ಕಾಂಗ್ರೆಸ್‌ ಸರ್ಕಾರಕ್ಕೆ ಗುಲಾಮಿ ಮನಸ್ಥಿತಿಯಿಂದ ಹೊರಬರಲು ಆಗುತ್ತಿಲ್ಲ: ಸಿ ಟಿ ರವಿ ಟೀಕೆ

Date:

  • ‘ರಾಜ್ಯ ಸರ್ಕಾರಕ್ಕೆ ಕಸ್ತೂರಿ ರಂಗನ್ ಬಗ್ಗೆ ವಿರೋಧ ಇರಬಹುದು’
  • ‘ಸರ್ಕಾರದ ನಡೆ ರಾಷ್ಟ್ರದ ಹಿತಕ್ಕೆ ಘಾತಕವಾಗುವ ಸಾಧ್ಯತೆಯಿದೆ’

ಯಾವ ಕಾರಣಕ್ಕಾಗಿ ಎನ್​ಇಪಿ ತಿರಸ್ಕರಿಸುತ್ತಿದ್ದೀರಿ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಸಮಗ್ರ ಶಿಕ್ಷಣ ನೀತಿಯನ್ನು ಅವರು ವಿರೋಧಿಸುತ್ತಾರೆ ಎಂದರೆ ಸರ್ಕಾರಕ್ಕೆ ಕಸ್ತೂರಿ ರಂಗನ್ ಅವರ ಬಗ್ಗೆ ವಿರೋಧ ಇರಬಹುದು ಎಂದು ಮಾಜಿ ಸಚಿವ ಸಿ ಟಿ ರವಿ ಹೇಳಿದರು.

ಚಿಕ್ಕಮಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಸರ್ಕಾರದ ಪ್ರಸ್ತುತ ನಡೆ ಗಮನಿಸುತ್ತಿದ್ದರೆ ಗುಲಾಮಿ ಮನಸ್ಥಿತಿಯಿಂದ ಹೊರಬರಲು ಸಿದ್ಧವಿಲ್ಲದಂತೆ ಕಾಣುತ್ತದೆ. ಮೆಕಾಲೆ ಹಾಗೂ ಕಾರ್ಲ್ ಮಾರ್ಕ್ಸ್​ ಪ್ರಭಾವವನ್ನೇ ಮುನ್ನಡೆಸಿಕೊಂಡು ಹೋಗುವಂತೆ ತೋರುತ್ತಿದೆ. ಸರ್ಕಾರದ ನಡೆ ರಾಷ್ಟ್ರದ ಹಿತಕ್ಕೆ ಘಾತಕವಾಗುವ ಸಾಧ್ಯತೆಯಿದೆ” ಎಂದು ಟೀಕಿಸಿದರು.

ಬಿಜೆಪಿ ನಾಯಕ ಎಸ್​​​ ಟಿ ಸೋಮಶೇಖರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ನನಗೆ ಗೊತ್ತಿದ್ದಂತೆ ಕಾಂಗ್ರೆಸ್​ಗೆ ಯಾರೂ ವಾಪಸ್ ಹೋಗುತ್ತಿಲ್ಲ. ಆದರೆ ಒಮ್ಮೆ ಅನುಮಾನ ಬಂದರೆ ಎಲ್ಲರನ್ನೂ ಅಪನಂಬಿಕೆಯಿಂದ ನೋಡಬೇಕಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

“ಡಿ ಕೆ ಶಿವಕುಮಾರ್ ಅವರು ಸೋಮಶೇಖರ್‌ ಅವರ ಗುರುವಾಗಿರಬಹುದು, ಅದರಲ್ಲೇನೂ ತಪ್ಪಿಲ್ಲ. ಯಾವುದೇ ಸಂಪರ್ಕವಿಲ್ಲದೆ ಅವರು ಹೀಗೆ ಹೇಳಲು ಸಾಧ್ಯವಿಲ್ಲ. ಒಂದೋ ಇವರಿಗೆ ಮಾಹಿತಿ ಇರಬೇಕು ಅಥವಾ ಯಾರೋ ಸಂಪರ್ಕದಲ್ಲಿರಬಹುದು” ಎಂದು ಹೇಳಿದರು.

“ಈಗಿನ ರಾಜಕೀಯ ಪರಿಸ್ಥಿತಿಯಲ್ಲಿ ಎಲ್ಲವೂ ಸರಿಯಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಸರಿಯಾಗಿದ್ದರೆ ಇವರ ವರ್ತನೆಯ ಕುರಿತು ಯಾರೂ ಪತ್ರ ಬರೆದು, ಶಾಸಕಾಂಗ ಸಭೆ ಕರೆಯುತ್ತಿರಲಿಲ್ಲ. ಆದ್ದರಿಂದ ಯಾರ ಮಾತನ್ನೂ ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...