಡ್ಕರ್ ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಆದರೆ, ವಿಶ್ವದಲ್ಲೇ ಅತೀ ಹೆಚ್ಚು ಮಾನ್ಯತೆ ಪಡೆದ ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೂಪಗೊಳಿಸುತ್ತಾ, ಸಂವಿಧಾನದ ತಲೆ ಕತ್ತರಿಸುವುದು, ಕೈ ಮುರಿಯುವುದು, ಮಸಿ ಬಳಿಯುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಸಂವಿಧಾನದಿಂದ “ಜಾತ್ಯತೀತ ಮತ್ತು ಸಮಾಜವಾದ” ಎನ್ನುವ ಮೌಲ್ಯವನ್ನು ಕೀಳಬೇಕು ಎನ್ನುವ ಕೂಗಿನ‌ ಹಿಂದೆ ಇರುವುದೂ ಕೂಡ ಅಂಬೇಡ್ಕರ್ ಪ್ರತಿಮೆಯನ್ನು ವಿರೂಪಗೊಳಿಸುವ ವಿಕೃತ ಮನಸ್ಥಿತಿಯೇ ಆಗಿದೆ” ಎಂದು ವಿಶ್ಲೇಷಿಸಿದರು.

“ತಮ್ಮ 65 ವರ್ಷಗಳ ಜೀವಿತಾವಧಿಯಲ್ಲಿ ಅರ್ಧಕ್ಕೂ ಹೆಚ್ಚು ಆಯಸ್ಸನ್ನು ಅಂಬೇಡ್ಕರ್ ಅವರು ಪತ್ರಕರ್ತರಾಗಿ, ಸಂಪಾದಕರಾಗಿ, ಲೇಖಕರಾಗಿ, ಬರಹಗಾರರಾಗಿ ಕಳೆದಿದ್ದಾರೆ. 1920 ರಲ್ಲಿ “ಮೂಕನಾಯಕ”, 1927 ರಲ್ಲಿ “ಬಹಿಷ್ಕೃತ ಭಾರತ”, 1928 ರಲ್ಲಿ “ಸಮತಾ”, 1930 ರಲ್ಲಿ “ಜನತಾ”, 1943 ರಲ್ಲಿ ಪ್ರಬುದ್ಧ ಭಾರತ ಪತ್ರಿಕೆಗಳನ್ನು ಆರಂಭಿಸಿ ಮುನ್ನಡೆಸಿದರು. ಸದ್ಯ ಸುಮಾರು 25000 ಪುಟದಷ್ಟು ಅಂಬೇಡ್ಕರ್ ಅವರ ಬರಹಗಳು ಲಭ್ಯವಿದೆ. ಸುಮಾರು ಐದು ವರ್ಷಗಳ ಕಾಲ ಜಗತ್ತಿನ ಎಲ್ಲಾ ಧಾರ್ಮಿಕ ಗ್ರಂಥಗಳನ್ನೂ ಅಭ್ಯಾಸ ಮಾಡಿ, ಅಧ್ಯಯನ‌ ನಡೆಸಿ “ಬುದ್ಧ ಮತ್ತು ಅವನ ಧರ್ಮ” ಕೃತಿಯನ್ನು ಬರೆಯುವಾಗಲೇ ತಾವು ಮಾಡಿಟ್ಟಿದ್ದ ನೋಟ್ಸ್ ಗಳ ರಾಶಿಯ ಮೇಲೇ ಕೊನೆಯುಸಿರೆಳೆದರು” ಎಂದರು.

“ಒಂದು ಕಡೆ ಮಾಧ್ಯಮಗಳಲ್ಲಿ ದಲಿತ ಸಮುದಾಯದ ಪ್ರತಿನಿಧ್ಯವೇ ಇಲ್ಲ ಎನ್ನುವ ಅಧ್ಯಯನ‌ ವರದಿಗಳು ಬಂದಿವೆ. ನಿರ್ಣಾಯಕ ಸ್ಥಾನಗಳಲ್ಲಿ ಮಹಿಳೆಯರಿಗೆ, ದಲಿತರಿಗೆ ಸುದ್ದಿ ಸಂಸ್ಥೆಗಳು ನಿಷೇದ ಹೇರಿವೆ ಎನ್ನುವ ವರದಿಗಳೂ ಇವೆ. ಈ ತಾರತಮ್ಯ ಸುದ್ದಿಗಳ, ಸಂಗತಿಗಳ ಆಯ್ಕೆಯ ಮೇಲೆ ಪರಿಣಾಮ ಬೀರುತ್ತವೆ. ಮಾತ್ರವಲ್ಲದೆ ಪತ್ರಿಕೆಗಳನ್ನು ರೂಪಿಸುವ ಮತ್ತು ಸುದ್ದಿಗಳನ್ನು ಗ್ರಹಿಸುವುದರಲ್ಲಿ ಮತ್ತು ಮಂಡಿಸುವುದರಲ್ಲೂ ಅಂಬೇಡ್ಕರ್ ದೃಷ್ಟಿಕೋನ ಕಾಣೆಯಾಗಿದೆ” ಎಂದು ಹೇಳಿದರು.

