ಉಡುಪಿ | ಕುಂದಾಪುರದಲ್ಲಿ ಅಚ್ಚುತಾನಂದನ್ ಶ್ರದ್ಧಾಂಜಲಿ ಸಭೆ

Date:

ಕೇರಳದ ಮಾಜಿ ಮುಖ್ಯಮಂತ್ರಿಗಳು ಹಿರಿಯ ಕಮ್ಯುನಿಸ್ಟ್ ನಾಯಕ ವಿ ಎಸ್ ಅಚ್ಚುತಾನಂದನ್ ಅವರಿಗೆ ಶುಕ್ರವಾರ ಕುಂದಾಪುರ ಹಂಚು ಕಾರ್ಮಿಕರ ಭವನದಲ್ಲಿ ಸಿಪಿಎಂ ಉಡುಪಿ ಜಿಲ್ಲಾ ಸಮಿತಿಯು ಶ್ರದ್ಧಾಂಜಲಿ ಸಭೆ ನಡೆಸಿತು.

ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ ಮಹಾಂತೇಶ್ ಅವರು ಮಾತನಾಡಿ, ಅಚ್ಚುತಾನಂದನ್ ಅವರು 102 ವರ್ಷ ಸಾರ್ಥಕ ಜೀವನ ನಡೆಸಿದವರು ಅದರಲ್ಲಿ ಅವರು 17 ವಯಸ್ಸಿನಿಂದ 85 ವರ್ಷಗಳ ವರೆಗೆ ಸಾರ್ವಜನಿಕರಿಗಾಗಿ ತಮ್ಮ ಬದುಕು ಮೀಸಲಿಟ್ಟು ಮಾದರಿಯಾಗಿದ್ದಾರೆ ಎಂದು ಹೇಳಿದರು.

ಬದುಕಿನುದ್ದಕ್ಕೂ ಶೋಷಿತರ ಪರವಾಗಿ ಹೋರಾಟ ನಡೆಸಿದ ಅವರು ಕಠಿಣ ಹಾದಿ ತುಳಿದು ಪುನ್ನಪ್ರ ವಲಯಾರ್ ಹೋರಾಟ ಅನಂತರ ತುರ್ತು ಪರಿಸ್ಥಿತಿ ಸಮಯದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಕ್ರೂರವಾಗಿ ಚಿತ್ರ ಹಿಂಸೆಗೆ ಒಳಗಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1980 ರಿಂದ 1991 ವರೆಗೆ ಸಿಪಿಎಂ ಪಕ್ಷದ ಕೇರಳ ರಾಜ್ಯ ಕಾರ್ಯದರ್ಶಿಯಾಗಿ 1985 ರಲ್ಲಿ ಪಾಲಿಟ್ ಬ್ಯುರೋ ಸದಸ್ಯರಾದರು 2006 ರಿಂದ 2011 ವರೆಗೆ ಕೇರಳದ ಮುಖ್ಯಮಂತ್ರಿ ಆಗಿ ಶೋಷಣೆಗೆ ಒಳಗಾದ ಜನರಿಗೆ ಹಲವು ಜನಪರ ಯೋಜನೆಗಳನ್ನು ತಂದು ಮಗುವಿನಿಂದ ವಯೋವ್ರದ್ದರೂ ಪ್ರೀತಿಸುವವರೆಗೆ ಜನಪ್ರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಒಬ್ಬ ಕಮ್ಯುನಿಸ್ಟ್ ಸಿದ್ದಾಂತಕ್ಕೆ ಅನುಗುಣವಾಗಿ ಸಮಾಜದಲ್ಲಿ ಹೇಗೆ ಬದುಕಬೇಕೆಂದು ತೋರಿಸಿದ್ದಾರೆ ಅವರ ದಾರಿಯಲ್ಲಿ ಪಕ್ಷದ ಸದಸ್ಯರು ಮುನ್ನಡೆಯಬೇಕು ಅವರ ಸಮತೆಯ ಸಮಾಜದ ಕನಸುಗಳಿಗಾಗಿ ಹೋರಾಟಗಳನ್ನು ಸಂಘಟಿಸುವುದೇ ಅಚ್ಚುತಾನಂದನ್ ಅವರಿಗೆ ಸಲ್ಲಿಸುವ ಶ್ರದ್ಧಾಂಜಲಿ ಎಂದು ಅವರು ಹೇಳಿದರು.

ಸಿಪಿಎಂ ಪಕ್ಷದ ಹಿರಿಯ ಮುಖಂಡರಾದ ಬಾಲಕೃಷ್ಣ ಶೆಟ್ಟಿ ಮಾತನಾಡಿದರು. ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಶಶಿಧರ ಗೊಲ್ಲ, ಚಂದ್ರಶೇಖರ ವಿ ಇದ್ದರು ಎಚ್ ನರಸಿಂಹ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...