ಚಿತ್ತಾಪುರ | ಪಥಸಂಚಲನಕ್ಕೆ ಅನುಮತಿ ಕೋರಿ 12 ಸಂಘಟನೆಗಳ ಮನವಿ: ಶಾಂತಿಸಭೆಗೆ ಹೈಕೋರ್ಟ್‌ ನಿರ್ದೇಶನ

Date:

ಚಿತ್ತಾಪುರದಲ್ಲಿ ಆರೆಸ್ಸೆಸ್‌ ಪಥಸಂಚಲನವನ್ನು ವಿರೋಧಿಸಿ ಸುಮಾರು 12 ಸಂಘಟನೆಗಳು ತಾವೂ ಬೀದಿಗಿಳಿಯುವುದಾಗಿ ಅನುಮತಿ ಕೋರಿದ ಬೆನ್ನಲ್ಲೇ ಸಂಘಟನೆಗಳ ನಡುವೆ ಶಾಂತಿಸಭೆ ನಡೆಸುವಂತೆ ಕಲಬುರಗಿ ಹೈಕೋರ್ಟ್‌ ಜಿಲ್ಲಾಡಳಿತಕ್ಕೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಶಾಂತಿಸಭೆ ಆರಂಭವಾಗಿದೆ.

ಆರೆಸ್ಸೆಸ್‌ ತನ್ನ ಶತಮಾನೋತ್ಸವದ ಅಂಗವಾಗಿ ಅಕ್ಟೋಬರ್ 19ರಂದು ಆಯೋಜಿಸಿದ್ದ ಪಥಸಂಚಲನ ನಡೆಸಲು ಚಿತ್ತಾಪುರ ತಹಶೀಲ್ದಾರ್ ಅನುಮತಿ ನಿರಾಕರಿಸಿದ ನಂತರ ಆರೆಸ್ಸೆಸ್‌ನ ಕಲಬುರಗಿ ವಿಭಾಗದ ಮುಖ್ಯಸ್ಥ ಅಶೋಕ್ ಪಾಟೀಲ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನಂತರ ಹೈಕೋರ್ಟ್ ನವೆಂಬರ್ 2ರಂದು ಪಥಸಂಚಲನ ನಡೆಸುವಂತೆ ಅನುಮತಿ ಪಡೆಯಲು ಸಂಘಟನೆಗೆ ಅವಕಾಶ ನೀಡಿತ್ತು.

ಈ ಹಿನ್ನೆಲೆಯಲ್ಲಿ ಭೀಮ್ ಆರ್ಮಿ ಮತ್ತು ದಲಿತ್ ಪ್ಯಾಂಥರ್ಸ್ ಕೂಡ ಅದೇ ದಿನ ಅಂದರೆ ನವೆಂಬರ್ 2ರಂದು ರ‍್ಯಾಲಿಗಳನ್ನು ಆಯೋಜಿಸಲು ಅನುಮತಿ ಕೋರಿ ಅಕ್ಟೋಬರ್‌ 21ರ ಮಂಗಳವಾರ ಕಲಬುರಗಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾವೇರಿ | ಕಿತ್ತೂರು ರಾಣಿ ಚನ್ನಮ್ಮನ ಪುತ್ಥಳಿ ಲೋಕಾರ್ಪಣೆ

”ಆರೆಸ್ಸೆಸ್‌ನ ಕಾರ್ಯಗಳು ಮತ್ತು ಆಲೋಚನೆಗಳು ಯುವಜನರು ಹಾಗೂ ಮಕ್ಕಳ ಮನಸ್ಸಿನ ಮೇಲೆ ನಕಾರಾತ್ಮಕ ಪ್ರಭಾವ ಬೀರಬಹುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ ದಲಿತ ಪ್ಯಾಂಥರ್ಸ್, ಒಂದು ಕೈಯಲ್ಲಿ ಸಂವಿಧಾನದ ಪೀಠಿಕೆ, ಇನ್ನೊಂದು ಕೈಯಲ್ಲಿ ನೀಲಿ ಧ್ವಜ ಹಿಡಿದುಕೊಂಡು ರ‍್ಯಾಲಿ ನಡೆಸಲು ಅನುಮತಿ ಕೋರಿತ್ತು. ಇದರ ನಡುವೆ ಭೀಮ್ ಆರ್ಮಿ ಕೂಡ ತ್ರಿವರ್ಣ ಧ್ವಜ, ಬೌದ್ಧ ಧರ್ಮದ ಪಂಚಶೀಲ ಧ್ವಜ ಮತ್ತು ಬಿದಿರಿನ ಕೋಲು ಹಿಡಿದು ರ‍್ಯಾಲಿ ನಡೆಸಲು ಅನುಮತಿ ಕೇಳಿತ್ತು. ಇದಾದ ನಂತರ ಈವರೆಗೆ ಸುಮಾರು 12 ಸಂಘಟನೆಗಳು ನವೆಂಬರ್‌ 2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...