ಚಿಕ್ಕಬಳ್ಳಾಪುರ | ಕ್ರಿಸ್‌ಮಸ್ ; ಜಿಲ್ಲಾದ್ಯಂತ ಚರ್ಚ್‌ಗಳಲ್ಲಿ ಸಡಗರ, ಸಂಭ್ರಮ

Date:

ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ತಾಲೂಕಿನಾದ್ಯಂತ ಚರ್ಚುಗಳಲ್ಲಿ ಶಾಂತಿಧೂತ ಯೇಸುವಿನ ಜನ್ಮದಿನದ ಅಂಗವಾಗಿ ಕ್ರೈಸ್ತ ಬಾಂಧವರು ಕ್ರಿಸ್‌ಮಸ್‌ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಚಿಕ್ಕಬಳ್ಳಾಪುರ ನಗರದ ಸಿಎಸ್‌ಐ ವೆಸ್ಲಿ ಚರ್ಚ್‌ ಸೇರಿದಂತೆ ಜಿಲ್ಲೆಯಾದ್ಯಂತ ಕ್ರಿಸ್‌ ಮಸ್‌ ಹಬ್ಬದ ಹಿನ್ನೆಲೆ ಚರ್ಚ್‌ಗಳಿಗೆ ಬಣ್ಣಬಣ್ಣದ ವಿದ್ಯುದೀಪಾಲಂಕಾರ ಮಾಡಲಾಗಿತ್ತು. ಕ್ರೈಸ್ತ ಬಾಂಧವರು ಹೊಸ ಉಡುಗೆ ತೊಡುಗೆಗಳನ್ನು ತೊಟ್ಟು ಮನೆಗಳ ಮುಂದೆ ಕ್ರಿಸ್‌ ಮಸ್‌ ಟ್ರೀ, ಗೋದಲಿ, ನಕ್ಷತ್ರ, ಬೆಲ್‌ ಹಾಗೂ ಸಂತ ಕ್ಲಾಸ್‌ ವೇಷಭೂಷಣ ಹಾಕುವ ಮೂಲಕ ಕ್ರಿಸ್‌ ಮಸ್‌ ಹಬ್ಬವನ್ನು ಆಚರಿಸಿದರು.

ಬಾಗೇಪಲ್ಲಿ ಪಟ್ಟಣದ ವಿವಿಧ ಚರ್ಚುಗಳಿಗೆ ವಿಶೇಷ ವಿದ್ಯುದ್ಧೀಪಾಲಂಕಾರ ಮಾಡಲಾಗಿದ್ದು, ವರ್ಣರಂಜಿತವಾಗಿ ಕಂಗೊಳಿಸಿದವು. ಕ್ರೈಸ್ತರ ಮನೆಗಳು ಸಹ ವಿದ್ಯುತ್ ದೀಪಗಳಿಂದ ಗಮನ ನೋಡುಗರ ಗಮನ ಸೆಳೆಯುವಂತಿದ್ದವು. ಬಾಗೇಪಲ್ಲಿ ತಾಲ್ಲೂಕಿನಾದ್ಯಂತ
ಕ್ರಿಸ್ಮಸ್ ಗೋದಲಿ, ನಕ್ಷತ್ರಗಳ ಸಾಲು ಎಲ್ಲೆಡೆ ರಾರಾಜಿಸಿದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶೇಷ ತಿನಿಸುಗಳಾದ ಕೇಕು, ಕುಸ್ವಾರ್‌ಗಳಿಗೆ ವಿಪರೀತ ಬೇಡಿಕೆ ಸೃಷ್ಟಿಯಾಗಿತ್ತು. ಹಬ್ಬಕ್ಕಾಗಿ ಸಮುದಾಯದವರು ಎರಡು ದಿನಗಳಿಂದ ಸಿದ್ಧತೆಯಲ್ಲಿ ತೊಡಗಿದ್ದು, ಸಂಭ್ರಮಾಚರಣೆಗೆ ಮಂಗಳವಾರ ಹಾಗೂ ಬುಧವಾರ ಚರ್ಚ್‌ ಹಾಗೂ ಮನೆಗಳಲ್ಲಿ ಅಂತಿಮ ತಯಾರಿ ನಡೆಸುತ್ತಿದ್ದ ದೃಶ್ಯ ಕಂಡುಬಂತು. ಯೇಸು ಹುಟ್ಟಿನ ಸಂದೇಶದ ದ್ಯೋತಕವಾಗಿ ಬಣ್ಣ ಬಣ್ಣದ ನಕ್ಷತ್ರಗಳು, ಆಕಾಶ ಬುಟ್ಟಿಗಳು, ಕ್ರಿಸ್‌ಮಸ್‌ ಟ್ರೀಗಳು ಎಲ್ಲಾ ಚರ್ಚ್‌ ಹಾಗೂ ಪ್ರಾರ್ಥನಾ ಮಂದಿರಗಳ ಮಹಡಿಯನ್ನು ಅಲಂಕರಿಸಿದ್ದವು.

ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ಮನೆಗಳಲ್ಲಿ ಕೇಕ್‌ ಹಾಗೂ ವಿಶೇಷ ಖಾದ್ಯ ತಯಾರಿ ನಡೆಸಿದ್ದು, ಮನೆಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಕ್ರಿಸ್‌ ಮಸ್‌ ಅಂಗವಾಗಿ ಚರ್ಚುಗಳಲ್ಲಿ ಯೇಸುವಿನ ಸ್ತುತಿಗೀತೆಗಳ ಗಾಯನ, ಬಲಿಪೂಜೆ ಹಾಗೂ ವಿಶೇಷ ಪಾರ್ಥನೆ ಜರುಗಿದವು.

ಬಾಗೇಪಲ್ಲಿ ಪಟ್ಟಣದ ಹೊಸ ಜೀವನ ನಿಲಯದ ಫಾದರ್ ಹೆಚ್.ಎಸ್.ಪ್ರಕಾಶ್ ಪ್ರಾರ್ಥನೆ ಮಾಡಿ ಕ್ರಿಸ್ಮಸ್ ಸಂಭ್ರಮದ, ಆಡಂಬರದ ಅಚರಣೆಯ ಹೊರತಾಗಿ ಪ್ರೀತಿ, ದಯೆ, ಕರುಣೆ, ಕ್ಷಮೆ, ಸೇವೆ ಮುಂತಾದ ಮಾನವೀಯ ಮತ್ತು ದೈವೀ ಮೌಲ್ಯಗಳನ್ನು ಬದುಕಿಗೆ ಅಳವಡಿಸಿಕೊಳ್ಳುವ ಒಂದು ಶ್ರೇಷ್ಠ ಆಚರಣೆಯಾಗಲಿ ಎಂದು ಹರಸಿದರು. ‌

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಸಿರಿಧಾನ್ಯ ಬೆಳೆಗಳಿಂದ ಆರ್ಥಿಕ ಸಿರಿ : ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಮನುಷ್ಯನ ಅಂತರಾತ್ಮದಲ್ಲಿ ಮಾನವೀಯ ಮೌಲ್ಯಗಳು ಕ್ರಿಸ್ತನ ಜನನದಲ್ಲಿ ಮತ್ತೆ ಮತ್ತೆ ಮೂಡಿಬರಲಿ. ವಿಶ್ವದ ಸಮಸ್ತ ಜನರು ಕೌಟುಂಬಿಕವಾಗಿ ಮತ್ತು ಸಾಮಾಜಿಕವಾಗಿ ಪ್ರೀತಿ, ಶಾಂತಿ ನೆಮ್ಮದಿಯೊಂದಿಗೆ ಸಹಾಯ, ಸಹಕಾರ, ಸಹಬಾಳ್ವೆಯೊಂದಿಗೆ ಇಡೀ ಮನುಕುಲ ಒಂದು ವಿಶ್ವ ಕುಟುಂಬವಾಗಿ ಜೀವಿಸಲು ಈ ಕ್ರಿಸ್ತ ಜಯಂತಿ ಕ್ರಿಸ್​ಮಸ್ ಹಬ್ಬ ಸರ್ವರಿಗೂ ಸ್ಪೂರ್ತಿ ಹಾಗೂ ಪ್ರೇರಣೆಯಾಗಲಿ ಎಂದು ಶುಭ ಕೋರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...