ಉಡುಪಿ | ಜಮ್ಮು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿ: ಸಿಪಿಎಂ ಖಂಡನಾ ಸಭೆ, ಶ್ರದ್ಧಾಂಜಲಿ

Date:

ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಹೇಯ ಕ್ರತ್ಯ ಖಂಡಿಸಿ ಸಿಪಿಎಂ ಇಂದು ಕುಂದಾಪುರದ ಬೆವರು ಕಚೇರಿಯಲ್ಲಿ ಖಂಡನಾ ಸಭೆ ನಡೆಸಿತು ಹಾಗೂ ಅಗಲಿದ ಮುಗ್ಧ ಜೀವಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಈ ಕ್ರತ್ಯವು ಅಪಾರ ನೋವು ದು:ಖ ತಂದಿದೆ. ಈ ದಾಳಿಯು ಮಾನವೀಯತೆ ಮೇಲಿನ ದಾಳಿಯಾಗಿದ್ದು ಧಾರ್ಮಿಕ ಅಥವಾ ಕೋಮು ಆಧಾರದ ಮೇಲೆ ನಮ್ಮನ್ನು ವಿಭಜಿಸಲು ಸಾಧ್ಯವಿಲ್ಲ ಎಂಬುವುದನ್ನು ಉಗ್ರರು ಹಾಗೂ ಮತೀಯವಾದಿಗಳು ತಿಳಿಯಬೇಕು ಎಂದರು.

ಭಯೋತ್ಪಾದಕರ ವಿಭಜಕ ಮತ್ತು ಮೋಸಗೊಳಿಸುವ ಕಾರ್ಯಸೂಚಿಗೆ ಬಲಿಯಾಗಬಾರದು ದೇಶದ ಐಕ್ಯತೆ ಒಡೆಯಲು ಸಮಗ್ರತೆ ದುರ್ಬಲಗೊಳಿಸುವ ಪ್ರಯತ್ನಕ್ಕೆ ಎಲ್ಲರೂ ಪಕ್ಷ ಬೇಧ ಮರೆತು ಸೋಲಿಸಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರವಾಸಿಗರನ್ನು ರಕ್ಷಿಸಲು ಕಾಶ್ಮೀರಿ ಮುಸ್ಲಿಮರು ತಮ್ಮ ಪ್ರಾಣವನ್ನೇ ನೀಡಿದ್ದಾರೆ ಘಟನೆ ನಂತರ ಗಾಯಾಳುಗಳಿಗೆ ರಕ್ತ ದಾನ ಮತ್ತು ಇತರೆ ಸಹಾಯ ಗಳನ್ನು ಮಾಡಿರುವುದಲ್ಲದೇ ಮೌನಾಚರಣೆ, ಶ್ರದ್ಧಾಂಜಲಿ ಸಭೆ ಪ್ರತಿಭಟನೆ,ಬಂದ್ ಮಾಡಿಸಿ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ವಿವಿಧ ರಾಜಕೀಯ ಪಕ್ಷಗಳ ಜನರು ಒಂದೇ ಧ್ವನಿಯಲ್ಲಿ ಖಂಡಿಸಿದ್ದಾರೆ ಇದು ನಿಜವಾದ ಭಾರತ ಎಂಬುವುದು ನಮ್ಮೆಲ್ಲರ ಹೆಮ್ಮೆ ಆಗಿದೆ. ಅಗಲಿದ ಜೀವಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಪಕ್ಷವು ಸಲ್ಲಿಸುತ್ತದೆ ಕುಟುಂಬ ದವರಿಗೆ ಸಾಂತ್ವನ ಹೇಳುತ್ತದೆ.

ಕೇಂದ್ರ ಸರಕಾರವು ಅಪರಾಧಿಗಳನ್ನು ವಿಳಂಬವಿಲ್ಲದೆ ಗುರುತಿಸಿ ನ್ಯಾಯ ವ್ಯವಸ್ಥೆಯಲ್ಲಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು. ಜಮ್ಮು ಕಾಶ್ಮೀರದ ಪೋಲಿಸ್ ರಕ್ಷಣಾ ವ್ಯವಸ್ಥೆ ಕೇಂದ್ರ ಸರ್ಕಾರದ ಅಧೀನದಲ್ಲಿರುವುದರಿಂದ ಭದ್ರತಾ ವ್ಯವಸ್ಥೆಯನ್ನು ಮರು ಪರಿಶೀಲಿಸಬೇಕು ಇಂತಹ ಅಮಾನವೀಯ ಘಟನೆ ನಡೆಯದಂತೆ ಎಚ್ಚರ ವಹಿಸಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಎಲ್ಲರೂ ಎದ್ದು ನಿಂತು ಶ್ರದ್ಧಾಂಜಲಿ ಅರ್ಪಿಸಿದರು. ಸಭೆಯಲ್ಲಿ ಸಿಪಿಎಂ ತಾಲೂಕು ಕಾರ್ಯದರ್ಶಿ ಚಂದ್ರಶೇಖರ ವಿ,ಪಕ್ಷದ ತಾಲೂಕು ಸಮಿತಿ ಸದಸ್ಯರಾದ ಸಂತೋಷ್ ಹೆಮ್ಮಾಡಿ, ಚಿಕ್ಕ ಮೊಗವೀರ, ಅಣ್ಣಪ್ಪ ಅಬ್ಬಿಗುಡ್ಡಿ, ರಹೇಮಾನ್, ಅನಂತ ಕುಲಾಲ್ ಸುಧೀರ್, ಕ್ರಷ್ಣ ಪೂಜಾರಿ, ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...