ಪ್ರಭಾಕರ್ 2

“ಅಂಬೇಡ್ಕರ್ ಅವರ ದೃಷ್ಟಿಕೋನದ ಮರುಸ್ಥಾಪನೆ ಮತ್ತು ಸುದ್ದಿ ಮಾಧ್ಯಮಗಳಲ್ಲಿ ನಾಪತ್ತೆಯಾಗಿರುವ ಕಾಳಜಿಗಳ ಮರು ಶೋಧನೆ ಆಗುವ ಅಗತ್ಯವಿದೆ. 2012 ರ ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿಯನ್ನು ನೆಪವಾಗಿ ಇಟ್ಟುಕೊಂಡು ಪ್ರಜಾವಾಣಿ ಪತ್ರಿಕೆ ದೇವನೂರು ಮಹದೇವ ಅವರ ಅತಿಥಿ ಸಂಪಾದಕತ್ವದಲ್ಲಿ ಸಂಚಿಕೆ ಹೊರತಂದಿತ್ತು. ಈ ಸಂಚಿಕೆಯನ್ನು ನಾನು ಇವತ್ತಿಗೂ ಜೋಪಾನವಾಗಿ ಇಟ್ಟಿದ್ದೀನಿ. ಈ ಸಂಚಿಕೆ ಪತ್ರಿಕೋದ್ಯಮದಲ್ಲಿ ಮರ್ಯಾದೆಗೇಡು ಹತ್ಯೆಗೆ ಒಳಗಾಗಿರುವ ಅಂಬೇಡ್ಕರ್ ದೃಷ್ಟಿಕೋನಕ್ಕೆ ಮರು ಜೀವ ಕೊಡುವ ಅದ್ಭುತ ಪ್ರಯತ್ನವಾಗಿತ್ತು. ಆ ಸಂಚಿಕೆಯ ಮುಖಪುಟದಲ್ಲಿ, ದೇವನೂರು ಮಹದೇವ ಅವರು ಬರೆದಿರುವ “ಸಮಾನತೆ ಕನಸನ್ನು ಮತ್ತೆ ಕಾಣುತ್ತಾ” ಎನ್ನುವ ಅತಿಥಿ ಸಂಪಾದಕೀಯ ಮತ್ತು ಇದರ ಪಕ್ಕದಲ್ಲೇ ಸಂಪಾದಕ ಶಾಂತಕುಮಾರ್ ಅವರು ಬರೆದಿರುವ “ಕಾಳಜಿಗಳ ಮರು ಶೋಧ..” ಎನ್ನುವ ಸಂಪಾದಕೀಯ ಎರಡೂ ಕನ್ನಡಿಗಳು. ಈ ಸಂಪಾದಕೀಯದ ಕನ್ನಡಿಗಳಲ್ಲಿ ನಾವು ಪತ್ರಕರ್ತರು ನಮ್ಮನ್ನು ನಾವು ಮರು ಶೋಧಿಸಿಕೊಳ್ಳುವ ಅಗತ್ಯವಿದೆ. ಈ ಕನ್ನಡಿಗಳಲ್ಲಿ ಈ ಹೊತ್ತಿನ ಸುದ್ದಿ ಮಾಧ್ಯಮಗಳು ದರ್ಶನ ಪಡೆಯಲಿ” ಎಂದು ಆಶಿಸಿದರು.

ವಿಧಾನ ಪರಿಷತ್ ಸದಸ್ಯರಾದ ನವೀನ್ ಉದ್ಘಾಟಿಸಿದರು. ಹಿರಿಯ ಪತ್ರಕರ್ತರಾದ ಡಿ.ಉಮಾಪತಿ‌ ಅವರು ಆಶಯ ಮಾತುಗಳನ್ನಾಡಿದರು. ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೆಷಾ ಖಾನುಂ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿಯ ಕಾರ್ಯದರ್ಶಿ ಸಹನಾ ಭಟ್, ಅಕಾಡೆಮಿ ಸದಸ್ಯರಾದ ಅಹೋಬಳಪತಿ ಸೇರಿ SC/ST ಸಂಪಾದಕರ ಸಂಘದ ಪದಾಧಿಕಾರಿಗಳು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...