ಚಿಕ್ಕಬಳ್ಳಾಪುರ | ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

Date:

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿದ್ಯಾರ್ಥಿ ನಿಲಯ ಮತ್ತು ವಸತಿ ಶಾಲೆ-ಕಾಲೇಜುಗಳ ಹೊರಗುತ್ತಿಗೆ ನೌಕರರು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಸರಕಾರದ ವಿವಿಧ ಇಲಾಖೆಗಳ ವಿದ್ಯಾರ್ಥಿ ನಿಲಯಗಳಲ್ಲಿ, ವಸತಿ ಶಾಲೆಗಳಲ್ಲಿ ಸುಮಾರು 15-20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿ, ಡೇಟಾ ಎಂಟ್ರಿ ಆಪರೇಟರ್‌ಗಳು, ಸಹಾಯಕರು, ಸ್ವಚ್ಛತಾ ಸಿಬ್ಬಂದಿ, ಕಾವಲುಗಾರರು ಸೇರಿದಂತೆ ವಿವಿಧ ಹೊರಗುತ್ತಿಗೆ ನೌಕರರಿಗೆ ಸೂಕ್ತ ಭದ್ರತೆ ಇಲ್ಲವಾಗಿದೆ ಎಂದು ದೂರಿದರು.

ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ನಿಲಯ ಪಾಲಕರು ಸೇರಿದಂತೆ ಅಧಿಕಾರಿ ವರ್ಗದವರು ಅಗೌರವಯುತವಾಗಿ ನಡೆಸಿಕೊಳ್ಳುತ್ತಿದ್ದಾರೆ. ಸಿಬ್ಬಂದಿ ಮೇಲೆ ಶೋಷಣೆ ಮಾಡಲಾಗುತ್ತಿದೆ ಎಂದು ಧಿಕ್ಕಾರ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನಿಯಪ್ಪ ಕೆ, ಸುಮಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರಿಗೆ ಸರಕಾರ ಕಡೆಗಣಿಸಿದೆ. ಅತೀ ಕಡಿಮೆ ವೇತನಕ್ಕೆ ದುಡಿಯುತ್ತಿರುವ ನಮಗೆ ಕನಿಷ್ಠ 31 ಸಾವಿರ ವೇತನ ನಿಗದಿಗೊಳಿಸಬೇಕು. ಅಲ್ಲದೇ ಖಾಸಗಿಯವರಿಗೆ ಗುತ್ತಿಗೆ ನೀಡದಂತೆ, ಇಲಾಖೆಯಿಂದಲೇ ನೇರವಾಗಿ ವೇತನ ಕೊಡಬೇಕು. ಕಾರ್ಮಿಕ ಕಾನೂನಿಯ ಅನ್ವಯ ವಾರಕ್ಕೊಂದು ರಜೆ, ಕೆಲಸ ಸಮಯ ನಿಗದಿಗೊಳಿಸಬೇಕು ಎಂದು ಮನವಿ ಮಾಡಿದರು.

ಗುತ್ತಿಗೆದಾರರು ಹೊರಗುತ್ತಿಗೆ ನೌಕರರಿಗೆ ನೇಮಕಾತಿ ಅಧೇಶ, ಸಂಬಳದ ಚೀಟಿ, ಗುರುತಿನ ಚೀಟಿ, ಅನುಭವ ಪ್ರಮಾಣ ಪತ್ರ, ಇಎಸ್‌ಐ, ಪಿಎಫ್‌ ಸಹ ಕೊಡಬೇಕು. ಬೀದರ್‌ ಜಿಲ್ಲೆಯ ಮಾದರಿಯಲ್ಲಿ ಕಾರ್ಮಿಕ ಸೇವೆಗಳ ವಿವಿದೋದ್ದೇಶ ಸಹಕಾರ ಸಂಘವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಜಮೀನು ಸರ್ವೆ ಮಾಡಲು ಬಂದ ಭೂಮಾಪಕರ ಮೇಲೆ ಹಲ್ಲೆ; ಕ್ರಮ ಕೈಗೊಳ್ಳಲು ಪೊಲೀಸರ ನಿರ್ಲಕ್ಷ್ಯ

