ಉಡುಪಿ | ಕುಂದಾಪುರದಲ್ಲಿ ಬಯ್ಯಾರೆಡ್ಡಿ ಶ್ರದ್ಧಾಂಜಲಿ ಸಭೆ

Date:

ಇತ್ತೀಚೆಗೆ ಅಗಲಿದ ಸಿಪಿಐ (ಎಂ) ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾಗಿದ್ದ ಕಾಮ್ರೇಡ್ ಜಿ.ಸಿ ಬಯ್ಯಾರೆಡ್ಡಿ ಅವರಿಗೆ ಕುಂದಾಪುರ ಸಿಪಿಎಂ ಪಕ್ಷದ ತಾಲೂಕು ಸಮಿತಿ ಆಶ್ರಯದಲ್ಲಿ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.

ಸಭೆಯನ್ನುದ್ದೇಶಿಸಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ ಬದುಕಿನುದ್ದಕ್ಕೂ ರೈತರ ಬೇಡಿಕೆಗಳಿಗಾಗಿ ರಾಜ್ಯದ ಎಲ್ಲಾ ಬಣಗಳನ್ನು ಒಟ್ಟಿಗೆ ತಂದು ಐಕ್ಯ ಹೋರಾಟವನ್ನು ಅನಾರೋಗ್ಯದ ನಡುವೆಯೂ ತೊಡಗಿಸಿಕೊಂಡ ಕ್ರಾಂತಿಕಾರಿ ವ್ಯಕ್ತಿತ್ವ ಕಾಮ್ರೇಡ್ ಬಯ್ಯಾರೆಡ್ಡಿ ಅವರದ್ದು ರೈತರ ಸಮಸ್ಯೆಗಳನ್ನು ಪರಿಹರಿಸಲು ಮತ್ತಷ್ಟು ಹೋರಾಟವನ್ನು ಮುಂದುವರಿಸುವುದೇ ಬಯ್ಯಾರೆಡ್ಡಿ ಅವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಹೇಳಿದರು.

ಸಭೆಯನ್ನುದ್ದೇಶಿಸಿ ಎಚ್ ನರಸಿಂಹ ಮಾತನಾಡಿ ಕಾಮ್ರೇಡ್ ಬಯ್ಯಾರೆಡ್ಡಿ ಅವರು ರಾಜ್ಯದ ಹಲವಾರು ಹೋರಾಟಗಳಿಗೆ ನೇತ್ರತ್ವ ಕೊಟ್ಟವರು ಉಡುಪಿ ಜಿಲ್ಲೆಗೂ ಹಲವು ಬಾರಿ ಆಗಮಿಸಿ ಮಾರ್ಗದರ್ಶನ ಮಾಡಿದ್ದರು ಅವರೊಬ್ಬ ದಣಿವರಿಯದ ಹೋರಾಟಗಾರ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಪಿಎಂ ಪಕ್ಷದ ತಾಲೂಕು ಕಾರ್ಯದರ್ಶಿ ಚಂದ್ರಶೇಖರ ವಿ ಪ್ರಾಸ್ತಾವಿಕ ಮಾತನಾಡಿ ಬಯ್ಯಾರೆಡ್ಡಿ ಅವರ ತಂದೆ ಚೌಡಪ್ಪ ಸ್ವಾತಂತ್ರ್ಯ ಹೋರಾಟಗಾರಾಗಿದ್ದರು. ತಂದೆಯ ಪ್ರಭಾವವು ವಿದ್ಯಾರ್ಥಿ ದಿಸೆಯಲ್ಲಿಯೇ ಬಯ್ಯಾರೆಡ್ಡಿ ಹೋರಾಟ ಮೈಗೂಡಿಸಿಕೊಂಡರು.

ವಿದ್ಯಾರ್ಥಿ ಬಸ್ ಪಾಸ್, ಶಾಶ್ವತ ನೀರಾವರಿ ಯೋಜನೆ ಮೊದಲಾದ ಹೋರಾಟಗಳಿಗೆ ನೇತ್ರತ್ವ ನೀಡಿದರು ರೈತರ ಭೂಸ್ವಾಧೀನ ವಿರೋಧಿ ಹೋರಾಟ ಸಾವಿರ ದಿನಗಳನ್ನು ಪೂರೈಸಿರುವುದು ಅವರೊಬ್ಬ ಸಮರಧೀರ ಹೋರಾಟಗಾರ ಎಂಬುದು ಸಾಬೀತಾಗಿದೆ ಅವರ ಅಕಾಲಿಕ ನಿಧನ ರೈತರ ಹೋರಾಟಗಳಿಗೆ ತುಂಬಲಾರದ ನಷ್ಟ ಎಂದು ಹೇಳಿದರು.

ಶ್ರದ್ಧಾಂಜಲಿ ಸಭೆ ಅಧ್ಯಕ್ಷತೆ ಸಿಪಿಎಂ ಹಿರಿಯ ಮುಖಂಡ ಕೆ ಶಂಕರ್ ವಹಿಸಿದ್ದರು, ವೇದಿಕೆಯಲ್ಲಿ ಸಿಪಿಎಂ ಪಕ್ಷದ ಹಿರಿಯ ಮುಖಂಡ ವಿ.ನರಸಿಂಹ ಉಪಸ್ಥಿತರಿದ್ದರು. ಆರಂಭದಲ್ಲಿ ಅಗಲಿದ ಸಂಗಾತಿಗೆ ಮೌನಾಚರಣೆ ಮಾಡಿ ಗೌರವ ಸಲ್ಲಿಸಲಾಯಿತು. ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ರವಿ ವಿ ಎಂ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...