ಸಿಐಟಿಯು ಮುಖಂಡ ಮುನಿಕೃಷ್ಣಪ್ಪ ಮಾತನಾಡಿ, ವಿವಿಧ ಇಲಾಖೆಗಳಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಸಂಖ್ಯೆ ಕಡಿತಗೊಳಿಸುವ ಆದೇಶವನ್ನು ರದ್ದುಗೊಳಿಸಬೇಕು. 50 ಜನ ವಿದ್ಯಾರ್ಥಿಗಳಿಗೆ ಮೂವರು ಸಿಬ್ಬಂದಿಗಳ ಹಿಂದಿನ ಪದ್ಧತಿಯನ್ನು ಮುಂದುವರಿಸಬೇಕು. ಪ್ರತೀ ತಿಂಗಳು 5ನೇ ತಾರೀಖು ವೇತನ ನೀಡಬೇಕು ಹಾಗೂ ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.

10 ವರ್ಷ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ನೌಕರರನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದಡಿ ತರಬೇಕು. ಬಿಸಿಎಂ ಇಲಾಖೆಯಲ್ಲಿ ಕೆಲಸ ಕಳೆದುಕೊಂಡಿರುವ ನೌಕರರನ್ನು ಮರು ನೇಮಕ ಮಾಡಬೇಕು. ಅಡುಗೆ ಸಿಬ್ಬಂದಿಯಿಂದ ಶೌಚಾಲಯ ಸ್ವಚ್ಛಗೊಳಿಸುವ ಕೆಲಸವನ್ನು ಮಾಡಿಸಬಾರದು. ನಿಲಯ ಪಾಲಕರು ವಸತಿ ನಿಲಯಗಳಿಗೆ ಅಗತ್ಯವಿರುವ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ಸೂಕ್ತ ಪ್ರಮಾಣದಲ್ಲಿ ಒದಗಿಸಬೇಕು. ನಿವೃತ್ತಿ ನಂತರ ನೌಕರರ ಜೀವನ ನಿರ್ವಹಣೆಗೆ 10 ಲಕ್ಷ ಪರಿಹಾರ ಕೊಡಬೇಕು ಎಂದು ಮನವಿ ಮಾಡಿದರು.

ಈ ಎಲ್ಲಾ ಬೇಡಿಕೆಗಳನ್ನು ಚರ್ಚಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಲಾಖೆಯ ಅಧಿಕಾರಿಗಳು ಒಳಗೊಂಡಂತೆ ಸಂಘದ ಮುಖಂಡರ ನೇತೃತ್ವದಲ್ಲಿ ಸಭೆಯನ್ನು ಕರೆಯಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ‘ರೋಹಿತ್‌ ಕಾಯ್ದೆ’ ಜಾರಿಗಾಗಿ ಆಗಬೇಕಿದೆ ‘ಜನಾಂದೋಲನ’

ಪ್ರತಿಭಟನೆಯಲ್ಲಿ ತಿಮ್ಮಣ್ಣ, ಮಂಜುನಾಥ್‌, ಭಾಗ್ಯಮ್ಮ, ಶಿವಪ್ಪ, ಮುದ್ದಪ್ಪ, ಬಿ ಎನ್‌ ವೆಂಕಟರಮಣ, ಶ್ರೀನಿವಾಸ್‌, ಸುನಿತಮ್ಮ, ತಬಸಮ್‌, ನಾರಯನಸ್ವಾಮಿ, ಪ್ರಸನ್ನಕುಮಾರ್‌, ಶಶಿಕಲಾ, ಪ್ರಮೀಳಮ್ಮ, ಪ್ರಮೀಳಾ, ಆಂಜಿನಪ್ಪ, ಕದುರಪ್ಪ, ಗೌರಮ್ಮ, ರಘುನಾಥ್‌, ನವೀನ್‌ ಕುಮಾರ್‌, ಶಿಲ್ಪಾ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...